• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ… ಪುತ್ತೂರಿನಲ್ಲಿ ಹೆಚ್ಚಿದ ಕಳವು!

Tulunadu News Posted On July 10, 2025
0


0
Shares
  • Share On Facebook
  • Tweet It

ತೆಂಗಿನ ಕಾಯಿ ದರ ಸದ್ಯ ಆಕಾಶದತ್ತ ಮುಖ ಮಾಡಿದೆ. ಜನಸಾಮಾನ್ಯರು ತೆಂಗಿನ ಕಾಯಿಯನ್ನು ಖರೀದಿಸಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಇದೆ. ಈ ಪರಿಸ್ಥಿತಿಯಲ್ಲಿ ಕಳ್ಳರು ತೆಂಗಿನಕಾಯಿ ಕಳ್ಳತನಕ್ಕೆ ಇಳಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪರಿಸರದ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬನ್ನೂರು ಗ್ರಾಮದ ಅಲುಂಬುಡ ಎಂಬಲ್ಲಿ ತೋಟವೊಂದರಲ್ಲಿ ತೆಂಗಿನಕಾಯಿ ಕದಿಯುತ್ತಿದ್ದ ವ್ಯಕ್ತಿಯನ್ನು ಊರವರು ಹಿಡಿದು ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಿಂದ ಬನ್ನೂರು ಪರಿಸರದಲ್ಲಿ ತೋಟಗಳಿಂದ ತೆಂಗಿನಕಾಯಿ ಮತ್ತು ಅಡಕೆ ಕಳುವಾಗುತ್ತಿರುವುದು ಮಾಲೀಕರ ಗಮನಕ್ಕೆ ಬರುತ್ತಿತ್ತು. ಪ್ರತಿ ಮನೆಯ ಮಂದಿ ರಾತ್ರಿ ತೋಟ ಕಾವಲು ಕಾಯುವ ಕೆಲಸ ಮಾಡುತ್ತಿದ್ದರು.

ಮೊನ್ನೆ ರಾತ್ರಿ ಬನ್ನೂರು ಅಲುಂಬುಡ ರಾಜೇಶ್ ಎಂಬುವರ ತೋಟದಲ್ಲಿ ತೆಂಗಿನ ಮರದಿಂದ ತೆಂಗಿನ ಕಾಯಿ ಬೀಳುತ್ತಿರುವ ಶಬ್ದ ಕೇಳಿ ರಾಜೇಶ್ ಸಹೋದರರು ತೆಂಗಿನ ಮರದ ಬಳಿ ಹೋದಾಗ ಮರದ ಕೆಳಗೆ ನಿಂತಿದ್ದವನನ್ನು ಹಿಡಿದಾಗ ಅವನು ತಪ್ಪಿಸಿಕೊಂಡು ಪರಾರಿಯಾಗಿದ್ದ. ನಂತರ ಮರದ ಮೇಲಿದ್ದ ವ್ಯಕ್ತಿಯನ್ನು ಕೆಳಗೆ ಇಳಿಸಿ ನಂತರ ಅವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ತೆಂಗಿನಕಾಯಿ ದರ ಹೀಗೆ ಗಗನಮುಖಿ ಆದರೆ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳತನ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ತೆಂಗಿನ ಮರಗಳಿರುವ ತೋಟಗಳ ಮಾಲೀಕರು ತಮ್ಮ ಒಡೆತನದ ಮರಗಳನ್ನು ಕಾವಲು ಕಾಯುವ ಪರಿಸ್ಥಿತಿ ಇದೆ. ತೆಂಗಿನ ಕಾಯಿ ದರ ವಿಪರೀತ ಹೆಚ್ಚಳವಾಗಿರುವುದರಿಂದ ತೆಂಗಿನ ಕಾಯಿ ಎಣ್ಣೆಯ ದರವೂ ಹೆಚ್ಚಳವಾಗಿದೆ. ಆಹಾರ ವಸ್ತುಗಳನ್ನು ತಯಾರಿಸಲು ಜನರು ತೆಂಗಿನ ಎಣ್ಣೆ, ತೆಂಗಿನ ಕಾಯಿಯ ಮೇಲೆ ಅವಲಂಬಿತರಾಗಿದ್ದಲ್ಲಿ ಅವರ ಜೇಬು ಹಗುರವಾಗುವುದರಲ್ಲಿ ಸಂಶಯವಿಲ್ಲ. ಸದ್ಯಕ್ಕೆ ಎಲ್ಲಾ ಕಡೆ ತೆಂಗಿನ ಕಾಯಿಯ ದರದ್ದೇ ಚಿಂತೆಯಾಗಿದೆ. ಜನರು ದೇವಸ್ಥಾನಗಳಲ್ಲಿ ಹಣ್ಣು, ಕಾಯಿ ನೀಡುವಾಗಲೂ ಹೆಚ್ಚಿನ ದರ ನೀಡಿ ಅದನ್ನು ಖರೀದಿಸಬೇಕಾಗಿದೆ. ಆಹಾರ ತಯಾರಿಕೆಯಿಂದ ಹಿಡಿದು ದೇವರಿಗೆ ಅರ್ಪಿಸುವ ತನಕ ಎಲ್ಲಾ ಕಡೆ ತೆಂಗಿನ ಕಾಯಿ ಬಹಳ ಪ್ರಮುಖ ವಸ್ತುವಾಗಿರುವುದರಿಂದ ಅದರ ಬೆಲೆ ಹೆಚ್ಚಿದರೆ ಜನಸಾಮಾನ್ಯರಿಗೆ ಚಿಂತೆ ಖಚಿತ.

 

0
Shares
  • Share On Facebook
  • Tweet It




Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search