• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಉತ್ತರಾಖಂಡದ ಎಲ್ಲಾ 17000 ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ ಅದೇಶ!

Tulunadu News Posted On July 17, 2025
0


0
Shares
  • Share On Facebook
  • Tweet It

ಇನ್ನು ಮುಂದೆ ಉತ್ತರಾಖಂಡದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯವೆಂದು ಉತ್ತರಾಖಂಡ ಸರಕಾರ ಆದೇಶ ಹೊರಡಿಸಿದೆ. ಜುಲೈ 14 ರಂದು ಆದೇಶ ಹೊರಡಿಸಲಾಗಿದೆ. ಎಲ್ಲಾ ಸರಕಾರಿ ಶಾಲೆಗಳಲ್ಲಿ ಬೆಳಗ್ಗೆ ಭಗವದ್ಗೀತೆಯ ಶ್ಲೋಕಗಳನ್ನು ವಿದ್ಯಾರ್ಥಿಗಳು ಪಠಿಸಬೇಕೆಂದು ನಿರ್ದೇಶನ ನೀಡಲಾಗಿದೆ. ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೇ ಒಂದು ಶ್ಲೋಕವನ್ನು ವಾರದ ಶ್ಲೋಕವೆಂದು ಘೋಷಿಸಿ ಅದರ ಅರ್ಥದೊಂದಿಗೆ ನೋಟಿಸ್ ಬೋರ್ಡಿನಲ್ಲಿ ಬರೆಯುವಂತೆ ಕೇಳಲಾಗಿದೆ.

ಭಗವದ್ಗೀತೆಯ ತತ್ವಗಳು ಮಾನವ ಮೌಲ್ಯಗಳು, ನಡವಳಿಕೆ, ನಾಯಕತ್ವ ಕೌಶಲ್ಯಗಳು, ನಿರ್ಧಾರ ತೆಗೆದುಕೊಳ್ಳುವ ಸಾಮರ್ತ್ಯ, ಭಾವನಾತ್ಮಕ ಸಮತೋಲನ ಮತ್ತು ವೈಜ್ಞಾನಿಕ ಚಿಂತನೆಯನ್ನು ಹೇಗೆ ಅಭಿವೃದ್ಧಿಪಡಿಸುತ್ತವೆ ಎಂಬುದರ ಕುರಿತು ವಿದ್ಯಾರ್ಥಿಗಳಿಗೆ ಶಿಕ್ಷಕರು ತಿಳಿಸಿಕೊಡಲಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ – 2020 ರ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ಸಂಪ್ರದಾಯ ಮತ್ತು ಜ್ಞಾನ ವ್ಯವಸ್ಥೆಯ ಆಧಾರದ ಜೊತೆಗೆ ವಿವಿಧ ವಿಷಯಗಳನ್ನು ಕಲಿಸಲಾಗುವುದು ಎಂದು ಶಿಕ್ಷಣ ನಿರ್ದೇಶಕ ಡಾ. ಮುಕುಲ್ ಕುಮಾರ್ ಸತಿ ಹೇಳಿದರು.

ಮದರಸಾ ಶಿಕ್ಷಣ ಮಂಡಳಿ ಅಧ್ಯಕ್ಷ ಮುಫ್ತಿ ಸ್ವಾಗತ

ಉತ್ತರಾಖಂಡ್ ಮದರಸಾ ಶಿಕ್ಷಣ ಮಂಡಳಿಯ ಅಧ್ಯಕ್ಷ ಮುಫ್ತಿ ಶಮೂನ್ ಖಾಸ್ಮಿ ಅವರು ಸರಕಾರದ ಈ ಉಪಕ್ರಮವನ್ನು ಸ್ವಾಗತಿಸಿದ್ದು, ಶಾಲೆಗಳಲ್ಲಿ ಭಗವದ್ಗೀತೆ ಮತ್ತು ರಾಮಾಯಣವನ್ನು ಕಲಿಸುವುದು ಮತ್ತು ಜನರಿಗೆ ಅವುಗಳ ಪರಿಚಯ ಮಾಡಿಕೊಡುವುದು ಬಹಳ ಒಳ್ಳೆಯ ಕೆಲಸ ಎಂದು ಹೇಳಿದ್ದಾರೆ. ರಾಮ ಮತ್ತು ಕೃಷ್ಣ ಇಬ್ಬರೂ ನಮ್ಮ ಪೂರ್ವಜರು ಮತ್ತು ಪ್ರತಿಯೊಬ್ಬ ಭಾರತೀಯನು ಅವರ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಅವರು ಹೇಳಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಪುಸ್ತಕದಲ್ಲಿ…

ಇನ್ನು ಉತ್ತರಾಖಂಡದಲ್ಲಿ ರಾಜ್ಯ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಮೇ 6 ರಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಶ್ರೀಮದ್ ಭಗವದ್ಗೀತೆ ಮತ್ತು ರಾಮಾಯಣವನ್ನು ಅದರಲ್ಲಿ ಸೇರಿಸಲು ಸೂಚನೆಗಳನ್ನು ನೀಡಿದ್ದರು. ಭಗವದ್ಗೀತೆ ಮತ್ತು ರಾಮಾಯಣವನ್ನು ಸಹ ರಾಜ್ಯ ಪಠ್ಯಕ್ರಮದ ಚೌಕಟ್ಟಿನಲ್ಲಿ ಸೇರಿಸಲಾಗಿದೆ ಮತ್ತು ಇದರ ಪ್ರಕಾರ ಮುಂಬರುವ ಶೈಕ್ಷಣಿಕ ವರ್ಷದಿಂದ ಪುಸ್ತಕಗಳು ಲಭ್ಯವಾಗಲಿವೆ.
ಈ ಆದೇಶವು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ಸುಮಾರು 17000 ಸರಕಾರಿ ಶಾಲೆಗಳಲ್ಲಿ ಜಾರಿಗೆ ಬಂದಿದೆ.
ಇನ್ನು ಭಗವದ್ಗೀತೆ ಬೋಧನೆ ಜಾರಿಗೆ ತಂದ ಮೊದಲ ರಾಜ್ಯ ಎಂದು ಉತ್ತರಖಂಡ ಎಂದು ಕೆಲವರು ಹೇಳಿಕೊಳ್ಳುತ್ತಿದ್ದರೂ, ದೇಶದಲ್ಲಿ ಈ ರೀತಿಯ ನಡೆ ಇದೇ ಮೊದಲೇನಲ್ಲ. ಈ ಹಿಂದೆ ಕೆಲವು ಬಿಜೆಪಿ ಆಡಳಿತದ ರಾಜ್ಯಗಳು ಇದೇ ರೀತಿಯ ಘೋಷಣೆಗಳನ್ನು ಮಾಡಿದ್ದವು. ಗುಜರಾತ್ 2022 ರಲ್ಲಿ ಆರರಿಂದ 12 ತರಗತಿವರೆಗಿನ ಭಗವದ್ಗೀತೆ ತರಗತಿಗಳನ್ನು ಪರಿಚಯಿಸಿತು. ಪ್ರಾರ್ಥನೆಗಳಲ್ಲಿ ಶ್ಲೋಕಗಳನ್ನು ಮತ್ತು ಪಠ್ಯಪುಸ್ತಕಗಳಲ್ಲಿ ಅಧ್ಯಾಯಗಳನ್ನು ಸೇರಿಸಿತ್ತು. ಇನ್ನು ಕರ್ನಾಟಕದಲ್ಲಿ ಬಿಜೆಪಿ ಸರಕಾರ ಇದ್ದಾಗ 2022-23 ರ ಶೈಕ್ಷಣಿಕ ಅವಧಿಯಲ್ಲಿ ತಜ್ಞರ ಸಮಾಲೋಚನೆಯ ನಂತರ ನೈತಿಕ ವಿಜ್ಞಾನದ ಅಡಿಯಲ್ಲಿ ಗೀತಾ ಪಠಣಗಳನ್ನು ಸೇರಿಸುವ ಯೋಜನೆಯನ್ನು ಪ್ರಕಟಿಸಲಾಗಿತ್ತು.

0
Shares
  • Share On Facebook
  • Tweet It




Trending Now
ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
Tulunadu News August 19, 2025
ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
Tulunadu News August 19, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
  • Popular Posts

    • 1
      ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • 2
      ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!

  • Privacy Policy
  • Contact
© Tulunadu Infomedia.

Press enter/return to begin your search