• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ… ಪುತ್ತೂರಿನಲ್ಲಿ ಹೆಚ್ಚಿದ ಕಳವು!

Tulunadu News Posted On July 10, 2025
0


0
Shares
  • Share On Facebook
  • Tweet It

ತೆಂಗಿನ ಕಾಯಿ ದರ ಸದ್ಯ ಆಕಾಶದತ್ತ ಮುಖ ಮಾಡಿದೆ. ಜನಸಾಮಾನ್ಯರು ತೆಂಗಿನ ಕಾಯಿಯನ್ನು ಖರೀದಿಸಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಇದೆ. ಈ ಪರಿಸ್ಥಿತಿಯಲ್ಲಿ ಕಳ್ಳರು ತೆಂಗಿನಕಾಯಿ ಕಳ್ಳತನಕ್ಕೆ ಇಳಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪರಿಸರದ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬನ್ನೂರು ಗ್ರಾಮದ ಅಲುಂಬುಡ ಎಂಬಲ್ಲಿ ತೋಟವೊಂದರಲ್ಲಿ ತೆಂಗಿನಕಾಯಿ ಕದಿಯುತ್ತಿದ್ದ ವ್ಯಕ್ತಿಯನ್ನು ಊರವರು ಹಿಡಿದು ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಿಂದ ಬನ್ನೂರು ಪರಿಸರದಲ್ಲಿ ತೋಟಗಳಿಂದ ತೆಂಗಿನಕಾಯಿ ಮತ್ತು ಅಡಕೆ ಕಳುವಾಗುತ್ತಿರುವುದು ಮಾಲೀಕರ ಗಮನಕ್ಕೆ ಬರುತ್ತಿತ್ತು. ಪ್ರತಿ ಮನೆಯ ಮಂದಿ ರಾತ್ರಿ ತೋಟ ಕಾವಲು ಕಾಯುವ ಕೆಲಸ ಮಾಡುತ್ತಿದ್ದರು.

ಮೊನ್ನೆ ರಾತ್ರಿ ಬನ್ನೂರು ಅಲುಂಬುಡ ರಾಜೇಶ್ ಎಂಬುವರ ತೋಟದಲ್ಲಿ ತೆಂಗಿನ ಮರದಿಂದ ತೆಂಗಿನ ಕಾಯಿ ಬೀಳುತ್ತಿರುವ ಶಬ್ದ ಕೇಳಿ ರಾಜೇಶ್ ಸಹೋದರರು ತೆಂಗಿನ ಮರದ ಬಳಿ ಹೋದಾಗ ಮರದ ಕೆಳಗೆ ನಿಂತಿದ್ದವನನ್ನು ಹಿಡಿದಾಗ ಅವನು ತಪ್ಪಿಸಿಕೊಂಡು ಪರಾರಿಯಾಗಿದ್ದ. ನಂತರ ಮರದ ಮೇಲಿದ್ದ ವ್ಯಕ್ತಿಯನ್ನು ಕೆಳಗೆ ಇಳಿಸಿ ನಂತರ ಅವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ತೆಂಗಿನಕಾಯಿ ದರ ಹೀಗೆ ಗಗನಮುಖಿ ಆದರೆ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳತನ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ತೆಂಗಿನ ಮರಗಳಿರುವ ತೋಟಗಳ ಮಾಲೀಕರು ತಮ್ಮ ಒಡೆತನದ ಮರಗಳನ್ನು ಕಾವಲು ಕಾಯುವ ಪರಿಸ್ಥಿತಿ ಇದೆ. ತೆಂಗಿನ ಕಾಯಿ ದರ ವಿಪರೀತ ಹೆಚ್ಚಳವಾಗಿರುವುದರಿಂದ ತೆಂಗಿನ ಕಾಯಿ ಎಣ್ಣೆಯ ದರವೂ ಹೆಚ್ಚಳವಾಗಿದೆ. ಆಹಾರ ವಸ್ತುಗಳನ್ನು ತಯಾರಿಸಲು ಜನರು ತೆಂಗಿನ ಎಣ್ಣೆ, ತೆಂಗಿನ ಕಾಯಿಯ ಮೇಲೆ ಅವಲಂಬಿತರಾಗಿದ್ದಲ್ಲಿ ಅವರ ಜೇಬು ಹಗುರವಾಗುವುದರಲ್ಲಿ ಸಂಶಯವಿಲ್ಲ. ಸದ್ಯಕ್ಕೆ ಎಲ್ಲಾ ಕಡೆ ತೆಂಗಿನ ಕಾಯಿಯ ದರದ್ದೇ ಚಿಂತೆಯಾಗಿದೆ. ಜನರು ದೇವಸ್ಥಾನಗಳಲ್ಲಿ ಹಣ್ಣು, ಕಾಯಿ ನೀಡುವಾಗಲೂ ಹೆಚ್ಚಿನ ದರ ನೀಡಿ ಅದನ್ನು ಖರೀದಿಸಬೇಕಾಗಿದೆ. ಆಹಾರ ತಯಾರಿಕೆಯಿಂದ ಹಿಡಿದು ದೇವರಿಗೆ ಅರ್ಪಿಸುವ ತನಕ ಎಲ್ಲಾ ಕಡೆ ತೆಂಗಿನ ಕಾಯಿ ಬಹಳ ಪ್ರಮುಖ ವಸ್ತುವಾಗಿರುವುದರಿಂದ ಅದರ ಬೆಲೆ ಹೆಚ್ಚಿದರೆ ಜನಸಾಮಾನ್ಯರಿಗೆ ಚಿಂತೆ ಖಚಿತ.

 

0
Shares
  • Share On Facebook
  • Tweet It




Trending Now
ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
Tulunadu News August 2, 2025
ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
Tulunadu News August 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
  • Popular Posts

    • 1
      ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • 2
      ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 3
      2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • 4
      ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • 5
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!

  • Privacy Policy
  • Contact
© Tulunadu Infomedia.

Press enter/return to begin your search