• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!

Tulunadu News Posted On July 7, 2025
0


0
Shares
  • Share On Facebook
  • Tweet It

“ಉದಯಪುರ್ ಪೈಲ್ಸ್ – ಟೈಲರ್ ಕನ್ನಯ್ಯ ಲಾಲ್ ಹತ್ಯೆ” ಹೆಸರಿನ ಸಿನೆಮಾವೊಂದು ಇದೇ ಜುಲೈ 11 ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ನಟ ವಿಜಯ್ ರಾಜ್ ಈ ಸಿನೆಮಾದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಜಾಮಿಯತ್ ಉಲ್ಮಾ ಐ ಹಿಂದ್ ಇದರ ಅಧ್ಯಕ್ಷ ಹರ್ಷದ್ ಮದಾನಿ ಅವರು “ಉದಯಪುರ್ ಫೈಲ್ಸ್ – ಕನ್ನಯ್ಯ ಲಾಲ್ ಟೈಲರ್ ಮರ್ಡರ್” ಸಿನೆಮಾಕ್ಕೆ ತಡೆ ಕೋರಿ ನ್ಯಾಯಾಲಯಗಳಲ್ಲಿ ದಾವೆ ಹೂಡಲು ತಮ್ಮ ಮುಸ್ಲಿಂ ಸಂಘಟನೆಗೆ ಸೂಚಿಸಿದ ನಂತರ ಅನೇಕ ಹೈಕೋರ್ಟ್ ಗಳಲ್ಲಿ ತಡೆಯಾಜ್ಞೆ ಕೋರಿ ಪ್ರಕರಣ ದಾಖಲಾಗಿದೆ.

ಸಿನೆಮಾ ಉದಯಪುರದಲ್ಲಿ 2022, ಜೂನ್ 28ರಂದು ನಡೆದ ಟೈಲರ್ ಕನ್ನಯ್ಯ ಲಾಲ್ ಹತ್ಯೆಯ ಸುತ್ತ ಕಥಾಹಂದರವನ್ನು ಹೊಂದಿದೆ. ಮೂಲಭೂತವಾದಿಗಳಾದ ಮೊಹಮ್ಮದ್ ರಿಯಾಜ್ ಹಟ್ಟಾರಿ ಹಾಗೂ ಮೊಹಮ್ಮದ್ ಗೌವಾಸ್ ಇವರಿಬ್ಬರೂ ಸೇರಿ ಕನ್ನಯ್ಯಾ ಲಾಲ್ ಅವರನ್ನು ಕೊಂದಿದ್ದರು. ಕನ್ನಯ್ಯಾ ಲಾಲ್ ಅವರು ಭಾರತೀಯ ಜನತಾ ಪಾರ್ಟಿಯ ಮಾಜಿ ವಕ್ತಾರೆ ನುಪೂರ್ ಶರ್ಮಾ ಅವರ ಹೇಳಿಕೆಯೊಂದನ್ನು ಸಮರ್ಥಿಸಿದ ಕಾರಣಕ್ಕೆ ಹತ್ಯೆಗೊಳಗಾಗಿದ್ದರು.

ಜಮಿಯತ್ ಉಲ್ಮಾ ಐ ಹಿಂದ್ ದೆಹಲಿ, ಗುಜರಾತ್ ಹಾಗೂ ಮಹಾರಾಷ್ಟ್ರ ಉಚ್ಚ ನ್ಯಾಯಾಲಯಗಳ ಮೆಟ್ಟಲೇರಿದ್ದು ಉದಯಪುರ ಫೈಲ್ಸ್ – ಕನ್ನಯ್ಯ ಟೈಲರ್ ಮರ್ಡರ್ ಸಿನೆಮಾಗೆ ತಡೆ ನೀಡಬೇಕೆಂದು ಮನವಿ ಮಾಡಿದೆ. ” ಈ ಸಿನೆಮಾ ನೂಪುರ್ ಶರ್ಮಾ ಅವರ ಹೇಳಿಕೆಯ ಸುತ್ತಾ ಸುತ್ತುತ್ತಿದ್ದು, ಆ ಹೇಳಿಕೆಯಿಂದ ಆವತ್ತು ದೇಶದಲ್ಲಿ ಬೆಂಕಿ ಬಿದ್ದಿದೆ. ಅದರೊಂದಿಗೆ ನಮ್ಮ ದೇಶದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ಜಗತ್ತಿನ ರಾಷ್ಟ್ರಗಳ ಮುಂದೆ ನಮ್ಮ ವರ್ಚಸ್ಸು ಕುಂದುವುದನ್ನು ಮನಗಂಡ ಬಿಜೆಪಿ ಆಕೆಯನ್ನು ಪಕ್ಷದಿಂದ ಹೊರಗೆ ಹಾಕಿತ್ತು” ಎಂದು ಮದಾನಿ ಹೇಳಿದ್ದಾರೆ. ಈ ಸಿನೆಮಾ ಬಿಡುಗಡೆಯಾದರೆ ಮುಸ್ಲಿಮರಲ್ಲಿ ಆಕ್ರೋಶದ ಜ್ವಾಲೆ ಹೆಚ್ಚಾಗಿ ಅದರಿಂದ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಬಂದು ಸಮಸ್ಯೆ ಹೆಚ್ಚಾಗಬಹುದು ಎಂದು ಮದಾನಿ ಎಚ್ಚರಿಕೆ ಕೂಡ ನೀಡಿದ್ದಾರೆ.

ಇನ್ನು ಅರ್ಷದ್ ಮದಾನಿ ಮಾತನಾಡಿ ” ಈ ಸಿನೆಮಾ ಮುಸ್ಲಿಮರಲ್ಲಿ ದ್ವೇಷ ಬಿತ್ತಬಹುದು. ಇನ್ನು ಇದರಲ್ಲಿ ಗ್ಯಾನವ್ಯಾಪಿ ಮಸೀದಿಯ ಬಗ್ಗೆಯೂ ಕಥಾಹಂದರವಿದೆ. ಆದ್ದರಿಂದ ಈ ಸಿನೆಮಾ ಭಾರತೀಯ ಸಂವಿಧಾನದ ಆರ್ಟಿಕಲ್ 14, 15, 21 ರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಲಿದೆ” ಎಂದು ತಿಳಿಸಿದ್ದಾರೆ.

ಉದಯಪುರ ಫೈಲ್ಸ್ – ಕನ್ನಯ್ಯಾ ಲಾಲ್ ಟೈಲರ್ ಮರ್ಡರ್ ಸಿನೆಮಾ ಇದೇ ಜುಲೈ 11 ರಂದು ಸಿನೆಮಾ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಖ್ಯಾತ ಪೋಷಕ ನಟ ವಿಜಯ್ ರಾಜ್ ಅವರು ಕನ್ನಯ್ಯಾ ಲಾಲ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಭರತ್ ಎಸ್ ಶ್ರೀನಾಟೆ ಈ ಕಥೆಯನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಉದಯಪುರ ಟೈಲರ್ ಕನ್ನಯ್ಯಾ ಲಾಲ್ ಹತ್ಯೆ, ಗ್ಯಾನವ್ಯಾಪಿ ಮಸೀದಿ ಹಾಗೂ ಇತರ ವಿಷಯಗಳ ಸುತ್ತ ಈ ಸಿನೆಮಾ ಸುತ್ತುತ್ತಿದೆ. ಈ ಸಿನೆಮಾದ ನಿರ್ಮಾಪಕರಾಗಿ ಅಮಿತ್ ಜಾನಿಯವರು ಬಂಡವಾಳ ಹೂಡಿದರೆ ರಿಲಯನ್ಸ್ ಎಂಟರಟೇನಮೆಂಟ್ ಅವರು ಈ ಸಿನೆಮಾದ ಹಂಚಿಕೆದಾರರಾಗಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search