• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!

Tulunadu News Posted On July 14, 2025
0


0
Shares
  • Share On Facebook
  • Tweet It

ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಗಳಲ್ಲಿ ಪ್ರಮುಖವಾಗಿರುವ ಕರ್ಣಾಟಕ ಬ್ಯಾಂಕ್ ರಾಘವೇಂದ್ರ ಶ್ರೀನಿವಾಸ್ ಭಟ್ ಅವರನ್ನು ಮೂರು ತಿಂಗಳ ಅವಧಿಗೆ ಮಧ್ಯಂತರ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಘೋಷಿಸಿದೆ. ಮಾಜಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣನ್ ಹರಿಹರ ಶರ್ಮಾ ಜೂನ್ 29 ರಂದು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದರು.

ಮೂರು ದಶಕಗಳಿಗಿಂತಲೂ ಹೆಚ್ಚು ಕಾಲ ಬ್ಯಾಂಕಿನ ಬೇರೆ ಬೇರೆ ಸ್ತರಗಳಲ್ಲಿ ಕೆಲಸ ಮಾಡಿ ಅನುಭವ ಇರುವ ರಾಘವೇಂದ್ರ ಶ್ರೀನಿವಾಸ್ ಭಟ್ ಅವರನ್ನು ಕಳೆದ ತಿಂಗಳು ಸಿಒಒ ಆಗಿ ನೇಮಿಸಲಾಗಿತ್ತು. ಈಗ ರಾಘವೇಂದ್ರ ಶ್ರೀನಿವಾಸ್ ಭಟ್ ಅವರನ್ನು ಮಧ್ಯಂತರ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ನೇಮಿಸಿದೆ. ಈ ಹಿಂದೆ ಮುಖ್ಯ ಕಾರ್ಯಾಚರಣಾ ಅಧಿಕಾರಿಯಾಗಿದ್ದ ಭಟ್ ಅವರು ಮೂರು ತಿಂಗಳ ಕಾಲ ಈ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ. ಶರ್ಮಾ ಅವರ ನಿರ್ಗಮನವು ಬ್ಯಾಂಕಿನ ಷೇರು ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರಿತ್ತು.

ಭಟ್ ಅವರು 1981 ರಲ್ಲಿ ಕರ್ಣಾಟಕ ಬ್ಯಾಂಕಿನಲ್ಲಿ ಗುಮಾಸ್ತರಾಗಿ ಕೆಲಸ ಆರಂಭಿಸಿದ್ದರು. ಅವರು ಬ್ಯಾಂಕಿನೊಂದಿಗೆ 38 ವರ್ಷಗಳ ಸುರ್ಧೀರ್ಘ ಕಾಲದ ಸಂಬಂಧ ಹೊಂದಿದ್ದಾರೆ. 2019 ರಲ್ಲಿ ಅವರು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಆಗಿದ್ದರು.
ಇನ್ನು ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಅವರು ಮಂಗಳೂರಿಗೆ ಸ್ಥಳಾಂತರಗೊಳ್ಳಲು ಇಚ್ಚಿಸದೇ ಮತ್ತು ಇತರ ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ಮಂಡಳಿಯು ಅಂಗೀಕರಿಸಿದೆ. ಅದು ಜುಲೈ 31 ರಿಂದ ಜಾರಿಗೆ ಬರಲಿದೆ. ಪೂರ್ಣಾವಧಿ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಲು ಬ್ಯಾಂಕ್ ಶೋಧ ಸಮಿತಿಯನ್ನು ರಚಿಸಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 5
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!

  • Privacy Policy
  • Contact
© Tulunadu Infomedia.

Press enter/return to begin your search