• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ…

Tulunadu News Posted On July 7, 2025
0


0
Shares
  • Share On Facebook
  • Tweet It

ಇಂಗ್ಲೆಂಡ್ ವಿರುದ್ಧ ಎಡ್ಜಬಾಸ್ಟನ್ ನಲ್ಲಿ ಅದ್ಭುತ ಪ್ರದರ್ಶನ ನೀಡಿ ಎರಡು ಇನ್ಸಿಂಗ್ಸ್ ನಲ್ಲಿ ಒಟ್ಟು 187 ರನ್ನಿಗೆ ಹತ್ತು ವಿಕೆಟ್ ಕಬಳಿಸಿ ಇಂಗ್ಲೆಂಡ್ ವಿರುದ್ಧ ಭಾರತೀಯನೊಬ್ಬನ ಅತ್ಯುತ್ತಮ ಪ್ರದರ್ಶನಕ್ಕೆ ಕಾರಣರಾಗಿರುವ ಆಕಾಶ್ ದೀಪ್ ಅವರ ವೈಯಕ್ತಿಕ ಬದುಕಿನ ಬಗ್ಗೆ ಗೊತ್ತಾದರೆ ನಿಜಕ್ಕೂ ಹೃದಯಭಾರವಾಗುತ್ತದೆ. ಭಾರತೀಯ ಕ್ರಿಕೆಟಿನ ಉದಯೋನ್ಮುಖ ಬೌಲರ್ ಆಗಿ ಹೊರಹೊಮ್ಮಿರುವ ಆಕಾಶ್ ದೀಪ್ ಅವರು ತಮ್ಮ ಈ ಐತಿಹಾಸಿಕ ಪ್ರದರ್ಶನವನ್ನು ಸಹೋದರಿ ಅಖಂಡ್ ಜ್ಯೋತಿ ಸಿಂಗ್ ಅವರಿಗೆ ಸಮರ್ಪಿಸಿದರು. ಜ್ಯೋತಿ ಅವರ ಯಾತನಾಮಯ ಬದುಕು ಮತ್ತು ಅವರ ಸಹೋದರ ಆಕಾಶ್ ದೀಪ್ ಅವರಿಗೆ ಸಹೋದರಿ ಜೊತೆಗಿನ ಬಾಂಧವ್ಯ ನಿಜಕ್ಕೂ ಅಣ್ಣ-ತಂಗಿಯ ಪ್ರೀತಿಯನ್ನು ಎತ್ತಿ ತೋರಿಸುತ್ತದೆ.

ಒಂದು ಟಿವಿ ಸಂದರ್ಶನದಲ್ಲಿ ಜ್ಯೋತಿಯವರು ಸಹೋದರ ಇಂಗ್ಲೆಂಡಿನಲ್ಲಿ ಆಡಲು ಹೊರಟು ನಿಂತಾಗ ಅವನಿಗೆ ಹೇಳಿದ್ದರಂತೆ ” ನಾನು ಆರಾಮವಾಗಿದ್ದೇನೆ. ನೀನು ನನ್ನ ಬಗ್ಗೆ ಏನೂ ಚಿಂತಿಸಬೇಡಾ. ದೇಶಕ್ಕಾಗಿ ಉತ್ತಮವಾಗಿ ಆಡು”. ಜ್ಯೋತಿಯವರು ಪ್ರಸ್ತುತ ಕ್ಯಾನ್ಸರ್ ಮಹಾಮಾರಿಯ ಮೂರನೇ ಸ್ಟೇಜಿನಲ್ಲಿ ಇದ್ದಾರೆ. ಅವರ ಚಿಕಿತ್ಸೆ ಇನ್ನು ಆರು ತಿಂಗಳು ನಡೆಯಲಿದೆ. ಅವರು ಈಗಲೂ ಹಸನ್ಮುಖಿಯಾಗಿಯೇ ಇರುತ್ತಾರೆ ಮತ್ತು ಸಹೋದರ ಪ್ರತಿ ಬಾರಿ ವಿಕೆಟ್ ಪಡೆದಾಗ ಎಷ್ಟು ಜೋರಾಗಿ ಸಂಭ್ರಮಿಸುತ್ತಾರೆ ಎಂದರೆ ಅಕ್ಕಪಕ್ಕದವರು ಇವರ ಮನೆಯಲ್ಲಿ ಏನಾಯಿತು ಎಂದು ಕೇಳುವಷ್ಟು.

ಆಕಾಶ್ ದೀಪ್ ಗೆದ್ದ ಬಳಿಕ ತನ್ನ ಸಾಧನೆಯನ್ನು ಸಹೋದರಿಗೆ ಅರ್ಪಿಸಿ ತಾನು ಪ್ರತಿ ಚೆಂಡು ಎಸೆಯುವಾಗಲೂ ಅವಳ ಮುಖ ನನ್ನ ಎದುರಿಗೆ ಬರುತ್ತಿತ್ತು ಎಂದು ಹೇಳುತ್ತಾ ಅವಳು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವುದನ್ನು ಬಹಿರಂಗಪಡಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಜ್ಯೋತಿ ” ಆತ ಹೀಗೆ ಹೇಳುತ್ತಾನೆ ಎಂದರೆ ನಾವು ಯಾವತ್ತೂ ಅಂದುಕೊಂಡಿರಲಿಲ್ಲ. ನನ್ನ ಕಾಯಿಲೆಯ ಬಗ್ಗೆ ನಾವು ಎಂದೂ ಬಹಿರಂಗಪಡಿಸಿರಲಿಲ್ಲ. ಆದರೆ ಅವನ ಪ್ರೀತಿ ಮತ್ತು ಭ್ರಾತೃತ್ವ ಬಹಳ ದೊಡ್ಡದು. ಅವನ ಮಾತುಗಳು ಆತ ನನ್ನನ್ನು ಮತ್ತು ಕುಟುಂಬವನ್ನು ಎಷ್ಟು ಪ್ರೀತಿಸುತ್ತಾನೆ ಎಂದು ಗೊತ್ತಾಗುತ್ತದೆ” ಎಂದು ಹೇಳಿದ್ದಾರೆ.

ಜ್ಯೋತಿ ಹಾಗೂ ಆಕಾಶ್ ದೀಪ್ ಈಗಾಗಲೇ ತಮ್ಮ ತಂದೆ ಹಾಗೂ ಹಿರಿಯ ಅಣ್ಣನನ್ನು ಕಳೆದುಕೊಂಡಿದ್ದಾರೆ. ” ಇಂತಹ ಸಹೋದರ ಯಾರಿಗಾದರೂ ಸಿಗುವುದು ಅವರ ಅದೃಷ್ಟ. ಯಾವುದೇ ಕೆಲಸಕ್ಕೆ ಮುಂದಾಗುವಾಗ ನಮ್ಮನ್ನು ಭೇಟಿ ಮಾಡಿ ಸಮಾಲೋಚಿಸಿಯೇ ಆತ ನಿರ್ಧಾರ ತೆಗೆದುಕೊಳ್ಳುತ್ತಾನೆ” ಎಂದು ಹೇಳಿದ್ದಾರೆ. ಒಂದು ಸಲ ಆಕಾಶ್ ದೀಪ್ ಮಾತನಾಡುವಾಗ ತನ್ನ ಬಳಿ ಏನು ಇದೆಯೋ ಅದು ನನ್ನ ಸಹೋದರಿ ಹಾಗೂ ಕುಟುಂಬಕ್ಕೆ ಸಮರ್ಪಿತ ಎಂದು ಹೇಳಿದ್ದನ್ನು ಆಕೆ ಬಹಳ ಖುಷಿಯಿಂದ ಹೇಳಿಕೊಳ್ಳುತ್ತಾರೆ.

ಸದ್ಯ ಆಕಾಶ್ ದೀಪ್ ಅವರು ಸರಣಿ ಮುಗಿಸಿ ಇಂಗ್ಲೆಂಡಿನಿಂದ ಹಿಂದಕ್ಕೆ ಬರುವುದನ್ನು ತಂಗಿ ಜ್ಯೋತಿ ಕಾಯುತ್ತಿದ್ದಾರೆ. ಆಕಾಶ್ ದೀಪ ಅವರು ನನ್ನ ಕೈಯಿಂದ ತಯಾರಿಸಿದ ತಿಂಡಿಯನ್ನು ತಿನ್ನಲು ಇಷ್ಟಪಡುತ್ತಾರೆ. ಅವರಿಗೆ ನನ್ನ ಕೈಯಿಂದ ತಯಾರಿಸಿದ ದಹಿವಡಾ ಹಾಗೂ ತರಕಾರಿಯಿಂದ ತಯಾರಿಸಿದ ಪಲ್ಯ ಇಷ್ಟ. ಅವರು ಮನೆಗೆ ಬರುವುದನ್ನು ಕಾಯುತ್ತಿದ್ದೇನೆ. ಅದನ್ನೇ ತಯಾರಿಸಿ ಕೊಡಲು ಕಾಯುತ್ತಿದ್ದೇನೆ” ಎಂದು ಹೇಳಿದ್ದಾರೆ. ಆಕಾಶ್ ದೀಪ ಅವರು ಇಲ್ಲಿಯ ತನಕ ಎಂಟು ಟೆಸ್ಟ್ ನಿಂದ 25 ವಿಕೆಟ್ ಪಡೆದಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search