• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

“2 ರೂಪಾಯಿ ಡಾಕ್ಟರ್” ನಿಧನ.. ಜನಸಾಮಾನ್ಯರ ಕಂಬನಿ

Tulunadu News Posted On August 4, 2025
0


0
Shares
  • Share On Facebook
  • Tweet It

ಕೇರಳದ ಕಣ್ಣೂರಿನಲ್ಲಿ ಬಡವರ ಪಾಲಿನ ದೇವರು ಎಂದೇ ಜನರಿಂದ ಪ್ರೀತಿ, ವಿಶ್ವಾಸವನ್ನು ಪಡೆದುಕೊಂಡು ಖ್ಯಾತರಾಗಿದ್ದ ಡಾ. ಎ.ಕೆ. ಗೋಪಾಲ್ ಅವರು ವಯೋಸಹಜ ಅನಾರೋಗ್ಯದಿಂದ 80 ನೇ ವಯಸ್ಸಿನಲ್ಲಿ ನಿಧನರಾದರು. ಇವರು ಕೇರಳದಲ್ಲಿ ಎರಡು ರೂಪಾಯಿ ಡಾಕ್ಟರು ಎಂದೇ ಪ್ರಖ್ಯಾತರಾಗಿದ್ದರು. ಅವರ ಪೂರ್ಣ ಹೆಸರು ಡಾ. ಎ.ಕೆ.ರೈರು ಗೋಪಾಲ್. ಕರ್ನಾಟಕದ ಮಂಡ್ಯದಲ್ಲಿ ಒಬ್ಬ ವೈದ್ಯರು ಈ ಹಿಂದೆ “ಐದು ರೂ ಡಾಕ್ಟರ್” ಎಂದೇ ಪ್ರಸಿದ್ಧರಾಗಿದ್ದರು. ಅದೇ ರೀತಿ ಕೇರಳದಲ್ಲಿ ರೈರು ಗೋಪಾಲ್ ಅವರು ಎರಡು ರೂಪಾಯಿ ವೈದ್ಯರೆಂದೇ ಪ್ರಸಿದ್ಧರು. ಇವರ ಅಗಲುವಿಕೆಗೆ ಕೇರಳದ ಸಿಎಂ ಪಿಣರಾಯಿ ವಿಜಯನ್ ಹಾಗೂ ಆತ್ಮೀಯರು ಕಂಬನಿ ಮಿಡಿದಿದ್ದಾರೆ.

ಕಣ್ಣೂರಿನಲ್ಲಿರುವ ಡಾ. ಗೋಪಾಲ್ ರ ನಿವಾಸಕ್ಕೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ, ” ಜನಸ್ನೇಹಿ ವೈದ್ಯರಾಗಿರುವ ಅವರ ಸೇವಾ ಮನೋಭಾವ ಅಸಂಖ್ಯಾತ ರೋಗಿಗಳಿಗೆ ಸಾಂತ್ವನ ನೀಡಿದೆ.” ಎಂದು ಸ್ಮರಿಸಿದರು. ಡಾ. ಗೋಪಾಲ್ ಅವರನ್ನು ಕೇರಳದ ಅತ್ಯುತ್ತಮ ಕುಟುಂಬ ವೈದ್ಯ ಎಂದು ಗುರುತಿಸಿ ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ಹಿನ್ನಲೆ: 50 ವರ್ಷಗಳ ಹಿಂದೆ ಕಣ್ಣೂರಿನ ತಮ್ಮ ಮನೆಯಲ್ಲಿಯೇ ಪುಟ್ಟ ಕ್ಲಿನಿಕ್ ಪ್ರಾರಂಭಿಸಿದ್ದ ಡಾ| ಗೋಪಾಲ್, ಕೇವಲ 2 ರೂಪಾಯಿಗೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಈ ಮೂಲಕ ಆರ್ಥಿಕವಾಗಿ ಹಿಂದುಳಿದವರ ಪಾಲಿಗೆ ಆಶಾಕಿರಣವಾಗಿದ್ದರು. ಕ್ರಮೇಣ 2 ರೂ ಡಾಕ್ಟರು ಎಂಬ ಹೆಸರು ಪಡೆದಿದ್ದರು. ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಸಮಯ ಅನುಕೂಲವಾಗಲೆಂದು ಬೆಳಗ್ಗಿನ ಜಾವ 3 ಗಂಟೆಗೆ ಕ್ಲಿನಿಕ್ ತೆರೆದಿರುತ್ತಿದ್ದರು. ಫೀಸ್ ಹಣ ತುಂಬಾ ಕಡಿಮೆ ಇದ್ದ ಕಾರಣ ಇವರ ಕ್ಲಿನಿಕ್ ಹೊರಗೆ ರೋಗಿಗಳು ನೆರೆಯುತ್ತಿದ್ದರು. ದಿನಕ್ಕೆ 300 ರೋಗಿಗಳನ್ನು ಪರೀಕ್ಷಿಸುತ್ತಿದ್ದದ್ದು ಇದೆ. ಕ್ರಮೇಣ ಶುಲ್ಕವನ್ನು 40 – 50 ರೂಗಳಿಗೆ ಏರಿಸಿದರೂ ಬೇರೆ ಆಸ್ಪತ್ರೆಗಳಿಗೆ ಹೋಲಿಸಿದರೆ ತುಂಬಾ ಕಡಿಮೆ ಇತ್ತು. ಅನಾರೋಗ್ಯದ ಕಾರಣದಿಂದ ಕಳೆದ ವರ್ಷದ ಮೇನಲ್ಲಿ ಡಾ| ಗೋಪಾಲ್ ತಮ್ಮ ಕ್ಲಿನಿಕ್ ಮುಚ್ಚಿದ್ದರು.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search