• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಭಾರತದ ಡ್ರೆಸ್ಸಿಂಗ್ ರೂಂನಲ್ಲಿ ಹನುಮಾನ್ ಚಾಲೀಸಾ ಪಠಣ!

Tulunadu News Posted On July 18, 2025
0


0
Shares
  • Share On Facebook
  • Tweet It

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಡೂ ಔರ್ ಡೈ ಆಗಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಅಭ್ಯಾಸ ಶಿಬಿರಕ್ಕೂ ಮುನ್ನ ಭಾರತೀಯ ಆಟಗಾರರ ಡ್ರೆಸ್ಸಿಂಗ್ ರೂಂನಲ್ಲಿ ಭಗವಾನ್ ಹನುಮಂತನನ್ನು ಸ್ಮರಿಸುವ ಹನುಮಾನ್ ಚಾಲಿಸಾ ಕೇಳಿಸಲಾಯಿತು ಎಂದು ವರದಿಯಾಗಿದೆ. ಇದರಿಂದ ಆಟದಲ್ಲಿ ದೃಢಚಿತ್ತತೆ, ಏಕಾಗ್ರತೆ ಮತ್ತು ಗುರಿಯೆಡೆಗೆ ನಿಖರತೆ ಸಿಗಲು ಸಾಧ್ಯವಾಗುತ್ತದೆ. ಹನುಮಾನ್ ಚಾಲೀಸಾವನ್ನು ನಮ್ಮ ಸನಾತನ ಧರ್ಮದ ಶಕ್ತಿವರ್ಧಕ ಮಂತ್ರಪಠಣ ಎಂದೇ ಕರೆಯಲಾಗುತ್ತದೆ. ಜುಲೈ 23 ರಿಂದ ನಾಲ್ಕನೇ ಟೆಸ್ಟ್ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫರ್ಡ್ ನಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ಭಾರತೀಯ ಆಟಗಾರರು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಮೂರು ಟೆಸ್ಟ್ ಪಂದ್ಯಗಳು ಮುಗಿದಿದ್ದು, ಅದರಲ್ಲಿ ಭಾರತ ಒಂದರಲ್ಲಿ ಗೆದ್ದು, ಎರಡರಲ್ಲಿ ಸೋತಿದೆ. ಪ್ರತಿಷ್ಠಿತ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಗೆಲುವು ಕೈಗೆ ಬರುತ್ತದೆ ಎನ್ನುವ ಹಂತದಲ್ಲಿ ಭಾರತ ಮುಗ್ಗರಿಸಿತು. ಈಗ ನಾಲ್ಕನೇ ಪಂದ್ಯವನ್ನಾದರೂ ಗೆಲ್ಲುವ ಮೂಲಕ ಸರಣಿಯನ್ನು ಸಮಬಲಗೊಳಿಸಿ ಐದನೇ ಪಂದ್ಯಕ್ಕೆ ಮಾನಸಿಕವಾಗಿ ಹುರುಪಿನೊಂದಿಗೆ ತಯಾರಾಗುವ ಯೋಚನೆ ಭಾರತೀಯ ತಂಡದ್ದು. ಭಾರತದ ಎಡಗೈ ವೇಗಿ ಅರ್ಶ್ ದೀಪ್ ಸಿಂಗ್ ಬುಧವಾರ ಅಭ್ಯಾಸ ಶಿಬಿರದ ವೇಳೆ ಕೈ ಬೆರಳಿನ ಗಾಯಕ್ಕೆ ತುತ್ತಾದರು. ಸಾಯಿ ಸುದರ್ಶನ್ ಬಾರಿಸಿದ ಚೆಂಡನ್ನು ಹಿಡಿಯುವ ಯತ್ನದಲ್ಲಿ ಅರ್ಶ್ ದೀಪ್ ಕೈಗೆ ಗಾಯವಾಯಿತು. ಅರ್ಶ್ ದೀಪ್ ಸರಣಿಯ ಆರಂಭಿಕ 3 ಪಂದ್ಯಗಳಲ್ಲಿ ಆಡಿಲ್ಲ. ಆದರೆ ಬೂಮ್ರಾ ಕೊನೆ ಎರಡು ಟೆಸ್ಟ್ ಗಳ ಪೈಕಿ 1 ರಲ್ಲಿ ಮಾತ್ರ ಆಡಲಿದ್ದು, ಅವರ ಗೈರಿನಲ್ಲಿ ಆರ್ಶ್ ದೀಪ್ ಗೆ ಅವಕಾಶ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಭಾರತದ ಪ್ರಮುಖ ವೇಗಿ ಜಸ್ ಪ್ರೀತ್ ಬೂಮ್ರಾ ಸರಣಿಯ ನಿರ್ಣಾಯಕ ಟೆಸ್ಟ್ ಎನಿಸಿಕೊಂಡಿರುವ 4 ನೇ ಪಂದ್ಯದಲ್ಲಿ ಬಹುತೇಕ ಆಡುವ 11 ರ ತಂಡದಲ್ಲಿದ್ದಾರೆ ಎನ್ನುವ ಮಾಹಿತಿ ಇದೆ. ಇನ್ನು ಬರೋಬ್ಬರಿ 8 ವರ್ಷಗಳ ಬಳಿಕ ಭಾರತ ಟೆಸ್ಟ್ ಕ್ರಿಕೆಟ್ ತಂಡ ಮರಳಿರುವ ಕರುಣ್ ನಾಯರ್ ಈ ಬಾರಿ ಸರಣಿಯಲ್ಲಿ ಕಮಾಲ್ ಮಾಡಿಲ್ಲ. ಈಗಾಗಲೇ ನಡೆದ ಮೂರು ಪಂದ್ಯಗಳಲ್ಲಿ ಅವರಿಗೆ ಅವಕಾಶ ಸಿಕ್ಕಿತಾದರೂ ಅವರು ಹೇಳಿಕೊಳ್ಳುವಂತಹ ಬ್ಯಾಟಿಂಗ್ ಪ್ರದರ್ಶಿಸಿಲ್ಲ. ಒಟ್ಟಿನಲ್ಲಿ ಮುಂದಿನ ಪಂದ್ಯಕ್ಕೆ ಕೆಲವು ದಿನಗಳು ಇರುವುದರಿಂದ ಯಾರು 11 ರ ಬಳಗದಲ್ಲಿರುತ್ತಾರೆ ಎನ್ನುವುದೇ ಈಗಿರುವ ಪ್ರಶ್ನೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search