• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಅಕ್ಟೋಬರ್ 2 ರಂದು ರಿಷಬ್ ಶೆಟ್ಟಿಯ ಕಾಂತಾರ ಅಧ್ಯಾಯ 1 ಬಿಡುಗಡೆ!

Tulunadu News Posted On July 22, 2025
0


0
Shares
  • Share On Facebook
  • Tweet It

ಕರಾವಳಿಯ ಹೆಮ್ಮೆಯ ಕುಡಿ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ ಅಧ್ಯಾಯ 1″ ಶೂಟಿಂಗ್ ಮುಕ್ತಾಯಗೊಂಡಿದ್ದು, ಅಕ್ಟೋಬರ್ 2 ರಂದು ವಿಶ್ವಾದ್ಯಂತ ಚಿತ್ರ ಬಿಡುಗಡೆಯಾಗಲಿದೆ. ಸಿನೆಮಾದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದ್ದು, 2.06 ನಿಮಿಷಗಳ ವಿಡಿಯೋಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋ ಮಿಲಿಯನ್ ಗಟ್ಟಲೆ ಅಧಿಕ ವೀಕ್ಷಣೆ ಕಂಡಿದೆ.

ಈ ಸಿನೆಮಾದ ಚಿತ್ರೀಕರಣ ಮುಗಿದಿರುವುದಾಗಿ ಸಿನೆಮಾ ತಂಡ ಅಧಿಕೃತವಾಗಿ ಘೋಷಿಸಿದೆ. ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಗಳಲ್ಲಿಯೂ ಈ ಮೇಕಿಂಗ್ ಬಿಡುಗಡೆಯಾಗಿದ್ದು, ಇದರಲ್ಲಿ ಕಾಂತಾರದ ಅಗಾಧತೆಯನ್ನು ಕಟ್ಟಿಕೊಡಲಾಗಿದೆ. ಕಾಂತಾರದ ಸೆಟ್ ಗಳ ವಿಸ್ತಾರತೆಯನ್ನು ಈ ಸಿನೆಮಾದಲ್ಲಿ ನೋಡಬಹುದಾಗಿದೆ. ಅದರೊಂದಿಗೆ ಆ ಸೆಟ್ ನಿರ್ಮಾಣದ ಪರಿಶ್ರಮ ಸಹಿತ ಕಲಾವಿದರ ತಲ್ಲೀನತೆ, ಜನ ನೋಡದ ತಾಣಗಳ ಪರಿಚಯ ಎಲ್ಲವನ್ನು ಇಲ್ಲಿ ಕಾಣಬಹುದಾಗಿದೆ. ಈ ಮೇಕಿಂಗ್ ವಿಡಿಯೋಗೆ ರಿಷಬ್ ಶೆಟ್ಟಿ ಸ್ವತ: ಧ್ವನಿ ನೀಡಿದ್ದಾರೆ. ” ನನ್ನ ನೆಲದ ಕಥೆಯನ್ನು ಇಡೀ ಪ್ರಪಂಚಕ್ಕೆ ಹೇಳಬೇಕು ಎನ್ನುವುದು ನನ್ನ ಕನಸು. ನಮ್ಮ ಊರು, ನಮ್ಮ ಜನ, ನಮ್ಮ ನಂಬಿಕೆಗಳು. ನಾನು ಆ ಕನಸಿನ ಬೆನ್ನು ಹತ್ತುವುದಕ್ಕೆ ಶುರು ಮಾಡಿದಾಗ ಸಾವಿರಾರು ಜನ ನನ್ನ ಬೆನ್ನ ಹಿಂದೆ ನಿಂತರು. 3 ವರ್ಷಗಳ ಪರಿಶ್ರಮ, 250 ದಿನಗಳ ಚಿತ್ರೀಕರಣ, ಎಷ್ಟೇ ಕಷ್ಟ ಬಂದರೂ ನಾನು ನಂಬಿದ ದೈವ ನನ್ನ ಕೈಬಿಡಲಿಲ್ಲ. ಪ್ರತಿ ದಿನ ಸೆಟ್ ನಲ್ಲಿ ಸಾವಿರಾರು ಜನರನ್ನು ನೋಡುತ್ತಿದ್ದಾಗ ನನಗೆ ಕಾಡುತ್ತಿದ್ದ ವಿಷಯ ಒಂದೇ. ಇದು ಕೇವಲ ಸಿನೆಮಾ ಅಲ್ಲ. ಇದೊಂದು ಶಕ್ತಿ. ಕಾಂತಾರದ ಪ್ರಪಂಚಕ್ಕೆ ನಿಮ್ಮೆಲ್ಲರಿಗೂ ಸ್ವಾಗತ” ಎಂದಿದ್ದಾರೆ. ಸಿನೆಮಾದ ಮೇಕಿಂಗ್ ವಿಡಿಯೋ ನೋಡಿದ ಸಿನೆಮಾ ತಜ್ಞರು ಈ ಸಿನೆಮಾ ಬಾಕ್ಸ್ ಆಫೀಸ್ ವಿಷಯದಲ್ಲಿ ಎಲ್ಲಾ ದಾಖಲೆ ಮುರಿಯುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ.

ಈ ಸಿನೆಮಾದ ಮೂಲಕ ರಿಷಬ್ ಶೆಟ್ಟಿಯವರು ಕನ್ನಡದ ಕಂಪನ್ನು ಮತ್ತೊಮ್ಮೆ ಜಗತ್ತಿಗೆ ಪರಿಚಯಿಸಲಿದ್ದಾರೆ. ಅವರ ಪ್ಯಾನ್ ಸ್ಟಾರ್ ಸ್ಟೇಟಸ್ ಹೀಗೆ ಮುಂದುವರೆಯಲಿದೆ. ಕರಾವಳಿ ಕರ್ನಾಟಕದ ಕಲಾವಿದನೊಬ್ಬ ಕನ್ನಡದ ಕಂಪನ್ನು ಕಾಡಂಚಿನಿಂದ ಜಗತ್ತಿಗೆ ತೆಗೆದುಕೊಂಡು ಹೋಗುವುದೆಂದರೆ ಅದು ಸುಮ್ಮನೆ ಮಾತಲ್ಲ. ಆ ನಿಟ್ಟಿನಲ್ಲಿ ಹೊಂಬಾಳೆ ಬ್ಯಾನರ್ ಯಶಸ್ವಿಯಾಗಲಿದೆ ಎನ್ನುವುದು ಪಕ್ಕಾ. ಈ ಸಿನೆಮಾದ ಮೇಕಿಂಗ್ ನೋಡಿದ ಜನ ಅಕ್ಟೋಬರ್ 2 ನೇ ತಾರೀಕಿಗಾಗಿ ಕಾಯುತ್ತಾ ಇದ್ದಾರೆ. ಆವತ್ತು ಸಿನೆಮಾ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search