• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!

Tulunadu News Posted On July 25, 2025
0


0
Shares
  • Share On Facebook
  • Tweet It

ಎಸ್ ಎಸ್ ಎಲ್ ಸಿಯಲ್ಲಿ ಪಾಸ್ ಆಗಲು ಒದ್ದಾಡುವ ಮಕ್ಕಳಿಗೆ, ಹೇಗಾದರೂ ಹತ್ತನೇ ತರಗತಿಯಲ್ಲಿ ಪಾಸ್ ಆದರೆ ಸಾಕಪ್ಪ ಎಂದುಕೊಂಡಿರುವ ಮಕ್ಕಳಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ಪಾಸ್ ಆಗಬೇಕಾದ ಅಂಕಗಳ ವಿಷಯದಲ್ಲಿ ಇನ್ನಷ್ಟು ಸರಳೀಕರಣ ನೀತಿಯನ್ನು ಅನುಸರಿಸಿದೆ. ಇನ್ನು ಮುಂದೆ ಹತ್ತನೇ ತರಗತಿ ಪಾಸಾಗಲು 35 ಅಂಕಗಳು ಬೇಕಾಗಿಲ್ಲ. ಕೇವಲ 30 ಅಂಕಗಳು ಇದ್ದರೂ ಸಾಕು. ಪಾಸೋ, ಫೈಲೋ ಎನ್ನುವ ತೂಗು ಉಯ್ಯಾಲೆಯಲ್ಲಿರುವ ಮಕ್ಕಳು ರಾಜ್ಯ ಸರಕಾರದ ಹೊಸ ನೀತಿಯಿಂದ ನೆಮ್ಮದಿಯ ನಿದ್ದೆಯನ್ನು ಮಾಡಬಹುದು. ಹೊಸ ನೀತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರತಿ ವಿಷಯದಲ್ಲಿ 30 ಅಂಕಗಳನ್ನು ಪಡೆದರೆ ಸಾಕು, ಅಂತಹ ವಿದ್ಯಾರ್ಥಿ ಪಾಸ್ ಎಂದು ನಿರ್ಧರಿಸಲಾಗುತ್ತದೆ.
ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಓವರ್ ಆಲ್ ಅಗ್ರಿಗೇಟ್ ಶೇಕಡಾ 33 ಪಾಸಿಂಗ್ ಅಂಕಕ್ಕೆ ಕಡಿತ ಮಾಡಲಾಗಿದೆ. ಹೀಗಾಗಿ ಇದೀಗ 625 ಕ್ಕೆ 206 ಅಂಕ ಪಡೆದ ವಿದ್ಯಾರ್ಥಿಗಳನ್ನು ಪಾಸ್ ಎಂದು ಘೋಷಿಸಲಾಗುತ್ತದೆ. ಈ ಹಿಂದೆ ಓವರ್ ಆಲ್ ಪಾಸಿಂಗ್ ಶೇಕಡಾ 35 ಇತ್ತು. ಹೀಗಾಗಿ ಪ್ರತಿ ವಿಷಯದಲ್ಲಿ ಕನಿಷ್ಟ 35 ಅಂಕಗಳನ್ನು ಪಡೆದರೆ ಮಾತ್ರ ಪಾಸ್ ಆಗುತ್ತಿತ್ತು. ಆದರೆ ಇದೀಗ ಪ್ರತಿ ವಿಷಯದಲ್ಲಿ 30 ಅಂಕ ಪಡೆದರೆ ಸಾಕು. ಒಟ್ಟು ಪಾಸಿಂಗ್ ಅಗ್ರೇಗೇಟ್ ಶೇಕಡಾ 33 ಬರಬೇಕು. ಸಾರ್ವಜನಿಕರಿಗೆ ಈ ಪ್ರಸ್ತಾವನೆಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಈ ಕುರಿತು ಆಕ್ಷೇಪ ಸಲ್ಲಿಸಿಕೆ ಅವಕಾಶ ನೀಡಲಾಗಿದೆ. ಆಂತರಿಕ ಮೌಲ್ಯಮಾಪನ ಹಾಗೂ ಬಾಹ್ಯ ಪರೀಕ್ಷೆ ಸೇರಿ ಒಟ್ಟಾರೆ ಸರಾಸರಿ ಶೇಕಡಾ 33 ರಷ್ಟು ಅಂಕಗಳನ್ನು ಪಡೆದರೆ ಪಾಸ್ ಎಂದು ನಿರ್ಧರಿಸಲಾಗಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

  • Privacy Policy
  • Contact
© Tulunadu Infomedia.

Press enter/return to begin your search