ಶಿವದೂತ ಗುಳಿಗೆ ನಾಟಕದ “ಭೀಮರಾವ್” ರಮೇಶ್ ಕಲ್ಲಡ್ಕ ನಿಧನ!
Posted On July 23, 2025
0
ಖ್ಯಾತ ರಂಗಕರ್ಮಿ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮದಲ್ಲಿ ಎರಡು ದಶಕಗಳಿಗಿಂತಲೂ ಹೆಚ್ಚಿನ ಅವಧಿಯಿಂದ ಕಲಾವಿದರಾಗಿ ಕೆಲಸ ಮಾಡುತ್ತಿದ್ದ ಚಿ.ರಮೇಶ್ ಕಲ್ಲಡ್ಕ ವಿಧಿವಶರಾಗಿದ್ದಾರೆ. ಅವರು ಶಿವದೂತ ಗುಳಿಗೆಯ ಭೀಮರಾವ್ ಎಂಬ ಬ್ರಾಹ್ಮಣ ಪಾತ್ರದಿಂದ ಸಾಕಷ್ಟು ಚರ್ಚೆಯಲ್ಲಿದ್ದರು. ಅವರು ಕಲಾ ಸಂಗಮದ ಎಲ್ಲಾ ಸಾಮಾಜಿಕ, ಧಾರ್ಮಿಕ ನಾಟಕಗಳಲ್ಲಿ ನಟಿಸಿದ್ದರೂ ಅವರಿಗೆ ಶಿವದೂತ ಗುಳಿಗೆ ನಾಟಕ ಸಾಕಷ್ಟು ಖ್ಯಾತಿಯನ್ನು ತಂದುಕೊಟ್ಟಿತ್ತು. ಮೂರು ದಶಕಗಳಿಗಿಂತಲೂ ಹೆಚ್ಚಿನ ಸಮಯದಿಂದ ಅವರು ತುಳು ನಾಟಕ ಭೂಮಿಯಲ್ಲಿ ಸಕ್ರಿಯರಾಗಿದ್ದರು. ಅವರಿಗೆ 68 ವರ್ಷ ವಯಸ್ಸಾಗಿತ್ತು ಎಂದು ಹೇಳಲಾಗುತ್ತಿದೆ. ಅವರು ಛತ್ರಪತಿ ಶಿವಾಜಿ ನಾಟಕದಲ್ಲಿ ದಾದಾಜಿ ಕೊಂಡದೇವ ಪಾತ್ರವನ್ನು ನಿಭಾಯಿಸುತ್ತಿದ್ದರು. ರಮೇಶ್ ಕಲ್ಲಡ್ಕ ನಿಧನಕ್ಕೆ ಹಿರಿಕಿರಿ ಕಲಾವಿದರು ಕಂಬನಿ ಮಿಡಿದಿದ್ದಾರೆ.
Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
January 28, 2026









