• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಡುಗೆ-ಆಹಾರ

ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!

Tulunadu News Posted On July 30, 2025
0


0
Shares
  • Share On Facebook
  • Tweet It

ಲೋಕಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿಯವರು ಇತ್ತೀಚೆಗೆ ಮೀಡಿಯಾಗೆ ಒಂದಕ್ಕೆ ಸಂದರ್ಶನ ನೀಡುವಾಗ ಅದರಲ್ಲಿ ಅವರು ಚೀನಾ ನಿರ್ಮಿತ ಡ್ರೋಣ್ ಒಂದನ್ನು ಕೈಯಲ್ಲಿ ಹಿಡಿದು “ಭಾರತದಲ್ಲಿ ಈ ಡ್ರೋಣ್ ನ ಬಿಡಿಭಾಗಗಳನ್ನು ಉತ್ಪಾದಿಸುವ ಕಂಪೆನಿಗಳೇ ಇಲ್ಲ. ಇಂತಹ ಕ್ಷೇತ್ರದಲ್ಲಿ ಭಾರತ ಕೆಲಸ ಮಾಡಬೇಕಿದೆ” ಎನ್ನುವ ಅರ್ಥದ ಮಾತುಗಳನ್ನು ಹೇಳಿದ್ದರು. ರಾಹುಲ್ ಗಾಂಧಿ ಹೇಳಿರುವ ಈ ಹೇಳಿಕೆಯನ್ನು ಡ್ರೋನ್ ಫೆಡರೇಶನ್ ಆಫ್ ಇಂಡಿಯಾ (ಡಿಎಫ್ ಐ) ಇದರ ಅಧ್ಯಕ್ಷ ಸ್ಮಿತ್ ಶಾ ವಿರೋಧಿಸಿದ್ದಾರೆ.

ಭಾರತದಲ್ಲಿ ಆಮದು ಆಗಲು ನಿಷೇಧಿತವಾಗಿರುವ ಡ್ರೋಣ್ ಒಂದನ್ನು ಹಿಡಿದು ಭಾರತ ಬೇರೆ ದೇಶಗಳೊಂದಿಗೆ ಸ್ಪರ್ಧಾತ್ಮಕವಾಗಿ ಬೆಳೆಯಬೇಕಾದರೆ ಇಂತಹ ಕ್ಷೇತ್ರದಲ್ಲಿಯೂ ಕೆಲಸ ಮಾಡಬೇಕು ಎಂದು ಹೇಳಿರುವ ರಾಹುಲ್ ಗಾಂಧಿಯವರಿಗೆ ಭಾರತದ ವಾಸ್ತವದ ಪರಿಚಯವೇ ಇಲ್ಲ ಎಂದು ಸ್ಮಿತ್ ಶಾ ಹೇಳಿದ್ದಾರೆ. ಯಾಕೆಂದರೆ ಇದೇ ಕ್ಷೇತ್ರದಲ್ಲಿ 518 ಕಂಪೆನಿಗಳು ವಿವಿಧ ರೀತಿಯ ಡ್ರೋಣ್ ಗಳನ್ನು ಉತ್ಪಾದಿಸುವಲ್ಲಿ ನಿರತವಾಗಿವೆ. ಇನ್ನು ಡ್ರೋಣ್ ಕಾಂಪೋನೆಂಟ್ ತಯಾರಿಕಾ ಸಂಸ್ಥೆಗಳೇ 50 ಕ್ಕೂ ಹೆಚ್ಚಿವೆ. ಅವು ಡ್ರೋನ್ ಬ್ಯಾಟರಿ, ಫ್ಲೈಟ್ ಕಂಟ್ರೋಲರ್ಸ್, ಮೋಟಾರ್ಸ್, ಪ್ರೋಪೆಲ್ಲರ್ಸ್, ರಿಸಿವರ್ಸ್, ಟ್ರಾನ್ಸ್ ಮೀಟರ್ ಹೀಗೆ ವಿವಿಧ ಬಿಡಿಭಾಗಗಳನ್ನು ತಯಾರಿಸುತ್ತವೆ. ಹಾಗಿರುವಾಗ ಆಮದು ನಿಷೇಧವಾಗಿರುವ ಚೈನೀಸ್ ಡ್ರೋನ್ ಒಂದನ್ನು ಹಿಡಿದು ಭಾರತ ಈ ಬಗ್ಗೆ ಯೋಚಿಸಬೇಕು, ಈ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂದು ಹೇಳಿ ಆ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಸಾವಿರಾರು ತಜ್ಞರನ್ನು ಅವಮಾನಿಸಿದಂತೆ ಆಗಿದೆ ಎನ್ನುವುದು ಡ್ರೋನ್ ಫೆಡರೇಶನ್ ಆಫ್ ಇಂಡಿಯಾ ಇದರ ಅಧ್ಯಕ್ಷರ ಮಾತುಗಳು. ಒಟ್ಟಿನಲ್ಲಿ ಚೀನಾದಲ್ಲಿ ನಿರ್ಮಿತವಾಗಿರುವ ಭಾರತದಲ್ಲಿ ಆಮದು ನಿಷೇಧವಾಗಿರುವ ದ್ರೋಣ್ ಒಂದನ್ನು ಕೈಯಲ್ಲಿ ಹಿಡಿದು ಈ ಕ್ಷೇತ್ರದಲ್ಲಿ ಭಾರತ ಕೆಲಸ ಮಾಡಬೇಕು ಎಂದು ಹೇಳಿರುವುದು ಎಷ್ಟು ಸರಿ ಎನ್ನುವುದು ಡ್ರೋಣ್ ನಿರ್ಮಾಣ ಕ್ಷೇತ್ರದಲ್ಲಿರುವವರ ಪ್ರಶ್ನೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search