• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಯುವಕನನ್ನು ಲವ್ ಜಿಹಾದ್ ಮಾಡಿದ್ಲಾ ಮುಸ್ಲಿಂ ಯುವತಿ! ಹಿಂದೂ ಯುವಕ ಕಂಗಾಲು…

Tulunadu News Posted On July 17, 2025
0


0
Shares
  • Share On Facebook
  • Tweet It

ಇದು ಗದಗದಲ್ಲಿ ನಡೆದಿರೋ ವಿಚಿತ್ರ ಘಟನೆ. ಸಾಮಾನ್ಯವಾಗಿ ಹಿಂದೂ ಯುವತಿಯರ ಮನವೊಲಿಸಿ ಅವರನ್ನು ಮದುವೆ ಮಾಡಿಕೊಂಡು ತಮ್ಮ ಧರ್ಮಕ್ಕೆ ಮತಾಂತರ ಮಾಡುವ ಮುಸ್ಲಿಂ ಯುವಕರ ಬಗ್ಗೆ ಸಾಕಷ್ಟು ಓದಿದ್ದೇವೆ, ಕೇಳಿದ್ದೇವೆ. ಆದರೆ ಮುಸ್ಲಿಂ ಯುವತಿಯರು ಹಿಂದೂ ಯುವಕರನ್ನು ಮದುವೆಯಾದರೆ ಅವರು ಸ್ವ ಇಚ್ಚೆಯಿಂದ ಹಿಂದೂ ಧರ್ಮಕ್ಕೆ ಬಂದು ಬಾಳುವುದನ್ನು ಕೂಡ ಕೇಳಿದ್ದೇವೆ. ಆದರೆ ಇಲ್ಲೊಬ್ಬ ಮುಸ್ಲಿಂ ಯುವತಿ ತಹಸೀನಾ ಹಾಗೂ ಗದಗದ ಗಾಂಧಿನಗರ ನಿವಾಸಿ ವಿಶಾಲಕುಮಾರ್ ಮೂರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಅಲ್ಲದೇ ಇವರಿಬ್ಬರು ಕಳೆದ ವರ್ಷದ ನವೆಂಬರ್ 24 ರಂದು ರಿಜಿಸ್ಟರ್ ಮದುವೆ ಕೂಡ ಆಗಿದ್ದರು. ರಿಜಿಸ್ಟರ್ ಮದುವೆಯ ಬಳಿಕ ಮುಸ್ಲಿಂ ಸಂಪ್ರದಾಯದಂತೆ ಮದುವೆ ಮಾಡಿಕೊಳ್ಳೋಣ ಎಂದು ತಹಸೀನಾ ಒತ್ತಾಯ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ಇನ್ನು ಪ್ರೀತಿಸಿದ ಹುಡುಗಿ ಒತ್ತಾಯ ಮಾಡುವಾಗ ಅವಳಿಗೆ ಮತ್ತು ಅವಳ ಕುಟುಂಬಕ್ಕೆ ಬೇಸರ ಮಾಡುವುದು ಬೇಡಾ ಎಂದು 2025 ಏಪ್ರಿಲ್ 25 ರಂದು ಜಮಾತ್ ನಲ್ಲಿ ಮುಸ್ಲಿಂ ಸಂಪ್ರದಾಯದಂತೆ ಮತ್ತೆ ಮದುವೆ ಕಾರ್ಯಕ್ರಮವೂ ನಡೆಯಿತು. ಈ ವೇಳೆ ಮದುವೆಯ ವಿಡಿಯೋ ತೆಗೆದಿರುವ ವಧುವಿನ ಕಡೆಯವರು ಅದನ್ನು ವೈರಲ್ ಮಾಡಿದ್ದಾರೆ. ಇದರಿಂದ ವಿಶಾಲ ಕುಮಾರ್ ನೊಂದಿದ್ದಾರೆ. ಯಾವಾಗ ವಿಶಾಲ ಕುಮಾರ್ ಮುಸ್ಲಿಂ ಸಂಪ್ರದಾಯದಂತೆ ಮದುವೆ ಆಗಿದ್ದಾನೆ ಎಂದು ಊರಲ್ಲಿ, ಬಂಧು ಮಿತ್ರರಲ್ಲಿ ಎಲ್ಲರಿಗೂ ವೈರಲ್ ವಿಡಿಯೋ ಮೂಲಕ ಗೊತ್ತಾಯಿತೋ ಅವನ ಮನೆಯವರು ಹಿಂದೂ ಸಂಪ್ರದಾಯದಂತೆ ಮದುವೆಗೆ ಸಿದ್ಧತೆ ನಡೆಸಿದ್ದಾರೆ. ಈ ವೇಳೆ ಯುವತಿ ಮನೆಯವರು ನೀನು ಹಿಂದೂ ಧರ್ಮ ಬಿಟ್ಟು, ಮುಸ್ಲಿಂ ಆಗು ಎಂದು ಒತ್ತಾಯ ಮಾಡಿದ್ದಾರೆ. ಅಲ್ಲದೇ ಮದುವೆಯ ಸಂದರ್ಭದಲ್ಲಿ ವಿಶಾಲ ಕುಮಾರ್ ಗೆ ಅರಿವಿಲ್ಲದಂತೆ ಆತನ ಹೆಸರು ಬದಲಾವಣೆ ಮಾಡಿದ್ದರು ಎನ್ನಲಾಗಿದೆ.
ನಂತರದ ದಿನಗಳಲ್ಲಿ ತಹಸೀನ್ ಹಾಗೂ ಆಕೆಯ ತಾಯಿ ಬೇಗಂ ಬಾನು ಜಮಾತ್ ಗೆ ಹೋಗುವಂತೆ ಬಲವಂತ ಮಾಡಿದ್ದಾರೆ. ಟೋಪಿ, ಜುಬ್ಬಾ ಧರಿಸು, ಹಣೆ ಮೇಲಿನ ಕುಂಕುಮ ಅಳಿಸು, ಕಿವಿಗೆ ಹಾಕಿರುವ ರಿಂಗ್ ತೆಗೆ, ಗಡ್ಡ ಬಿಡು, ನಿತ್ಯ ನಮಾಜ್ ಮಾಡುವಂತೆ ಒತ್ತಾಯ ಮಾಡುತ್ತಾ ಬಂದಿದ್ದಾರೆ ಎಂದು ವಿಶಾಲ ಕುಮಾರ್ ಆರೋಪಿಸಿದ್ದಾರೆ.

ಆರಂಭದಲ್ಲಿ ಹಿಂದೂ ಸಂಪ್ರದಾಯದಂತೆಯೂ ಮದುವೆ ಆಗುತ್ತೇನೆ ಎಂದು ಒಪ್ಪಿದ್ದ ತಹಸೀನಾ, ಬಳಿಕ ಕುಟುಂಬಸ್ಥರ ಹಾಗೂ ಮುಸ್ಲಿಂ ಮುಖಂಡರ ಒತ್ತಾಯಕ್ಕೆ ಮಣಿದು ನಿರಾಕರಿಸಿದ್ದಾಳೆ. ಸದ್ಯ ಯುವತಿಯ ಮನೆಯವರು, ಮುಸ್ಲಿಂ ಧರ್ಮಕ್ಕೆ ಮತಾಂತರ ಆಗದಿದ್ದರೆ ಮುಂದೆ ಪರಿಣಾಮ ನೆಟ್ಟಗಿರಲ್ಲ, ರೇಪ್ ಕೇಸ್ ಹಾಕ್ತೇವೆ, ಕೊಲೆ ಮಾಡಿಸ್ತೀವಿ ಎಂದು ಹೆದರಿಸುತ್ತಿದ್ದಾರೆ ಎಂದು ವಿಶಾಲ ಕುಮಾರ್ ಆರೋಪಿಸಿದ್ದಾರೆ.
ಈ ಯುವಕನ ಹೋರಾಟಕ್ಕೆ ಹಿಂದೂ ಸಂಘಟನೆಗಳು ಮುಂದೆ ಬಂದಿದ್ದು, ಇದು ಕೂಡ ಲವ್ ಜಿಹಾದ್. ಯುವತಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಕ್ರಮ ಜರುಗಬೇಕೆಂದು ಒತ್ತಾಯಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search