• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ… ಪುತ್ತೂರಿನಲ್ಲಿ ಹೆಚ್ಚಿದ ಕಳವು!

Tulunadu News Posted On July 10, 2025
0


0
Shares
  • Share On Facebook
  • Tweet It

ತೆಂಗಿನ ಕಾಯಿ ದರ ಸದ್ಯ ಆಕಾಶದತ್ತ ಮುಖ ಮಾಡಿದೆ. ಜನಸಾಮಾನ್ಯರು ತೆಂಗಿನ ಕಾಯಿಯನ್ನು ಖರೀದಿಸಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಇದೆ. ಈ ಪರಿಸ್ಥಿತಿಯಲ್ಲಿ ಕಳ್ಳರು ತೆಂಗಿನಕಾಯಿ ಕಳ್ಳತನಕ್ಕೆ ಇಳಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪರಿಸರದ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬನ್ನೂರು ಗ್ರಾಮದ ಅಲುಂಬುಡ ಎಂಬಲ್ಲಿ ತೋಟವೊಂದರಲ್ಲಿ ತೆಂಗಿನಕಾಯಿ ಕದಿಯುತ್ತಿದ್ದ ವ್ಯಕ್ತಿಯನ್ನು ಊರವರು ಹಿಡಿದು ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಿಂದ ಬನ್ನೂರು ಪರಿಸರದಲ್ಲಿ ತೋಟಗಳಿಂದ ತೆಂಗಿನಕಾಯಿ ಮತ್ತು ಅಡಕೆ ಕಳುವಾಗುತ್ತಿರುವುದು ಮಾಲೀಕರ ಗಮನಕ್ಕೆ ಬರುತ್ತಿತ್ತು. ಪ್ರತಿ ಮನೆಯ ಮಂದಿ ರಾತ್ರಿ ತೋಟ ಕಾವಲು ಕಾಯುವ ಕೆಲಸ ಮಾಡುತ್ತಿದ್ದರು.

ಮೊನ್ನೆ ರಾತ್ರಿ ಬನ್ನೂರು ಅಲುಂಬುಡ ರಾಜೇಶ್ ಎಂಬುವರ ತೋಟದಲ್ಲಿ ತೆಂಗಿನ ಮರದಿಂದ ತೆಂಗಿನ ಕಾಯಿ ಬೀಳುತ್ತಿರುವ ಶಬ್ದ ಕೇಳಿ ರಾಜೇಶ್ ಸಹೋದರರು ತೆಂಗಿನ ಮರದ ಬಳಿ ಹೋದಾಗ ಮರದ ಕೆಳಗೆ ನಿಂತಿದ್ದವನನ್ನು ಹಿಡಿದಾಗ ಅವನು ತಪ್ಪಿಸಿಕೊಂಡು ಪರಾರಿಯಾಗಿದ್ದ. ನಂತರ ಮರದ ಮೇಲಿದ್ದ ವ್ಯಕ್ತಿಯನ್ನು ಕೆಳಗೆ ಇಳಿಸಿ ನಂತರ ಅವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ತೆಂಗಿನಕಾಯಿ ದರ ಹೀಗೆ ಗಗನಮುಖಿ ಆದರೆ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳತನ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ತೆಂಗಿನ ಮರಗಳಿರುವ ತೋಟಗಳ ಮಾಲೀಕರು ತಮ್ಮ ಒಡೆತನದ ಮರಗಳನ್ನು ಕಾವಲು ಕಾಯುವ ಪರಿಸ್ಥಿತಿ ಇದೆ. ತೆಂಗಿನ ಕಾಯಿ ದರ ವಿಪರೀತ ಹೆಚ್ಚಳವಾಗಿರುವುದರಿಂದ ತೆಂಗಿನ ಕಾಯಿ ಎಣ್ಣೆಯ ದರವೂ ಹೆಚ್ಚಳವಾಗಿದೆ. ಆಹಾರ ವಸ್ತುಗಳನ್ನು ತಯಾರಿಸಲು ಜನರು ತೆಂಗಿನ ಎಣ್ಣೆ, ತೆಂಗಿನ ಕಾಯಿಯ ಮೇಲೆ ಅವಲಂಬಿತರಾಗಿದ್ದಲ್ಲಿ ಅವರ ಜೇಬು ಹಗುರವಾಗುವುದರಲ್ಲಿ ಸಂಶಯವಿಲ್ಲ. ಸದ್ಯಕ್ಕೆ ಎಲ್ಲಾ ಕಡೆ ತೆಂಗಿನ ಕಾಯಿಯ ದರದ್ದೇ ಚಿಂತೆಯಾಗಿದೆ. ಜನರು ದೇವಸ್ಥಾನಗಳಲ್ಲಿ ಹಣ್ಣು, ಕಾಯಿ ನೀಡುವಾಗಲೂ ಹೆಚ್ಚಿನ ದರ ನೀಡಿ ಅದನ್ನು ಖರೀದಿಸಬೇಕಾಗಿದೆ. ಆಹಾರ ತಯಾರಿಕೆಯಿಂದ ಹಿಡಿದು ದೇವರಿಗೆ ಅರ್ಪಿಸುವ ತನಕ ಎಲ್ಲಾ ಕಡೆ ತೆಂಗಿನ ಕಾಯಿ ಬಹಳ ಪ್ರಮುಖ ವಸ್ತುವಾಗಿರುವುದರಿಂದ ಅದರ ಬೆಲೆ ಹೆಚ್ಚಿದರೆ ಜನಸಾಮಾನ್ಯರಿಗೆ ಚಿಂತೆ ಖಚಿತ.

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search