• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ

Tulunadu News Posted On July 15, 2025
0


0
Shares
  • Share On Facebook
  • Tweet It

ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಹಿಂದೂ – ಮುಸ್ಲಿಂ ಮಧ್ಯೆ ದ್ವೇಷದ ವಿಷ ಬಿತ್ತುವ ರೀತಿ ಪ್ರಚೋದನಕಾರಿ ಬರಹ ಬರೆದ ಪ್ರಕರಣ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ.

ಮೇ 7 ರಂದು ಸಂಜೆ 7 ಗಂಟೆಗೆ ಹಾಸ್ಟೆಲ್ ಮೊದಲ ಮಹಡಿಯ ಶೌಚಾಲಯದಲ್ಲಿ ಗೋಡೆಯ ಮೇಲೆ ಅಶ್ಲೀಲ ಪದಗಳನ್ನು ಬಳಸಿ ಪ್ರಚೋದನಕಾರಿ ಬರಹ ಬರೆಯಲಾಗಿತ್ತು. ಹಾಸ್ಟೆಲ್ ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿದ್ದಾರೆಂದು ನಂಬಲಾಗಿತ್ತು. ಈ ಬಗ್ಗೆ ನಿಟ್ಟೆ ಕಾಲೇಜಿನ ಮಹಿಳಾ ಹಾಸ್ಟೆಲ್ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದರು. ಎಫ್ ಐ ಆರ್ ದಾಖಲಿಸಿದ ಪೊಲೀಸರು ತನಿಖೆಗೆ ಮುಂದಾಗಿದ್ದರು. ಭಾರತ – ಪಾಕ್ ಸಂಘರ್ಷದ ಸಂದರ್ಭದಲ್ಲಿ ಬರೆಯಲಾಗಿದ್ದ ಪ್ರಚೋದನಕಾರಿ ಬರಹದ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ್ದರು. ಆದರೆ ಸರಿಯಾದ ಸಾಕ್ಷ್ಯ ಸಿಕ್ಕಿರಲಿಲ್ಲ. ಬರೆದಿದ್ದದ್ದು ಪೆನ್ಸಿಲ್ ನಿಂದ ಆದ ಕಾರಣ ತನಿಖೆಗೆ ಇಷ್ಟು ದಿನ ಬೇಕಾಗಿದ್ದಿರಬಹುದು. ಆಕೆ ಬರೆದಿರುವ ವಿಷಯ ಮನಸ್ಸಿಗೆ ಘಾಸಿ ಮಾಡುವಂತೆ ಇರುವುದರಿಂದ ಇಲ್ಲಿ ಹೇಳುವುದು ಸೂಕ್ತವೆನಿಸುತ್ತಿಲ್ಲ. ಆದ್ದರಿಂದ ನಾವು ಆ ವಾಕ್ಯಗಳನ್ನು ಇಲ್ಲಿ ಬರೆಯುತ್ತಿಲ್ಲ.

ಇದೀಗ ಕೈಬರಹದ ಹೋಲಿಕೆ ಆಧರಿಸಿ ಪೊಲೀಸರು ಆರೋಪಿ ವಿದ್ಯಾರ್ಥಿನಿಯನ್ನು ಆರೆಸ್ಟ್ ಮಾಡಿದ್ದಾರೆ. ಪೊಲೀಸರು ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿ ಫಾತಿಮಾ ಶಬ್ನಾ (21) ಎಂಬಾಕೆಯನ್ನು ಬಂಧಿಸಿದ್ದು, ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆಕೆಯ ಉದ್ದೇಶ ಏನಿರಬಹುದು ಎಂದು ಕೂಡ ಇಲ್ಲಿ ನೋಡಬೇಕಿದೆ. ಯಾಕೆಂದರೆ ಭಾರತದಲ್ಲಿ ಕುಳಿತು ಇಲ್ಲಿ ಜಲ, ಗಾಳಿ, ಆಹಾರ ಸೇವಿಸಿ ಇಲ್ಲಿನ ನೆಲಕ್ಕೆ ದ್ರೋಹ ಬಗೆಯುವ ಮನಸ್ಥಿತಿ ಈ ದೇಶದ ಕೆಲವರಲ್ಲಿದೆ. ಕೇರಳದ ಕೆಲವು ಮೂಲೆಗಳಲ್ಲಿ ಕುಳಿತುಕೊಂಡು ಅಲ್ಲಿನ ಯುವ ಜನಾಂಗದ ತಲೆಕೆಡಿಸುವ ಕೆಲಸವನ್ನು ಮೂಲಭೂತವಾದಿಗಳು ಮಾಡುತ್ತಿದ್ದಾರೆ. ಈ ಬಂಧಿತ ಯುವತಿಯ ಹಿಂದೆ ಅಂತಹ ಜಾಲ ಇದೆಯಾ ಎಂದುಕೊಡ ನೋಡಬೇಕಿದೆ. ಆ ಮೂಲಕ್ಕೆ ಹೋದರೆ ಪೊಲೀಸರಿಗೆ ಇನ್ನಷ್ಟು ದೇಶದ್ರೋಹಿಗಳ ಸುಳಿವು ಸಿಗಬಹುದು.

0
Shares
  • Share On Facebook
  • Tweet It




Trending Now
ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
Tulunadu News August 23, 2025
'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
Tulunadu News August 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
  • Popular Posts

    • 1
      ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 2
      'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • 3
      ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • 4
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 5
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!

  • Privacy Policy
  • Contact
© Tulunadu Infomedia.

Press enter/return to begin your search