• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ

Tulunadu News Posted On July 15, 2025
0


0
Shares
  • Share On Facebook
  • Tweet It

ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮಹಿಳಾ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಹಿಂದೂ – ಮುಸ್ಲಿಂ ಮಧ್ಯೆ ದ್ವೇಷದ ವಿಷ ಬಿತ್ತುವ ರೀತಿ ಪ್ರಚೋದನಕಾರಿ ಬರಹ ಬರೆದ ಪ್ರಕರಣ ಸಂಬಂಧಿಸಿ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಕೇರಳದ ಕಾಸರಗೋಡು ಮೂಲದ ವಿದ್ಯಾರ್ಥಿನಿಯನ್ನು ಬಂಧಿಸಿದ್ದಾರೆ.

ಮೇ 7 ರಂದು ಸಂಜೆ 7 ಗಂಟೆಗೆ ಹಾಸ್ಟೆಲ್ ಮೊದಲ ಮಹಡಿಯ ಶೌಚಾಲಯದಲ್ಲಿ ಗೋಡೆಯ ಮೇಲೆ ಅಶ್ಲೀಲ ಪದಗಳನ್ನು ಬಳಸಿ ಪ್ರಚೋದನಕಾರಿ ಬರಹ ಬರೆಯಲಾಗಿತ್ತು. ಹಾಸ್ಟೆಲ್ ವಿದ್ಯಾರ್ಥಿಗಳೇ ಈ ಕೃತ್ಯ ಎಸಗಿದ್ದಾರೆಂದು ನಂಬಲಾಗಿತ್ತು. ಈ ಬಗ್ಗೆ ನಿಟ್ಟೆ ಕಾಲೇಜಿನ ಮಹಿಳಾ ಹಾಸ್ಟೆಲ್ ವ್ಯವಸ್ಥಾಪಕರು ಪೊಲೀಸರಿಗೆ ದೂರು ನೀಡಿದ್ದರು. ಎಫ್ ಐ ಆರ್ ದಾಖಲಿಸಿದ ಪೊಲೀಸರು ತನಿಖೆಗೆ ಮುಂದಾಗಿದ್ದರು. ಭಾರತ – ಪಾಕ್ ಸಂಘರ್ಷದ ಸಂದರ್ಭದಲ್ಲಿ ಬರೆಯಲಾಗಿದ್ದ ಪ್ರಚೋದನಕಾರಿ ಬರಹದ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ತನಿಖೆ ನಡೆಸಿದ್ದರು. ಆದರೆ ಸರಿಯಾದ ಸಾಕ್ಷ್ಯ ಸಿಕ್ಕಿರಲಿಲ್ಲ. ಬರೆದಿದ್ದದ್ದು ಪೆನ್ಸಿಲ್ ನಿಂದ ಆದ ಕಾರಣ ತನಿಖೆಗೆ ಇಷ್ಟು ದಿನ ಬೇಕಾಗಿದ್ದಿರಬಹುದು. ಆಕೆ ಬರೆದಿರುವ ವಿಷಯ ಮನಸ್ಸಿಗೆ ಘಾಸಿ ಮಾಡುವಂತೆ ಇರುವುದರಿಂದ ಇಲ್ಲಿ ಹೇಳುವುದು ಸೂಕ್ತವೆನಿಸುತ್ತಿಲ್ಲ. ಆದ್ದರಿಂದ ನಾವು ಆ ವಾಕ್ಯಗಳನ್ನು ಇಲ್ಲಿ ಬರೆಯುತ್ತಿಲ್ಲ.

ಇದೀಗ ಕೈಬರಹದ ಹೋಲಿಕೆ ಆಧರಿಸಿ ಪೊಲೀಸರು ಆರೋಪಿ ವಿದ್ಯಾರ್ಥಿನಿಯನ್ನು ಆರೆಸ್ಟ್ ಮಾಡಿದ್ದಾರೆ. ಪೊಲೀಸರು ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿ ಫಾತಿಮಾ ಶಬ್ನಾ (21) ಎಂಬಾಕೆಯನ್ನು ಬಂಧಿಸಿದ್ದು, ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆಕೆಯ ಉದ್ದೇಶ ಏನಿರಬಹುದು ಎಂದು ಕೂಡ ಇಲ್ಲಿ ನೋಡಬೇಕಿದೆ. ಯಾಕೆಂದರೆ ಭಾರತದಲ್ಲಿ ಕುಳಿತು ಇಲ್ಲಿ ಜಲ, ಗಾಳಿ, ಆಹಾರ ಸೇವಿಸಿ ಇಲ್ಲಿನ ನೆಲಕ್ಕೆ ದ್ರೋಹ ಬಗೆಯುವ ಮನಸ್ಥಿತಿ ಈ ದೇಶದ ಕೆಲವರಲ್ಲಿದೆ. ಕೇರಳದ ಕೆಲವು ಮೂಲೆಗಳಲ್ಲಿ ಕುಳಿತುಕೊಂಡು ಅಲ್ಲಿನ ಯುವ ಜನಾಂಗದ ತಲೆಕೆಡಿಸುವ ಕೆಲಸವನ್ನು ಮೂಲಭೂತವಾದಿಗಳು ಮಾಡುತ್ತಿದ್ದಾರೆ. ಈ ಬಂಧಿತ ಯುವತಿಯ ಹಿಂದೆ ಅಂತಹ ಜಾಲ ಇದೆಯಾ ಎಂದುಕೊಡ ನೋಡಬೇಕಿದೆ. ಆ ಮೂಲಕ್ಕೆ ಹೋದರೆ ಪೊಲೀಸರಿಗೆ ಇನ್ನಷ್ಟು ದೇಶದ್ರೋಹಿಗಳ ಸುಳಿವು ಸಿಗಬಹುದು.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search