• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

Tulunadu News Posted On July 25, 2025
0


0
Shares
  • Share On Facebook
  • Tweet It

ವಕೀಲೆ, ಸಾಹಿತಿ, ವಾಗ್ಮಿ, ನಿರೂಪಕಿ, ಕಥಾವಾಚಕಿ, ಹಿನ್ನಲೆ ಧ್ವನಿ ಕಲಾವಿದೆ, ಯೋಗಪಟು, ರಂಗಭೂಮಿ ಕಲಾವಿದೆ ರಾಜಶ್ರೀ ಜಯರಾಜ್ ಪೂಜಾರಿ ನಿಧನರಾಗಿದ್ದಾರೆ. ಕಳೆದೆರಡು ವರ್ಷಗಳಿಂದ ಕಾಯಿಲೆಯಿಂದ ಬಳಲುತ್ತಿದ್ದ ರಾಜಶ್ರೀ ಚಿಕಿತ್ಸೆ ಗುಣಮುಖವಾಗದೇ ಮರಳಿ ಬಾರದ ಲೋಕಕ್ಕೆ ಹೊರಟು ಹೋಗಿದ್ದಾರೆ. ಕಥೆ, ಪ್ರಬಂಧ, ಭಾಷಣ, ರಸಪ್ರಶ್ನೆ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾ ಬಹುಮಾನ ಪಡೆಯುವುದರಲ್ಲಿ ಶಾಲಾ ದಿನಗಳಿಂದಲೇ ಸದಾ ಮುಂಚೂಣಿಯಲ್ಲಿದ್ದ ಹುಡುಗಿ. ತೀರಾ ಕಷ್ಟದ ಹಿನ್ನಲೆಯಿಂದ ಬಂದರೂ ಓದಿನಲ್ಲಿ ಸದಾ ಮುಂದಿದ್ದ ವಿದ್ಯಾರ್ತಿನಿಯಾಗಿದ್ದರು. ಬಂಟ್ವಾಳದಲ್ಲಿ ಜನಿಸಿ ಬಡಗ ಎಕ್ಕಾರುವಿನಲ್ಲಿ ಪ್ರೌಢಶಾಲಾ ಶಿಕ್ಷಣ, ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ, ಎಸ್ ಡಿಎಂ ಲಾ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಪಡೆದು ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿ ನಿರ್ವಹಿಸುತ್ತಿದ್ದರು. ಕನ್ನಡ ಕುವರಿ ಪ್ರಶಸ್ತಿ 2015, ಕನ್ನಡ ಧ್ವನಿ ಪ್ರಶಸ್ತಿ 2016, ಅಮರ ಬೊಳ್ಳಿಲು ಪ್ರಶಸ್ತಿ, ಬುಕ್ ಬ್ರಹ್ಮ ಜನ ಮೆಚ್ಚಿದ ಕಥೆ ಪ್ರಶಸ್ತಿ ಸಹಿತ ಸನ್ಮಾನಗಳು ಅವರಿಗೆ ಒಲಿದಿತ್ತು. ಇವರು ಬರೆದ ಅನೇಕ ಕತೆ, ಲೇಖನ, ವ್ಯಕ್ತಿ ಪರಿಚಯ, ಪ್ರಬಂಧಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ತುಳು ಪರಿಷತ್ ಮಂಗಳೂರು, ಮಕ್ಕಿಮನೆ ಕಲಾವೃಂದ ಮಂಗಳೂರು, ಸಾಹಿತ್ಯಾಸಕ್ತರ ಬಳಗ ಮೈಸೂರು, ಸಾಹಿತ್ಯ ಸಿಂಚನ ಬರಹಗಾರರ ಬಳಗ, ಇಂಚರ ಕಲಾವಿದರು ಸುಂಕದಕಟ್ಟೆ ಬಜ್ಪೆ ಸಹಿತ ಹಲವು ಸಂಘಟನೆ, ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಇವರ ನಿಧನಕ್ಕೆ ಜಿಲ್ಲೆಯ ಸಾಹಿತ್ಯ ಪ್ರೇಮಿಗಳು, ತುಳು ಹೋರಾಟಗಾರರು, ಸಂಘಟಕರು, ವಿವಿಧ ಕ್ಷೇತ್ರಗಳ ಗಣ್ಯರು ಕಂಬನಿ ಮಿಡಿದಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search