• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಇನ್ನೂ ಬಹುಪತಿತ್ವ ಭಾರತದ ಈ ಹಳ್ಳಿಯಲ್ಲಿದೆ: ಖುಷಿಯಿಂದ ಸಹೋದರರನ್ನು ಮದುವೆಯಾದ ವಧು!

Tulunadu News Posted On July 21, 2025
0


0
Shares
  • Share On Facebook
  • Tweet It

ಮದುಮಗಳು ಸುನೀತಾ ಪ್ರಕಾರ, ಅವಳಿಗೆ ಇಂತಹ ಒಂದು ಪದ್ಧತಿ ಅವಳ ಸಮುದಾಯದಲ್ಲಿ ಆಚರಣೆಯಲ್ಲಿರುವುದು ಗೊತ್ತೇ ಇದೆ. ಅವಳು ಹೀಗೆ ಮದುವೆಯಾಗಿರುವುದಕ್ಕೆ ಯಾರ ಒತ್ತಡವೂ ಇಲ್ಲ ಎಂದು ಹೇಳಿದ್ದಾಳೆ. ಇವತ್ತಿನ ಕಾಲಕ್ಕೆ ಬಹಳ ವಿಚಿತ್ರವಾದ ವಿವಾಹವೊಂದು ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಅಲ್ಲಿ ಹಟ್ಟಿ ಎನ್ನುವ ಜನಾಂಗದಲ್ಲಿ ಶತಮಾನಗಳ ಹಿಂದಿನ ಬಹುಪತಿತ್ವ ಪದ್ಧತಿ ಜಾರಿಯಲ್ಲಿದೆ. ಆಧುನಿಕ ಕಾಲದಲ್ಲಿ ಈ ಪದ್ಧತಿಯಿಂದ ಬಹುತೇಕರು ಹೊರಗೆ ಬಂದಿದ್ದರೂ ಮೊನ್ನೆಯಷ್ಟೇ ಒಂದು ವಿವಾಹ ನಡೆದು ಅದರಲ್ಲಿ ಯುವತಿ ಇಬ್ಬರು ಸಹೋದರರನ್ನು ಮದುವೆಯಾಗುವ ಮೂಲಕ ಆ ಪದ್ಧತಿಯನ್ನು ಜೀವಂತವಾಗಿಟ್ಟಿದ್ದಾಳೆ.

ಹಿಮಾಚಲ ಪ್ರದೇಶದ ಷಿಲಾಯಿ ಹಳ್ಳಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಯುವತಿ ಇಬ್ಬರು ಅಣ್ಣತಮ್ಮನನ್ನು ಮದುವೆಯಾಗಿದ್ದಾಳೆ. ಅದೊಂದು ಬಿಟ್ರೆ ಬೇರೆ ಎಲ್ಲವೂ ಆ ಮದುವೆಯ ಸಮಾರಂಭದಲ್ಲಿ ಸಾಮಾನ್ಯ ಶಿಷ್ಟಾಚಾರಗಳೇ ನಡೆದಿವೆ. ಒಟ್ಟು ಮೂರು ದಿನ ನಡೆದ ಈ ಮದುವೆ ಸಮಾರಂಭ ಜುಲೈ 12 ರಂದು ಆರಂಭವಾಗಿತ್ತು. ಎಲ್ಲಾ ಬಂಧು ಮಿತ್ರರ ಸಡಗರದ ನಡುವೆ ಮೂರು ಜನ ಒಂದೇ ಮದುವೆಯ ಬಂಧದಲ್ಲಿ ಬಂಧಿಯಾದರು. ಒಬ್ಬಳನ್ನೇ ಮದುವೆಯಾದ ಇಬ್ಬರಲ್ಲಿ ಒಬ್ಬ ವ್ಯಕ್ತಿ ಪ್ರದೀಪ್ ರಾಜ್ಯ ಸರಕಾರದಲ್ಲಿ ಉದ್ಯೋಗಿಯಾಗಿದ್ದರೆ, ಅವನ ಸಹೋದರ ಕಪಿಲ್ ವಿದೇಶದಲ್ಲಿ ಉದ್ಯೋಗದಲ್ಲಿ ಉದ್ಯೋಗದಲ್ಲಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರದೀಪ್ ” ನಾವು ನಮ್ಮ ಸಮುದಾಯದ ಈ ಸಂಪ್ರದಾಯವನ್ನು ಉಳಿಸಿಕೊಂಡು ಬಂದಿದ್ದೇವೆ. ಸಾರ್ವಜನಿಕವಾಗಿ ಇದನ್ನು ಅನುಸರಿಸಿದರೂ ನಮಗೆ ನಮ್ಮ ಪದ್ಧತಿಯ ಬಗ್ಗೆ ಹೆಮ್ಮೆ ಇದೆ. ಇದು ನಮ್ಮ ಕುಟುಂಬದ ಎಲ್ಲರ ಸಹ ನಿರ್ಧಾರವೂ ಆಗಿದೆ” ಎಂದು ಹೇಳಿದರು.
ಕಪಿಲ್ ಮಾತನಾಡಿ ” ನಾನು ವಿದೇಶದಲ್ಲಿ ನೆಲೆಸಿದ್ದರೂ ನಮ್ಮ ಸಹೋದರರ ನಡುವಿನ ಬಾಂಧವ್ಯ, ಸ್ಥಿರತೆ ಮತ್ತು ವಿಶ್ವಾಸದಿಂದ ಒಂದು ಸದೃಢ ಕುಟುಂಬ ಅಸ್ತಿತ್ವದಲ್ಲಿ ಬಂದಂತೆ ಆಗಿದೆ. ನಾವು ಪಾರದರ್ಶಕತೆಯನ್ನು ಹೊಂದಿದ್ದೇವೆ” ಎಂದು ಹೇಳಿದರು.

ಈ ಸಮುದಾಯದ ಹಿರಿಯರ ಪ್ರಕಾರ ಇಂತಹ ವಿವಾಹಗಳು ಹಿಂದಿನ ಕಾಲದಲ್ಲಿ ಹೆಚ್ಚು ಸಾರ್ವಜನಿಕವಾಗಿ ಮಾಡುತ್ತಿರಲಿಲ್ಲ. ನಮ್ಮ ಸಮುದಾಯದ ಒಳಗೆ ಇದು ಖಾಸಗಿ ಕಾರ್ಯಕ್ರಮವಾಗಿರುತ್ತಿತ್ತು ಎಂದು ಹೇಳಿದ್ದಾರೆ. ಶಿಲೈ ಹಳ್ಳಿಯ ನಿವಾಸಿ ಬಿಶನ್ ತೋಮರ್ ಪ್ರಕಾರ ಹಿಂದಿನಿಂದಲೂ ಇದು ಜಾರಿಯಲ್ಲಿದೆ. ಇಂತಹ ಡಜನ್ ಮದುವೆಗಳನ್ನು ತಾನು ನೋಡಿದ್ದೇನೆ. ನಮ್ಮ ಗ್ರಾಮದಲ್ಲಿ ಮೂರು ಡಜನ್ ಗಳಿಗೂ ಹೆಚ್ಚಿನ ಕುಟುಂಬಗಳಲ್ಲಿ ಹೀಗೆ ನಡೆದುಬಂದಿದೆ. ಅಲ್ಲಿ ಇಬ್ಬರು ಮೂವರು ಸಹೋದರರು ಒಬ್ಬಳನ್ನೇ ಮದುವೆಯಾಗಿ ಜೀವನ ಸಾಗಿಸುತ್ತಿದ್ದಾರೆ. ಕೆಲವೆಡೆ ಒಬ್ಬನೇ ಗಂಡಸಿಗೆ ಒಂದಕ್ಕಿಂತ ಹೆಚ್ಚು ಪತ್ನಿಯರೂ ಇದ್ದಾರೆ. ಆದರೆ ಎಲ್ಲರ ಗೌರವ ಮತ್ತು ಪ್ರಾಮಾಣಿಕತೆಯಿಂದ ಈ ಸಂಪ್ರದಾಯ ಪರಿಶುದ್ಧವಾಗಿ ಉಳಿದುಬಂದಿದೆ” ಎಂದು ಹೇಳುತ್ತಾರೆ. ಮುಖ್ಯವಾಗಿ ಇದರಿಂದ ಅವಿಭಕ್ತ ಕುಟುಂಬ ಪದ್ಧತಿ ಉಳಿದು ಹಿರಿಯರ ಆಸ್ತಿ ವಿವಾದವಾಗಲಿ, ಸ್ವತ್ತು, ಭೂ ವಿಭಜನೆಯಾಗಲಿ ನಡೆಯುವ ಸಾಧ್ಯತೆ ಇರುವುದಿಲ್ಲ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search