• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!

Tulunadu News Posted On August 4, 2025
0


0
Shares
  • Share On Facebook
  • Tweet It

2008 ರ ಮಾಲೆಗಾಂ ಸ್ಫೋಟದ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿ ಮುಂಬೈನ ಎನ್ ಐಎ ವಿಶೇಷ ಕೋರ್ಟ್ ತೀರ್ಪು ನೀಡಿದ ನಂತರ ಈಗ ಒಂದೊಂದೇ ವಿಷಯಗಳು ಬೆಳಕಿಗೆ ಬರುತ್ತಿದೆ. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಗಳ ಮೇಲೆ ಗಂಭೀರ ಆರೋಪ ಕೇಳಿ ಬರುತ್ತಿದೆ. ಸಾಧ್ವಿ ಪ್ರಜ್ಞಾ ಸಿಂಗ್, ಕರ್ನಲ್ ಪುರೋಹಿತ ಅವರ ಜೊತೆ ದೋಷಮುಕ್ತಗೊಂಡಿರುವ ನಿವೃತ್ತ ಮೇಜರ್ ರಮೇಶ್ ಉಪಾಧ್ಯಾಯ ಕೂಡ ಇಂತದ್ದೇ ಆರೋಪ ಮಾಡಿದ್ದಾರೆ. ಬೆಂಗಳೂರು ಆರ್ಟ್ ಆಫ್ ಲಿವಿಂಗ್ ನ ಮುಖ್ಯಸ್ಥರಾದ ಶ್ರೀ ರವಿಶಂಕರ್ ಗುರೂಜಿಯವರ ಹೆಸರು ಹೇಳುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು. ಒಪ್ಪದ್ದಕ್ಕೆ ಚಿತ್ರಹಿಂಸೆ ನೀಡಲಾಗಿತ್ತು ಎಂದು ಆರೋಪಿಸಿದ್ದಾರೆ.

ಜತೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ , ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ , ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಅವರ ಹೆಸರನ್ನು ಹೇಳುವಂತೆ ನನಗೆ ಜೈಲಿನಲ್ಲಿ ತೀವ್ರ ಚಿತ್ರಹಿಂಸೆ ನೀಡಲಾಗಿತ್ತು ಎಂದು ಕೂಡ ಅವರು ಹೇಳಿದ್ದಾರೆ.
ಭಾನುವಾರ ಸುದ್ದಿಸಂಸ್ಥೆಯೊಂದಕ್ಕೆ ಮಾತನಾಡಿದ ಅವರು ” ನನ್ನನ್ನು ಭಯೋತ್ಪಾದಕ ನಿಗ್ರಹ ದಳ 2008 ರ ಅಗಸ್ಟ್ ನಲ್ಲಿ ಕಸ್ಟಡಿಗೆ ತೆಗೆದುಕೊಂಡಿತ್ತು. ಈ ವೇಳೆ ನನಗೆ ತೀವ್ರ ದೈಹಿಕ ಮತ್ತು ಮಾನಸಿಕ ಚಿತ್ರಹಿಂಸೆ ನೀಡಲಾಗಿತ್ತು. ಹಲವು ವರ್ಷಗಳ ಕಾಲ ನನ್ನನ್ನು ಏಕಾಂತ ಸೆರೆವಾಸದಲ್ಲಿಡಲಾಗಿತ್ತು. ರಾಜಕೀಯ ಮತ್ತು ಧಾರ್ಮಿಕ ನಾಯಕರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಅವರ ಹೆಸರು ಹೇಳು. ಹೀಗಾದರಷ್ಟೇ ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು ಒತ್ತಡ ಹೇರಲಾಗಿತ್ತು ಎಂದರು.

ಆಗಿನ ಯುಪಿಎ ಸರಕಾರ ರಾಜಕೀಯ ಪ್ರೇರಿತವಾಗಿ ಪ್ರಕರಣದ ತನಿಖೆ ನಡೆಸಲಾಗಿದೆ. ಸೋನಿಯಾ ಗಾಂಧಿ, ದಿಗ್ವಿಜಯ್ ಸಿಂಗ್ ಮತ್ತು ಸುಶೀಲ್ ಕುಮಾರ್ ಶಿಂಧೆಯಂತಹ ನಾಯಕರ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕೆಲಸ ಮಾಡುತ್ತಿದ್ದರು. ವಿನಾಕಾರಣ 17 ವರ್ಷ ಜೈಲಲ್ಲಿ ಕಳೆಯಬೇಕಾಯಿತು ಎಂದು ಆರೋಪಿಸಿದ್ದಾರೆ.

ನಾನು ನಾರ್ಕೋ ಮತ್ತು ಪಾಲಿಗ್ರಾಫ್ ಪರೀಕ್ಷೆ ಮಾಡಿಸಿಕೊಳ್ಳಲು 3 ಬಾರಿ ಸ್ವಯಂಪ್ರೇರಿತವಾಗಿ ಮುಂದೆ ಬಂದಿದ್ದೆ. ಆದರೂ ಎಟಿಎಸ್ ಅದರ ವರದಿಯನ್ನು ಕೋರ್ಟ್ ಗೆ ಸಲ್ಲಿಸಲೇ ಇಲ್ಲ ಎಂದು ಉಪಾಧ್ಯಾಯ ಬೇಸರ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search