• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!

Tulunadu News Posted On July 9, 2025
0


0
Shares
  • Share On Facebook
  • Tweet It

ಉದಯಪುರ ಫೈಲ್ಸ್ – ಕನ್ನಯ್ಯ ಲಾಲ್ ಟೈಲರ್ ಮರ್ಡರ್ ಎನ್ನುವ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ವಿಷಯದಲ್ಲಿ ತುರ್ತಾಗಿ ವಿಚಾರಣೆ ಮಾಡಬೇಕು ಎನ್ನುವ ಅರ್ಜಿದಾರರ ಮನವಿಯನ್ನು ತಳ್ಳಿಹಾಕಿದೆ. ಟೈಲರ್ ಕನ್ನಯ್ಯಲಾಲ್ ಕೊಲೆ ಪ್ರಕರಣದಲ್ಲಿ ಓರ್ವ ಆರೋಪಿಯಾಗಿರುವ ಮೊಹಮ್ಮದ್ ಜಾವೆದ್ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟಿನ ರಜಾಕಾಲದ ಪೀಠದ ಎದುರು ಮನವಿ ಸಲ್ಲಿಸಿದ್ದರು. ರಜಾಕಾಲದ ಪೀಠದ ನ್ಯಾಯಾಮೂರ್ತಿಗಳಾದ ಸುಧಾಂಶು ಧೂಳಿಯಾ ಹಾಗೂ ಜೊಯಮಾಲ್ಯ ಭಾಗಚಿ ಅವರಿದ್ದ ನ್ಯಾಯಪೀಠ ಸುಪ್ರೀಂಕೋರ್ಟ್ ನ ನಿತ್ಯ ಪೀಠ ಜುಲೈ 14 ರಂದು ಆರಂಭವಾದಾಗ ಮನವಿ ಸಲ್ಲಿಸಲು ಸೂಚಿಸಿತು.

ಆದರೆ ಸಿನೆಮಾ ಜುಲೈ 11 ರಂದು ಬಿಡುಗಡೆಯಾಗಲಿದ್ದು, ನ್ಯಾಯಪೀಠ ಜುಲೈ 14 ಕ್ಕೆ ತೆರೆಯಲಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದಾಗ ನ್ಯಾಯಾಲಯ ಸಿನೆಮಾ ಬಿಡುಗಡೆಯಾಗಲಿ ಎಂದು ಹೇಳಿದೆ. “ಸಿನೆಮಾ ಈ ಶುಕ್ರವಾರ ಬಿಡುಗಡೆಯಾಗಲಿದೆ. ಟ್ರೈಲರ್ ಜುಲೈ 4 ರಂದು ಬಿಡುಗಡೆಯಾಗಿದೆ. ಅವರು ಸಿನೆಮಾದಲ್ಲಿ ಕಾನೂನು ಕ್ರಮದ ಬಗ್ಗೆ ತೋರಿಸಿದ್ದಾರೆ” ಎಂದು ಆರೋಪಿ ಪರ ವಕೀಲರು ಹೇಳಿದಾಗ ” ನ್ಯಾಯಾಲಯದ ಮುಂದೆ ಅದರ ಬಿಡುಗಡೆಯ ನಂತರದ ವಿಷಯಗಳ ಬಗ್ಗೆ ಹೇಳಿ. ಸಿನೆಮಾ ಅದರ ನಿಗದಿತ ಅವಧಿಯಲ್ಲಿ ಬಿಡುಗಡೆಯಾಗಲಿ” ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.
ಅದಕ್ಕೆ ಅರ್ಜಿದಾರರ ಪರ ವಕೀಲರು ” ಸಿನೆಮಾವನ್ನು ನೈಜ ಘಟನೆಯ ಮೇಲೆ ಆಧಾರಿತ ಸಿನೆಮಾ ಎಂದು ಬಿಂಬಿಸಲಾಗಿದೆ. ಆದ್ದರಿಂದ ಸಿನೆಮಾದ ಪರಿಣಾಮ ಕೇಸಿನ ಮೇಲೆ ಆಗುತ್ತದೆ. ಇನ್ನು ಸಿನೆಮಾದಲ್ಲಿ ತೋರಿಸಲಾಗಿರುವ ಘಟನೆಗಳು ವಾಸ್ತವದಲ್ಲಿ ನಡೆದ ಇಲ್ಲ” ಎಂದು ಹೇಳಿದರು. ಇನ್ನು ಈ ಸಿನೆಮಾದಲ್ಲಿ ತೋರಿಸಲಾಗಿರುವ ವಿಷಯದ ಬಗ್ಗೆ ವಿಚಾರಣೆ ನಡೆಯುತ್ತಿದೆ. ಇನ್ನು ನ್ಯಾಯಾಲಯದಿಂದ ಅಂತಿಮ ತೀರ್ಪು ಬಂದಿಲ್ಲ. ಹೀಗಿರುವಾಗ ಯಾವುದೇ ಅನುಮಾನಗಳಿಲ್ಲದೇ ಇಬ್ಬರೂ ಹತ್ಯಾ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ನೀಡುವ ಸಾಧ್ಯತೆ ಇದೆ” ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದರು.

ಈಗಾಗಲೇ ಮೂಲಭೂತವಾದಿ ಸಂಘಟನೆ ಜಮಿಯತ್ ಉಲಾಮಾ ಐ ಹಿಂದ್ ದೆಹಲಿ ಹೈಕೋರ್ಟ್ ನಲ್ಲಿ ಸಿನೆಮಾಗೆ ತಡೆಯಾಜ್ಞೆ ಕೋರಿ ಸಲ್ಲಿಸಿರುವ ಮನವಿ ಇನ್ನು ವಿಚಾರಣೆಗೆ ಬಾಕಿ ಇದೆ.

ಜೂನ್ 22 ರಂದು ಟೈಲರ್ ಕನ್ನಯ್ಯಾ ಲಾಲ್ ಅವರನ್ನು ಇಬ್ಬರು ಮೂಲಭೂತವಾದಿಗಳು ಅವರದ್ದೇ ಅಂಗಡಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದರು. ಆರೋಪಿಗಳನ್ನು ಮೊಹಮ್ಮದ್ ರಿಯಾಝ್ ಅಖ್ತರ್ ಹಾಗೂ ಮೊಹಮದ್ ಗೋಸ್ ಎಂದು ಗುರುತಿಸಲಾಗಿದೆ. ಕನ್ನಯ್ಯಲಾಲ್ ಬಿಜೆಪಿಯ ಆಗಿನ ವಕ್ತಾರೆ ನುಪೂರ್ ಶರ್ಮಾ ಅವರ ಹೇಳಿಕೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಸಮರ್ಥಿಸಿದ್ದರು ಎನ್ನುವ ಕಾರಣಕ್ಕೆ ಹತ್ಯೆ ಮಾಡಲಾಗಿತ್ತು. ಕನ್ನಯ್ಯಾ ಲಾಲ್ ಅವರಿಗೆ ಜೀವ ಬೆದರಿಕೆ ಇದ್ದರೂ ಅವರಿಗೆ ಪೊಲೀಸ್ ರಕ್ಷಣೆ ನೀಡಿರಲಿಲ್ಲ ಎನ್ನುವ ಮಾತುಗಳು ಕೂಡ ಕೇಳಿಬಂದಿವೆ. ಒಟ್ಟಿನಲ್ಲಿ ಸದ್ಯ ಸಿನೆಮಾ ಬಿಡುಗಡೆಗೆ ಸಿದ್ಧವಾಗಿದ್ದು, ಜನ ಅದನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search