• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ… ಪುತ್ತೂರಿನಲ್ಲಿ ಹೆಚ್ಚಿದ ಕಳವು!

Tulunadu News Posted On July 10, 2025
0


0
Shares
  • Share On Facebook
  • Tweet It

ತೆಂಗಿನ ಕಾಯಿ ದರ ಸದ್ಯ ಆಕಾಶದತ್ತ ಮುಖ ಮಾಡಿದೆ. ಜನಸಾಮಾನ್ಯರು ತೆಂಗಿನ ಕಾಯಿಯನ್ನು ಖರೀದಿಸಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಇದೆ. ಈ ಪರಿಸ್ಥಿತಿಯಲ್ಲಿ ಕಳ್ಳರು ತೆಂಗಿನಕಾಯಿ ಕಳ್ಳತನಕ್ಕೆ ಇಳಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪರಿಸರದ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬನ್ನೂರು ಗ್ರಾಮದ ಅಲುಂಬುಡ ಎಂಬಲ್ಲಿ ತೋಟವೊಂದರಲ್ಲಿ ತೆಂಗಿನಕಾಯಿ ಕದಿಯುತ್ತಿದ್ದ ವ್ಯಕ್ತಿಯನ್ನು ಊರವರು ಹಿಡಿದು ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಿಂದ ಬನ್ನೂರು ಪರಿಸರದಲ್ಲಿ ತೋಟಗಳಿಂದ ತೆಂಗಿನಕಾಯಿ ಮತ್ತು ಅಡಕೆ ಕಳುವಾಗುತ್ತಿರುವುದು ಮಾಲೀಕರ ಗಮನಕ್ಕೆ ಬರುತ್ತಿತ್ತು. ಪ್ರತಿ ಮನೆಯ ಮಂದಿ ರಾತ್ರಿ ತೋಟ ಕಾವಲು ಕಾಯುವ ಕೆಲಸ ಮಾಡುತ್ತಿದ್ದರು.

ಮೊನ್ನೆ ರಾತ್ರಿ ಬನ್ನೂರು ಅಲುಂಬುಡ ರಾಜೇಶ್ ಎಂಬುವರ ತೋಟದಲ್ಲಿ ತೆಂಗಿನ ಮರದಿಂದ ತೆಂಗಿನ ಕಾಯಿ ಬೀಳುತ್ತಿರುವ ಶಬ್ದ ಕೇಳಿ ರಾಜೇಶ್ ಸಹೋದರರು ತೆಂಗಿನ ಮರದ ಬಳಿ ಹೋದಾಗ ಮರದ ಕೆಳಗೆ ನಿಂತಿದ್ದವನನ್ನು ಹಿಡಿದಾಗ ಅವನು ತಪ್ಪಿಸಿಕೊಂಡು ಪರಾರಿಯಾಗಿದ್ದ. ನಂತರ ಮರದ ಮೇಲಿದ್ದ ವ್ಯಕ್ತಿಯನ್ನು ಕೆಳಗೆ ಇಳಿಸಿ ನಂತರ ಅವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ತೆಂಗಿನಕಾಯಿ ದರ ಹೀಗೆ ಗಗನಮುಖಿ ಆದರೆ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳತನ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ತೆಂಗಿನ ಮರಗಳಿರುವ ತೋಟಗಳ ಮಾಲೀಕರು ತಮ್ಮ ಒಡೆತನದ ಮರಗಳನ್ನು ಕಾವಲು ಕಾಯುವ ಪರಿಸ್ಥಿತಿ ಇದೆ. ತೆಂಗಿನ ಕಾಯಿ ದರ ವಿಪರೀತ ಹೆಚ್ಚಳವಾಗಿರುವುದರಿಂದ ತೆಂಗಿನ ಕಾಯಿ ಎಣ್ಣೆಯ ದರವೂ ಹೆಚ್ಚಳವಾಗಿದೆ. ಆಹಾರ ವಸ್ತುಗಳನ್ನು ತಯಾರಿಸಲು ಜನರು ತೆಂಗಿನ ಎಣ್ಣೆ, ತೆಂಗಿನ ಕಾಯಿಯ ಮೇಲೆ ಅವಲಂಬಿತರಾಗಿದ್ದಲ್ಲಿ ಅವರ ಜೇಬು ಹಗುರವಾಗುವುದರಲ್ಲಿ ಸಂಶಯವಿಲ್ಲ. ಸದ್ಯಕ್ಕೆ ಎಲ್ಲಾ ಕಡೆ ತೆಂಗಿನ ಕಾಯಿಯ ದರದ್ದೇ ಚಿಂತೆಯಾಗಿದೆ. ಜನರು ದೇವಸ್ಥಾನಗಳಲ್ಲಿ ಹಣ್ಣು, ಕಾಯಿ ನೀಡುವಾಗಲೂ ಹೆಚ್ಚಿನ ದರ ನೀಡಿ ಅದನ್ನು ಖರೀದಿಸಬೇಕಾಗಿದೆ. ಆಹಾರ ತಯಾರಿಕೆಯಿಂದ ಹಿಡಿದು ದೇವರಿಗೆ ಅರ್ಪಿಸುವ ತನಕ ಎಲ್ಲಾ ಕಡೆ ತೆಂಗಿನ ಕಾಯಿ ಬಹಳ ಪ್ರಮುಖ ವಸ್ತುವಾಗಿರುವುದರಿಂದ ಅದರ ಬೆಲೆ ಹೆಚ್ಚಿದರೆ ಜನಸಾಮಾನ್ಯರಿಗೆ ಚಿಂತೆ ಖಚಿತ.

 

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search