• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!

Tulunadu News Posted On July 14, 2025
0


0
Shares
  • Share On Facebook
  • Tweet It

ಕಾಂತಾರಾ ಮೂಲಕ ದೇಶ, ವಿದೇಶದಲ್ಲಿ ತುಳುಮಣ್ಣಿನ ಸಂಸ್ಕೃತಿ, ನಂಬಿಕೆ, ಸಂಪ್ರದಾಯವನ್ನು ಪಸರಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರಿಗೆ ಈಗಾಗಲೇ ಬಾಲಿವುಡ್ ನಿರ್ದೇಶಕರಿಂದ ದೊಡ್ಡ ದೊಡ್ಡ ಆಫರ್ ಗಳು ಬರುತ್ತಿರುವ ವಿಷಯ ನಿಮಗೆ ಗೊತ್ತೇ ಇದೆ. ಆ ಸಾಲಿಗೆ ಈಗ ಲಗಾನ್, ಜೋಧಾ ಅಕ್ಬರ್ ನಂತಹ ದೊಡ್ಡ ಸ್ಟಾರ್ ಗಳ ಸಿನೆಮಾ ನಿರ್ದೇಶಿಸಿರುವ ಅಶುತೋಷ್ ಗೌವಾರೀಕರ್ ಕೂಡ ಸೇರಿದ್ದಾರೆ. ಸಾಮಾನ್ಯವಾಗಿ ಇತಿಹಾಸದ ಅವಿಸ್ಮರಣೀಯ ಕಥೆಗಳನ್ನೇ ಬೆಳ್ಳಿತೆರೆಗೆ ಅಳವಡಿಸುವಲ್ಲಿ ಅಶುತೋಷ್ ಸಿದ್ಧಹಸ್ತರು. ಅವರು ವಿಜಯನಗರದ ಸಾಮ್ರಾಜ್ಯದ ಚಕ್ರವರ್ತಿ ಶ್ರೀ ಕೃಷ್ಣದೇವರಾಯ ಅವರ ಜೀವನಚರಿತ್ರೆಯನ್ನು ಇಟ್ಟುಕೊಂಡು ಕಥೆ ಸಿದ್ಧಪಡಿಸಿದ್ದಾರೆ. ಅವರ ತಂಡ ಈಗಾಗಲೇ ಈ ಬಗ್ಗೆ ಸಂಶೋಧನೆ ನಡೆಸಿ ಚಿತ್ರಕಥೆಯನ್ನು ರಚಿಸುತ್ತಾ ಇದೆ.

ಓರ್ವ ಚಕ್ರವರ್ತಿಯನ್ನು ತೆರೆಯ ಮೇಲೆ ಹೇಗೆ ತೋರಿಸಬೇಕು ಎನ್ನುವ ಸಂಪೂರ್ಣ ಕಲ್ಪನೆ ಅಶುತೋಷ್ ಅವರಿಗೆ ಇರುವುದರಿಂದ ಈ ಸಿನೆಮಾದ ಒಟ್ಟು ಬಜೆಟ್ ಕೂಡ ದೊಡ್ಡದಾಗಿಯೇ ಇರಲಿದೆ. ವಿಜಯನಗರ ಸಾಮ್ರಾಜ್ಯದಲ್ಲಿ ಚಿನ್ನ, ವಜ್ರಗಳು ರಸ್ತೆ ಬದಿಯಲ್ಲಿ ಮಾರಾಟ ಮಾಡುತ್ತಿದ್ದರು ಎನ್ನುವಾಗಲೇ ಆ ಅವಧಿಯ ಶ್ರೀಮಂತಿಕೆಯನ್ನು ನಾವು ಅರ್ಥ ಮಾಡಿಕೊಳ್ಳಬಹುದು. ಹಾಗಿರುವಾಗ ಚಕ್ರವರ್ತಿಯ ಆಸ್ಥಾನ ಹೇಗಿರಬೇಡಾ. ಆತನ ಮಂತ್ರಿಮಂಡಲ ಹೇಗಿರಬೇಡಾ, ಸೈನ್ಯ ಹೇಗಿರಬೇಡಾ. 16 ನೇ ಶತಮಾನದಲ್ಲಿ ಕರ್ನಾಟಕ ಮಾತ್ರವಲ್ಲ, ದಕ್ಷಿಣ ಭಾರತವನ್ನು ಅಕ್ಷರಶ: ಆಳಿದ್ದ ಶ್ರೀ ಕೃಷ್ಣ ದೇವರಾಯನ ವ್ಯಕ್ತಿತ್ವವನ್ನು ಸಿನೆಮಾವಾಗಿ ತರುವುದೇ ದೊಡ್ಡ ಸಾಹಸ.

ಈ ಸಿನೆಮಾವನ್ನು ವಿಷ್ಣುವರ್ಧನ್ ಇಂದೂರಿ ನಿರ್ಮಿಸಲಿದ್ದಾರೆ. ಅವರು ಈ ಮೊದಲು ತಲೈವಿ ಹಾಗೂ ಕಪಿಲ್ ದೇವ್ ಜೀವನ ಚರಿತ್ರೆ 83 ನಿರ್ಮಿಸಿದ್ದಾರೆ. ಈ ಸಿನೆಮಾದಲ್ಲಿ ದಕ್ಷಿಣ ಭಾರತ ಹಾಗೂ ಹಿಂದಿ ಚಿತ್ರರಂಗದ ಖ್ಯಾತನಾಮರು ನಟಿಸಲಿದ್ದಾರೆ. ಎರಡು ವರ್ಷಗಳಿಂದ ಈ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಕೊನೆಗೂ ಸಿನೆಮಾ ಸೆಟ್ಟೇರಲು ಸಜ್ಜಾಗಿದೆ. ಕಾಂತಾರ ಪಾರ್ಟ್ 1 ನಂತರ, ಜೈ ಹನುಮಾನ್, ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಶ್ರೀ ಕೃಷ್ಣ ದೇವರಾಯದಲ್ಲಿ ನಟಿಸುವ ಮೂಲಕ ರಿಷಬ್ ಮತ್ತೊಮ್ಮೆ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ತಮ್ಮ ಚರಿಶ್ಮಾ ಮುಂದುವರೆಸಲಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search