• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಸಣ್ಣಪುಟ್ಟ ಅಂಗಡಿಗಳಿಗೂ ಈಗ ತೆರಿಗೆ ಅಧಿಕಾರಿಗಳ ನೋಟಿಸ್ ಯಾಕೆ? ಇಲ್ಲಿದೆ ಸುಲಭ ಲೆಕ್ಕಾಚಾರ!

Tulunadu News Posted On July 19, 2025
0


0
Shares
  • Share On Facebook
  • Tweet It

ಭಾರತದಲ್ಲಿ ಯುಪಿಐ ಅಂದರೆ ಸಿಂಪಲ್ ಆಗಿ ಹೇಳುವುದಾದರೆ ಮೊಬೈಲ್ ಮೂಲಕವೇ ನೀವು ಕ್ಷಣಾರ್ಧದಲ್ಲಿ ಹಣ ಸಾಗಿಸುವ ವ್ಯವಸ್ಥೆ ಇದೆಯಲ್ಲ, ಅದು ಎಷ್ಟರಮಟ್ಟಿಗೆ ಭಾರತದಲ್ಲಿ ಫೇಮಸ್ ಇದೆ ಎಂದರೆ ಬೀದಿಬದಿ ವ್ಯಾಪಾರಿಗಳಿಂದ ಹಿಡಿದು ಮಾಲ್ ಗಳ ತನಕ ಎಲ್ಲದರಲ್ಲಿಯೂ ಮುಂಚೂಣಿಯಲ್ಲಿದೆ. ಎಲ್ಲಿಯವರೆಗೆ ಎಂದರೆ ಇಂದಿನ ಯುವಕರು ಒಂದು ಚಾಕಲೇಟ್ ಖರೀದಿಸಿದರೂ ಅದಕ್ಕೆ ಯುಪಿಐ ಬಳಸುತ್ತಾರೆ. ಯುಪಿಐ ಇಲ್ಲದ ಅಂಗಡಿಯವರು ಹಳೆ ತಲೆಮಾರಿನವರು ಎಂದು ಹೇಳುವಂತಹ ವಾತಾವರಣ ಸೃಷ್ಟಿಯಾಗಿದೆ.

ಈಗ ಕೆಲವು ದಿನಗಳಿಂದ ಈ ಜಿಎಸ್ ಟಿ ಕಟ್ಟದ ಅಂಗಡಿಯವರು ತಮ್ಮ ಅಂಗಡಿಯಿಂದ ಕ್ಯೂಆರ್ ಕೋಡ್ ತೆಗೆಯುತ್ತಿದ್ದಾರೆ. ಅದಕ್ಕೆ ಕಾರಣ ಕರ್ನಾಟಕ ಸರಕಾರದ ವಾಣಿಜ್ಯ ತೆರಿಗೆ ಇಲಾಖೆ ಕೊಟ್ಟಿರುವ ನೋಟಿಸು.

ಕಳೆದ ಮೇನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಸಂಘಟನೆಗಳ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈ ಬಾರಿ ಅಧಿಕಾರಿಗಳಿಗೆ 1.20 ಲಕ್ಷ ಕೋಟಿ ರೂ ಜಿಎಸ್ ಟಿ ಸಂಗ್ರಹದ ಗುರಿ ನೀಡಿದ್ದರು. ಅದನ್ನು ಯಶಸ್ವಿಯಾಗಿ ತಲುಪಲೇಬೇಕು ಎಂದು ಸೂಚಿಸಿದ್ದರು. ಆ ಪ್ರಕಾರವಾಗಿ ಫೀಲ್ಡಿಗೆ ಇಳಿದಿರುವ ಅಧಿಕಾರಿಗಳಿಗೆ ಜಿಎಸ್ ಟಿ ಕಟ್ಟದ ಲಕ್ಷಾಂತರ ರೂಪಾಯಿ ವ್ಯವಹಾರ ಮಾಡುವ ಸಣ್ಣಪುಟ್ಟ ಅಂಗಡಿಗಳ ಮೇಲೆ ಕಣ್ಣು ಬಿದ್ದಿತ್ತು. ಅದರಂತೆ 45 ಲಕ್ಷದಿಂದ 1.5 ಕೋಟಿವರೆಗೆ ವಾರ್ಷಿಕ ವಹಿವಾಟು ನಡೆಸುವ ಅಂಗಡಿಯವರಿಗೆ ನೋಟಿಸು ಕೊಟ್ಟಿದ್ದಾರೆ.

ಸದ್ಯ ಪೇಟಿಎಂ ಹಾಗೂ ಫೋನ್ ಪೇ ಮೂಲಕ ಸ್ವೀಕರಿಸಿರುವ ಮೊತ್ತವನ್ನು ಮಾತ್ರ ವಾಣಿಜ್ಯ ತೆರಿಗೆ ಲೆಕ್ಕ ಹಾಕಿ ನೋಟಿಸ್ ನೀಡಿದೆ. ಜಿಎಸ್ ಟಿ ನೋಂದಣಿ ಮಾಡಿಕೊಳ್ಳದೇ ಜಿಎಸ್ ಟಿ ಮಿತಿಯನ್ನು ಮೀರಿ ಹಣ ಸ್ವೀಕರಿಸಿರುವ ಕಾರಣ ಸ್ವೀಕೃತವಾಗಿರುವ ಮೊತ್ತದ ಮೇಲೆ 18 ರಷ್ಟು ಜಿಎಸ್ ಟಿ ಜೊತೆಗೆ ದಂಡ ವಿಧಿಸಲಾಗಿದೆ. ಈ ಕುರಿತು ಸರಿಯಾದ ಮಾಹಿತಿಯನ್ನು ಅಧಿಕಾರಿಗಳಿಗೆ ದಾಖಲೆ ಸಹಿತ ನೀಡಿದರೆ ಜಿಎಸ್ ಟಿ ಮೊತ್ತ ಕಡಿಮೆಯಾಗಲಿದೆ. ಅದೇ ರೀತಿ ಅನೇಕ ವ್ಯಾಪಾರಿಗಳಿಗೆ ವಹಿವಾಟಿನ ಮೊತ್ತ ಮಾತ್ರ ತಿಳಿಸಿ ಆ ಕುರಿತು ವಿವರಣೆ ನೀಡುವಂತೆ ನೋಟಿಸ್ ನೀಡಲಾಗಿದ್ದು, ನಿರ್ದಿಷ್ಟ ಜಿಎಸ್ ಟಿ ಮೊತ್ತ ಮತ್ತು ದಂಡದ ಮೊತ್ತ ನಿಗದಿಪಡಿಸಿಲ್ಲ.

ಈಗ ನೋಟಿಸ್ ನೀಡಿರುವುದೆಲ್ಲ ಯುಪಿಐ ಮೂಲಕ ಸ್ವೀಕರಿಸಿದ ಮೊತ್ತದ ಆಧಾರದ ಮೇಲೆ ಮಾತ್ರ. ಯುಪಿಐ ಹೊರತಾಗಿ ನಗದು ವ್ಯಾಪಾರವನ್ನು ಶೇ 20 ರಿಂದ 30 ರಷ್ಟು ಎಂದು ಪರಿಗಣಿಸಿದರೂ ವಹಿವಾಟಿನ ಮೊತ್ತ ಇನ್ನೂ ಹೆಚ್ಚಳವಾಗಲಿದೆ. ಬೆಂಗಳೂರಿನ ಹಲವು ಮಾಂಸದ ಅಂಗಡಿ, ಹೂವಿನ ಅಂಗಡಿ, ಸಣ್ಣ ಬೇಕರಿ, ಕಾಂಡಿಮೆಂಟ್ಸ್ ಹೀಗೆ ಅಸಂಖ್ಯಾತ ಅಂಗಡಿಯವರು ಜಿಎಸ್ ಟಿ ನೋಂದಣಿ ಮಾಡದೇ ಹೆಚ್ಚಿನ ಎಲ್ಲಾ ವ್ಯವಹಾರಗಳನ್ನು ಯುಪಿಐ ಮೂಲಕ ಮಾಡಿದ ಕಾರಣ ಈಗ ಎಲ್ಲಾ ಲೆಕ್ಕವೂ ತೆರಿಗೆ ಇಲಾಖೆ ಸಿಕ್ಕಿದೆ. ಆದ್ದರಿಂದ ಈಗ ಜಿಎಸ್ ಟಿ ಕಟ್ಟದ ಅಂಗಡಿಯವರು ನಾವು ಕ್ಯಾಶ್ ಮಾತ್ರ ತೆಗೆದುಕೊಳ್ಳುತ್ತೇವೆ, ಯುಪಿಐ ಇಲ್ಲ ಎಂದು ಹೇಳುತ್ತಿದ್ದಾರೆ. ಅದಕ್ಕಾಗಿ ಮುಂದಿನ ವಾರ ಒಂದು ದಿನ ಎಲ್ಲಾ ಸಣ್ಣಪುಟ್ಟ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search