• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ… ಪುತ್ತೂರಿನಲ್ಲಿ ಹೆಚ್ಚಿದ ಕಳವು!

Tulunadu News Posted On July 10, 2025
0


0
Shares
  • Share On Facebook
  • Tweet It

ತೆಂಗಿನ ಕಾಯಿ ದರ ಸದ್ಯ ಆಕಾಶದತ್ತ ಮುಖ ಮಾಡಿದೆ. ಜನಸಾಮಾನ್ಯರು ತೆಂಗಿನ ಕಾಯಿಯನ್ನು ಖರೀದಿಸಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಇದೆ. ಈ ಪರಿಸ್ಥಿತಿಯಲ್ಲಿ ಕಳ್ಳರು ತೆಂಗಿನಕಾಯಿ ಕಳ್ಳತನಕ್ಕೆ ಇಳಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪರಿಸರದ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳರ ಹಾವಳಿ ಹೆಚ್ಚಾಗಿದೆ. ಬನ್ನೂರು ಗ್ರಾಮದ ಅಲುಂಬುಡ ಎಂಬಲ್ಲಿ ತೋಟವೊಂದರಲ್ಲಿ ತೆಂಗಿನಕಾಯಿ ಕದಿಯುತ್ತಿದ್ದ ವ್ಯಕ್ತಿಯನ್ನು ಊರವರು ಹಿಡಿದು ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ. ಕಳೆದ ಕೆಲವು ವಾರಗಳಿಂದ ಬನ್ನೂರು ಪರಿಸರದಲ್ಲಿ ತೋಟಗಳಿಂದ ತೆಂಗಿನಕಾಯಿ ಮತ್ತು ಅಡಕೆ ಕಳುವಾಗುತ್ತಿರುವುದು ಮಾಲೀಕರ ಗಮನಕ್ಕೆ ಬರುತ್ತಿತ್ತು. ಪ್ರತಿ ಮನೆಯ ಮಂದಿ ರಾತ್ರಿ ತೋಟ ಕಾವಲು ಕಾಯುವ ಕೆಲಸ ಮಾಡುತ್ತಿದ್ದರು.

ಮೊನ್ನೆ ರಾತ್ರಿ ಬನ್ನೂರು ಅಲುಂಬುಡ ರಾಜೇಶ್ ಎಂಬುವರ ತೋಟದಲ್ಲಿ ತೆಂಗಿನ ಮರದಿಂದ ತೆಂಗಿನ ಕಾಯಿ ಬೀಳುತ್ತಿರುವ ಶಬ್ದ ಕೇಳಿ ರಾಜೇಶ್ ಸಹೋದರರು ತೆಂಗಿನ ಮರದ ಬಳಿ ಹೋದಾಗ ಮರದ ಕೆಳಗೆ ನಿಂತಿದ್ದವನನ್ನು ಹಿಡಿದಾಗ ಅವನು ತಪ್ಪಿಸಿಕೊಂಡು ಪರಾರಿಯಾಗಿದ್ದ. ನಂತರ ಮರದ ಮೇಲಿದ್ದ ವ್ಯಕ್ತಿಯನ್ನು ಕೆಳಗೆ ಇಳಿಸಿ ನಂತರ ಅವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

ತೆಂಗಿನಕಾಯಿ ದರ ಹೀಗೆ ಗಗನಮುಖಿ ಆದರೆ ತೋಟಗಳಲ್ಲಿ ತೆಂಗಿನ ಕಾಯಿ ಕಳ್ಳತನ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ತೆಂಗಿನ ಮರಗಳಿರುವ ತೋಟಗಳ ಮಾಲೀಕರು ತಮ್ಮ ಒಡೆತನದ ಮರಗಳನ್ನು ಕಾವಲು ಕಾಯುವ ಪರಿಸ್ಥಿತಿ ಇದೆ. ತೆಂಗಿನ ಕಾಯಿ ದರ ವಿಪರೀತ ಹೆಚ್ಚಳವಾಗಿರುವುದರಿಂದ ತೆಂಗಿನ ಕಾಯಿ ಎಣ್ಣೆಯ ದರವೂ ಹೆಚ್ಚಳವಾಗಿದೆ. ಆಹಾರ ವಸ್ತುಗಳನ್ನು ತಯಾರಿಸಲು ಜನರು ತೆಂಗಿನ ಎಣ್ಣೆ, ತೆಂಗಿನ ಕಾಯಿಯ ಮೇಲೆ ಅವಲಂಬಿತರಾಗಿದ್ದಲ್ಲಿ ಅವರ ಜೇಬು ಹಗುರವಾಗುವುದರಲ್ಲಿ ಸಂಶಯವಿಲ್ಲ. ಸದ್ಯಕ್ಕೆ ಎಲ್ಲಾ ಕಡೆ ತೆಂಗಿನ ಕಾಯಿಯ ದರದ್ದೇ ಚಿಂತೆಯಾಗಿದೆ. ಜನರು ದೇವಸ್ಥಾನಗಳಲ್ಲಿ ಹಣ್ಣು, ಕಾಯಿ ನೀಡುವಾಗಲೂ ಹೆಚ್ಚಿನ ದರ ನೀಡಿ ಅದನ್ನು ಖರೀದಿಸಬೇಕಾಗಿದೆ. ಆಹಾರ ತಯಾರಿಕೆಯಿಂದ ಹಿಡಿದು ದೇವರಿಗೆ ಅರ್ಪಿಸುವ ತನಕ ಎಲ್ಲಾ ಕಡೆ ತೆಂಗಿನ ಕಾಯಿ ಬಹಳ ಪ್ರಮುಖ ವಸ್ತುವಾಗಿರುವುದರಿಂದ ಅದರ ಬೆಲೆ ಹೆಚ್ಚಿದರೆ ಜನಸಾಮಾನ್ಯರಿಗೆ ಚಿಂತೆ ಖಚಿತ.

 

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search