• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ

Tulunadu News Posted On July 22, 2025
0


0
Shares
  • Share On Facebook
  • Tweet It

ಬಿಹಾರ ಮೂಲದ ವ್ಯಕ್ತಿಗೆ 10 ಕೋಟಿ ವಂಚಿಸಿದ ರೋಶನ್ ಸಲ್ದಾನಾ – ಪ್ರಕರಣ ಸಿಐಡಿಗೆ

ದೇಶದ ವಿವಿದೆಡೆ ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ಕೊಟ್ಯಾಂತರ ರೂಪಾಯಿ ವಂಚಿಸಿ ಮಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ರೋಶನ್ ಸಲ್ದಾನಾ ವಂಚನೆ ಪ್ರಕರಣದಲ್ಲಿ ಒಂದು ಪ್ರಕರಣವನ್ನು ಇದೀಗ ಸಿಐಡಿ ತನಿಖೆ ನಡೆಸಲಿದೆ.
ದೇಶಾದ್ಯಂತ ಉದ್ಯಮಿಗಳನ್ನು ಗುರಿಯಾಗಿಸಿ ಮೋಸದ ಜಾಲದಲ್ಲಿ ಸಿಲುಕಿಸುತ್ತಿದ್ದ ರೋಶನ್ ಸಲ್ಮಾನ ವಿರುದ್ಧ ಬಿಹಾರ ಮೂಲದ ಉದ್ಯಮಿಯೊಬ್ಬರು ಮಂಗಳೂರಿನಲ್ಲಿ ಕೇಸು ದಾಖಲಿಸಿದ್ದಾರೆ. ತನಗೆ ಹತ್ತು ಕೋಟಿಗೂ ಮಿಕ್ಕಿ ಮೋಸ ಮಾಡಿದ್ದಾಗಿ ದೂರು ನೀಡಿದ್ದಾರೆ. ಹತ್ತು ಕೋಟಿಯಷ್ಟು ಮೊತ್ತದ ವಂಚನೆ ಪ್ರಕರಣ ದಾಖಲಾದರೆ, ಸಿಐಡಿಗೆ ಕೊಡಬೇಕೆಂಬ ಕಾನೂನಿನಂತೆ ಸದ್ರಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನ‌ರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಹಾರಾಷ್ಟ್ರ, ಬೆಂಗಳೂರಿನ ಉದ್ಯಮಿಗಳು ಸೇರಿ ಒಟ್ಟು ಐದು ಮಂದಿ ರೋಶನ್ ಸಲ್ಮಾನ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಸೋಮವಾರ ಬಿಹಾರ ಮೂಲದ ಉದ್ಯಮಿಯೊಬ್ಬರು ಹತ್ತು ಕೋಟಿ ವಂಚನೆ ಮಾಡಿರುವ ಬಗ್ಗೆ ದೂರು ನೀಡಿದ್ದಾರೆ. ಈವರೆಗೆ ಒಟ್ಟು 50 ಕೋಟಿಗೂ ಹೆಚ್ಚು ವಂಚನೆ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬಿಹಾರ ಮೂಲದ ಉದ್ಯಮಿಯ ಪ್ರಕರಣ ಹೊರತುಪಡಿಸಿ ಉಳಿದವನ್ನು ಮಂಗಳೂರು ಪೊಲೀಸರೇ ತನಿಖೆ ನಡೆಸಲಿದ್ದಾರೆ.

ಈ ನಡುವೆ ಸೋಮವಾರ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ತನಗೆ ರೋಶನ್‌ನಿಂದ 1 ಕೋಟಿ ರೂಪಾಯಿ ವಂಚನೆ ಆಗಿದೆ ಎಂದು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಅವರ ದೂರನ್ನು ಆಧರಿಸಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ರೋಶನ್ ವಿರುದ್ಧ ಸಿಐಡಿಗೆ ವಹಿಸಿದ ಪ್ರಕರಣ ಸೇರಿ ಎರಡು ಪ್ರಕರಣ ಈ ಹಿಂದೆ ದಾಖಲಾಗಿತ್ತು. ಇತ್ತೀಚೆಗೆ ಆತನನ್ನು ಬಂಧಿಸಿದ ಬಳಿಕ ಮಹಾರಾಷ್ಟ್ರದ ಉದ್ಯಮಿಗೆ 5 ಕೋಟಿ ರೂಪಾಯಿ ಮತ್ತು ಅಸ್ಸಾಂ ಮೂಲದ ವ್ಯಕ್ತಿಗೆ 20 ಲಕ್ಷ ವಂಚನೆ ಮಾಡಿರುವ ಕುರಿತಂತೆ ಪ್ರಕರಣ ದಾಖಲಾಗಿತ್ತು. ಇದಲ್ಲದೆ ಚಿತ್ರದುರ್ಗ ನಗರ ಠಾಣೆಯಲ್ಲೂ ಆಂಧ್ರದ ಉದ್ಯಮಿಗೆ 40 ಲಕ್ಷ ರೂಪಾಯಿ ವಂಚನೆ ಮಾಡಿರುವ ಕುರಿತು ಕೇಸ್ ದಾಖಲಾಗಿದೆ.

ವಂಚನೆಯ ಮೊತ್ತ 10 ಕೋಟಿ ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿದ್ದರೆ ಸಿಐಡಿಗೆ ವರ್ಗಾಯಿಸಲು ಅವಕಾಶವಿದೆ. ಅದರಂತೆ 10 ಕೋಟಿ ರೂಪಾಯಿ ಮೊತ್ತದ ಪ್ರಕರಣದ ತನಿಖೆ ನಡೆಸುವಂತೆ ಈ ಮೊದಲೇ ಸಿಐಡಿಗೆ ಪತ್ರ ಬರೆಯಲಾಗಿತ್ತು. ಬಿಹಾರ ಮೂಲದ ಉದ್ಯಮಿಯೊಬ್ಬರು ಭೂ ಖರೀದಿ ವಿಚಾರದಲ್ಲಿ ವಂಚನೆಗೆ ಒಳಗಾದ ಪ್ರಕರಣ ಇದಾಗಿದ್ದು, ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೆನ್ ಠಾಣೆಯಲ್ಲಿ ದಾಖಲಾಗಿರುವ ಇತರ ಪ್ರಕರಣಗಳ ತನಿಖೆಯನ್ನು ಪೊಲೀಸರೇ ನಡೆಸಲಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
Tulunadu News September 11, 2025
ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
Tulunadu News September 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
  • Popular Posts

    • 1
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 2
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 3
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • 4
      ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • 5
      ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ

  • Privacy Policy
  • Contact
© Tulunadu Infomedia.

Press enter/return to begin your search