• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

Tulunadu News Posted On July 8, 2025
0


0
Shares
  • Share On Facebook
  • Tweet It

ಈ ವರ್ಷದ ಫೆಬ್ರವರಿ ತಿಂಗಳಿನಿಂದಲೇ ಹಣ ಬಾಕಿ ಇದೆ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್ ಗಳ ಸಂಘ ಮತ್ತು ಚಿಲ್ಲರೆ ಸಾರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ. ಆರ್. ಷಣ್ಮುಗಪ್ಪ ಹೇಳಿದ್ದಾರೆ.

ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭವಾಗಿದ್ದು, ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿರುವ 260 ಕೋಟಿ ರೂ ಹಣವನ್ನು ಬಿಡುಗಡೆ ಮಾಡುವಂತೆ ಸಂಘಟನೆ ಒತ್ತಾಯಿಸಿದೆ. ಉಚಿತ ವಿತರಣೆಗಾಗಿ ಅಕ್ಕಿ ಸಾಗಿಸುವ ಲಾರಿಗಳ ಮುಷ್ಕರದಿಂದ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ತೊಂದರೆಯಾಗುವ ಸಾಧ್ಯತೆ ಇದೆ. ಫೆಬ್ರವರಿಯಿಂದಲೇ ಹಣ ಪಾವತಿಸಲಾಗಿಲ್ಲದೇ ಇರುವುದರಿಂದ ಮುಷ್ಕರ ಅನಿವಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್ ಗಳ ಸಂಘ ಮತ್ತು ಚಿಲ್ಲರೆ ಸಾರಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಿ. ಆರ್. ಷಣ್ಮುಗಪ್ಪ ಹೇಳಿದ್ದಾರೆ.

ಜೂನ್ 19 ರಂದು ಸಿಎಂ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜುಲೈ 5 ರ ಮೊದಲು ಟ್ರಕ್ ಮಾಲೀಕರ ಬಾಕಿ ಹಣವನ್ನು ಪಾವತಿಸುವುದಾಗಿ ಭರವಸೆ ನೀಡಿದ್ದರು. ಆದರೆ ಬಾಕಿಗಳು ದಿನನಿತ್ಯ ಬೆಳೆಯುತ್ತಿವೆ ಹೊರತು ಸರಕಾರ ಪಾವತಿ ಮಾಡುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಫೆಬ್ರವರಿಯಿಂದ ಜೂನ್ ವರೆಗೆ ಸುಮಾರು 260 ಕೋಟಿ ರೂಗಳು ಬರಬೇಕಾಗಿರುವುದರಿಂದ ಲಾರಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಅವರು ಸಾರಿಗೆ ವೆಚ್ಚವನ್ನು ಭರಿಸಲು ಸಾಲಸೋಲ ಮಾಡಿರುವುದರಿಂದ ಅವರಿಗೆ ಜೀವನ ಸಾಗಿಸುವುದೇ ಸವಾಲಾಗಿದೆ ಎಂದು ಷಣ್ಮುಗಪ್ಪ ಮಾಹಿತಿ ನೀಡಿದ್ದಾರೆ.
ಸರಕಾರದ ಈ ನಡೆಯಿಂದ ಲಾರಿ ಮಾಲೀಕರು ಸಾಲದ ಕಂತುಗಳನ್ನು ತಿಂಗಳು ತಿಂಗಳು ಪಾವತಿಸಲು ಕಷ್ಟಪಡುತ್ತಿದ್ದಾರೆ. ಇದರಿಂದ ಸಾಲ ನೀಡಿದ ಹಣಕಾಸು ಕಂಪೆನಿಗಳು ವಾಹನಗಳನ್ನೇ ವಶಪಡಿಸಿಕೊಳ್ಳಲು ಪ್ರಾರಂಭಿಸಿವೆ. ಇದು ಸುಮಾರು 4000 ಲಾರಿಗಳ ಮೇಲೆ ಪರಿಣಾಮ ಬೀರಿದೆ ಎಂದು ಷಣ್ಮುಗಪ್ಪ ಮಾಹಿತಿ ನೀಡಿದ್ದಾರೆ.

ತಾನು ಯಾವುದೇ ರಾಜಕೀಯ ಪಕ್ಷದವನ್ನಲ್ಲ. ಈ ವಿಷಯವನ್ನು ರಾಜಕೀಯಗೊಳಿಸುತ್ತಿಲ್ಲ ಎಂದು ಅವರು ಹೇಳಿದರು. ನಾನು ಟ್ರಕ್ ಮಾಲೀಕರ ಜೊತೆಗಿದ್ದೇನೆ. ಅವರ ಬಾಕಿ ಬಿಡುಗಡೆ ಆಗುವವರೆಗೆ ಟ್ರಕ್ ಗಳು ಅಕ್ಕಿಯನ್ನು ಸಾಗಿಸುವುದಿಲ್ಲ ಎಂದು ಷಣ್ಮುಗಪ್ಪ ಹೇಳಿದರು. ಷಣ್ಮುಗಪ್ಪ ಅವರು ನೈಜ ಕಳಕಳಿಯಿಂದ ಈ ನಿರ್ಧಾರ ಕೈಗೊಂಡಿರಬಹುದು. ಆದರೆ ಇದರಿಂದ ಅನ್ನಭಾಗ್ಯದ ಅಕ್ಕಿ ಸಾಗಾಟಕ್ಕೆ ತೊಂದರೆ ಆಗಲಿದೆ. ಅದರೊಂದಿಗೆ ವಿಪಕ್ಷಗಳಿಗೆ ಸರಕಾರದ ವಿರುದ್ಧ ಮತ್ತೊಂದು ಅಸ್ತ್ರ ಸಿಗಲಿದೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search