• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಅಕ್ಟೋಬರ್ 2 ರಂದು ರಿಷಬ್ ಶೆಟ್ಟಿಯ ಕಾಂತಾರ ಅಧ್ಯಾಯ 1 ಬಿಡುಗಡೆ!

Tulunadu News Posted On July 22, 2025
0


0
Shares
  • Share On Facebook
  • Tweet It

ಕರಾವಳಿಯ ಹೆಮ್ಮೆಯ ಕುಡಿ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ಕಾಂತಾರ ಅಧ್ಯಾಯ 1″ ಶೂಟಿಂಗ್ ಮುಕ್ತಾಯಗೊಂಡಿದ್ದು, ಅಕ್ಟೋಬರ್ 2 ರಂದು ವಿಶ್ವಾದ್ಯಂತ ಚಿತ್ರ ಬಿಡುಗಡೆಯಾಗಲಿದೆ. ಸಿನೆಮಾದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದ್ದು, 2.06 ನಿಮಿಷಗಳ ವಿಡಿಯೋಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋ ಮಿಲಿಯನ್ ಗಟ್ಟಲೆ ಅಧಿಕ ವೀಕ್ಷಣೆ ಕಂಡಿದೆ.

ಈ ಸಿನೆಮಾದ ಚಿತ್ರೀಕರಣ ಮುಗಿದಿರುವುದಾಗಿ ಸಿನೆಮಾ ತಂಡ ಅಧಿಕೃತವಾಗಿ ಘೋಷಿಸಿದೆ. ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಗಳಲ್ಲಿಯೂ ಈ ಮೇಕಿಂಗ್ ಬಿಡುಗಡೆಯಾಗಿದ್ದು, ಇದರಲ್ಲಿ ಕಾಂತಾರದ ಅಗಾಧತೆಯನ್ನು ಕಟ್ಟಿಕೊಡಲಾಗಿದೆ. ಕಾಂತಾರದ ಸೆಟ್ ಗಳ ವಿಸ್ತಾರತೆಯನ್ನು ಈ ಸಿನೆಮಾದಲ್ಲಿ ನೋಡಬಹುದಾಗಿದೆ. ಅದರೊಂದಿಗೆ ಆ ಸೆಟ್ ನಿರ್ಮಾಣದ ಪರಿಶ್ರಮ ಸಹಿತ ಕಲಾವಿದರ ತಲ್ಲೀನತೆ, ಜನ ನೋಡದ ತಾಣಗಳ ಪರಿಚಯ ಎಲ್ಲವನ್ನು ಇಲ್ಲಿ ಕಾಣಬಹುದಾಗಿದೆ. ಈ ಮೇಕಿಂಗ್ ವಿಡಿಯೋಗೆ ರಿಷಬ್ ಶೆಟ್ಟಿ ಸ್ವತ: ಧ್ವನಿ ನೀಡಿದ್ದಾರೆ. ” ನನ್ನ ನೆಲದ ಕಥೆಯನ್ನು ಇಡೀ ಪ್ರಪಂಚಕ್ಕೆ ಹೇಳಬೇಕು ಎನ್ನುವುದು ನನ್ನ ಕನಸು. ನಮ್ಮ ಊರು, ನಮ್ಮ ಜನ, ನಮ್ಮ ನಂಬಿಕೆಗಳು. ನಾನು ಆ ಕನಸಿನ ಬೆನ್ನು ಹತ್ತುವುದಕ್ಕೆ ಶುರು ಮಾಡಿದಾಗ ಸಾವಿರಾರು ಜನ ನನ್ನ ಬೆನ್ನ ಹಿಂದೆ ನಿಂತರು. 3 ವರ್ಷಗಳ ಪರಿಶ್ರಮ, 250 ದಿನಗಳ ಚಿತ್ರೀಕರಣ, ಎಷ್ಟೇ ಕಷ್ಟ ಬಂದರೂ ನಾನು ನಂಬಿದ ದೈವ ನನ್ನ ಕೈಬಿಡಲಿಲ್ಲ. ಪ್ರತಿ ದಿನ ಸೆಟ್ ನಲ್ಲಿ ಸಾವಿರಾರು ಜನರನ್ನು ನೋಡುತ್ತಿದ್ದಾಗ ನನಗೆ ಕಾಡುತ್ತಿದ್ದ ವಿಷಯ ಒಂದೇ. ಇದು ಕೇವಲ ಸಿನೆಮಾ ಅಲ್ಲ. ಇದೊಂದು ಶಕ್ತಿ. ಕಾಂತಾರದ ಪ್ರಪಂಚಕ್ಕೆ ನಿಮ್ಮೆಲ್ಲರಿಗೂ ಸ್ವಾಗತ” ಎಂದಿದ್ದಾರೆ. ಸಿನೆಮಾದ ಮೇಕಿಂಗ್ ವಿಡಿಯೋ ನೋಡಿದ ಸಿನೆಮಾ ತಜ್ಞರು ಈ ಸಿನೆಮಾ ಬಾಕ್ಸ್ ಆಫೀಸ್ ವಿಷಯದಲ್ಲಿ ಎಲ್ಲಾ ದಾಖಲೆ ಮುರಿಯುವ ಸಾಧ್ಯತೆ ಇದೆ ಎನ್ನುತ್ತಿದ್ದಾರೆ.

ಈ ಸಿನೆಮಾದ ಮೂಲಕ ರಿಷಬ್ ಶೆಟ್ಟಿಯವರು ಕನ್ನಡದ ಕಂಪನ್ನು ಮತ್ತೊಮ್ಮೆ ಜಗತ್ತಿಗೆ ಪರಿಚಯಿಸಲಿದ್ದಾರೆ. ಅವರ ಪ್ಯಾನ್ ಸ್ಟಾರ್ ಸ್ಟೇಟಸ್ ಹೀಗೆ ಮುಂದುವರೆಯಲಿದೆ. ಕರಾವಳಿ ಕರ್ನಾಟಕದ ಕಲಾವಿದನೊಬ್ಬ ಕನ್ನಡದ ಕಂಪನ್ನು ಕಾಡಂಚಿನಿಂದ ಜಗತ್ತಿಗೆ ತೆಗೆದುಕೊಂಡು ಹೋಗುವುದೆಂದರೆ ಅದು ಸುಮ್ಮನೆ ಮಾತಲ್ಲ. ಆ ನಿಟ್ಟಿನಲ್ಲಿ ಹೊಂಬಾಳೆ ಬ್ಯಾನರ್ ಯಶಸ್ವಿಯಾಗಲಿದೆ ಎನ್ನುವುದು ಪಕ್ಕಾ. ಈ ಸಿನೆಮಾದ ಮೇಕಿಂಗ್ ನೋಡಿದ ಜನ ಅಕ್ಟೋಬರ್ 2 ನೇ ತಾರೀಕಿಗಾಗಿ ಕಾಯುತ್ತಾ ಇದ್ದಾರೆ. ಆವತ್ತು ಸಿನೆಮಾ ಬಿಡುಗಡೆಯಾಗಲಿದೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search