• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

Tulunadu News Posted On July 25, 2025
0


0
Shares
  • Share On Facebook
  • Tweet It

ವಕೀಲೆ, ಸಾಹಿತಿ, ವಾಗ್ಮಿ, ನಿರೂಪಕಿ, ಕಥಾವಾಚಕಿ, ಹಿನ್ನಲೆ ಧ್ವನಿ ಕಲಾವಿದೆ, ಯೋಗಪಟು, ರಂಗಭೂಮಿ ಕಲಾವಿದೆ ರಾಜಶ್ರೀ ಜಯರಾಜ್ ಪೂಜಾರಿ ನಿಧನರಾಗಿದ್ದಾರೆ. ಕಳೆದೆರಡು ವರ್ಷಗಳಿಂದ ಕಾಯಿಲೆಯಿಂದ ಬಳಲುತ್ತಿದ್ದ ರಾಜಶ್ರೀ ಚಿಕಿತ್ಸೆ ಗುಣಮುಖವಾಗದೇ ಮರಳಿ ಬಾರದ ಲೋಕಕ್ಕೆ ಹೊರಟು ಹೋಗಿದ್ದಾರೆ. ಕಥೆ, ಪ್ರಬಂಧ, ಭಾಷಣ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಬಹುಮಾನ ಪಡೆಯುವುದರಲ್ಲಿ ಶಾಲಾ ದಿನಗಳಿಂದಲೇ ಸದಾ ಮುಂಚೂಣಿಯಲ್ಲಿದ್ದ ಹುಡುಗಿ. ತೀರಾ ಕಷ್ಟದ ಹಿನ್ನಲೆಯಿಂದ ಬಂದರೂ ಓದಿನಲ್ಲಿ ಸದಾ ಮುಂದಿದ್ದ ವಿದ್ಯಾರ್ತಿನಿಯಾಗಿದ್ದರು. ಬಂಟ್ವಾಳದಲ್ಲಿ ಜನಿಸಿ ಬಡಗ ಎಕ್ಕಾರುವಿನಲ್ಲಿ ಪ್ರೌಢಶಾಲಾ ಶಿಕ್ಷಣ, ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ, ಎಸ್ ಡಿಎಂ ಲಾ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಪಡೆದು ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿ ನಿರ್ವಹಿಸುತ್ತಿದ್ದರು. ಕನ್ನಡ ಕುವರಿ ಪ್ರಶಸ್ತಿ 2015, ಕನ್ನಡ ಧ್ವನಿ ಪ್ರಶಸ್ತಿ 2016, ಅಮರ ಬೊಳ್ಳಿಲು ಪ್ರಶಸ್ತಿ, ಬುಕ್ ಬ್ರಹ್ಮ ಜನ ಮೆಚ್ಚಿದ ಕಥೆ ಪ್ರಶಸ್ತಿ ಸಹಿತ ಸನ್ಮಾನಗಳು ಅವರಿಗೆ ಒಲಿದಿತ್ತು. ಇವರು ಬರೆದ ಅನೇಕ ಕತೆ, ಲೇಖನ, ವ್ಯಕ್ತಿ ಪರಿಚಯ, ಪ್ರಬಂಧಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ತುಳು ಪರಿಷತ್ ಮಂಗಳೂರು, ಮಕ್ಕಿಮನೆ ಕಲಾವೃಂದ ಮಂಗಳೂರು, ಸಾಹಿತ್ಯಾಸಕ್ತರ ಬಳಗ ಮೈಸೂರು, ಸಾಹಿತ್ಯ ಸಿಂಚನ ಬರಹಗಾರರ ಬಳಗ, ಇಂಚರ ಕಲಾವಿದರು ಸುಂಕದಕಟ್ಟೆ ಬಜ್ಪೆ ಸಹಿತ ಹಲವು ಸಂಘಟನೆ, ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಇವರ ನಿಧನಕ್ಕೆ ಜಿಲ್ಲೆಯ ಸಾಹಿತ್ಯ ಪ್ರೇಮಿಗಳು, ತುಳು ಹೋರಾಟಗಾರರು, ಸಂಘಟಕರು, ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ.

0
Shares
  • Share On Facebook
  • Tweet It




Trending Now
ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
Tulunadu News July 26, 2025
SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
Tulunadu News July 25, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
    • ಅಕ್ಟೋಬರ್ 2 ರಂದು ರಿಷಬ್ ಶೆಟ್ಟಿಯ ಕಾಂತಾರ ಅಧ್ಯಾಯ 1 ಬಿಡುಗಡೆ!
    • 2006 ರ ಮುಂಬೈ ಸರಣಿ ರೈಲು ಸ್ಫೋಟದ ಎಲ್ಲಾ 12 ಆರೋಪಿಗಳು ದೋಷಮುಕ್ತ!
  • Popular Posts

    • 1
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 2
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 3
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • 4
      ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 5
      6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..

  • Privacy Policy
  • Contact
© Tulunadu Infomedia.

Press enter/return to begin your search