• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!

Tulunadu News Posted On August 4, 2025
0


0
Shares
  • Share On Facebook
  • Tweet It

2008 ರ ಮಾಲೆಗಾಂ ಸ್ಫೋಟದ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಿ ಮುಂಬೈನ ಎನ್ ಐಎ ವಿಶೇಷ ಕೋರ್ಟ್ ತೀರ್ಪು ನೀಡಿದ ನಂತರ ಈಗ ಒಂದೊಂದೇ ವಿಷಯಗಳು ಬೆಳಕಿಗೆ ಬರುತ್ತಿದೆ. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಗಳ ಮೇಲೆ ಗಂಭೀರ ಆರೋಪ ಕೇಳಿ ಬರುತ್ತಿದೆ. ಸಾಧ್ವಿ ಪ್ರಜ್ಞಾ ಸಿಂಗ್, ಕರ್ನಲ್ ಪುರೋಹಿತ ಅವರ ಜೊತೆ ದೋಷಮುಕ್ತಗೊಂಡಿರುವ ನಿವೃತ್ತ ಮೇಜರ್ ರಮೇಶ್ ಉಪಾಧ್ಯಾಯ ಕೂಡ ಇಂತದ್ದೇ ಆರೋಪ ಮಾಡಿದ್ದಾರೆ. ಬೆಂಗಳೂರು ಆರ್ಟ್ ಆಫ್ ಲಿವಿಂಗ್ ನ ಮುಖ್ಯಸ್ಥರಾದ ಶ್ರೀ ರವಿಶಂಕರ್ ಗುರೂಜಿಯವರ ಹೆಸರು ಹೇಳುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು. ಒಪ್ಪದ್ದಕ್ಕೆ ಚಿತ್ರಹಿಂಸೆ ನೀಡಲಾಗಿತ್ತು ಎಂದು ಆರೋಪಿಸಿದ್ದಾರೆ.

ಜತೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ , ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ , ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಅವರ ಹೆಸರನ್ನು ಹೇಳುವಂತೆ ನನಗೆ ಜೈಲಿನಲ್ಲಿ ತೀವ್ರ ಚಿತ್ರಹಿಂಸೆ ನೀಡಲಾಗಿತ್ತು ಎಂದು ಕೂಡ ಅವರು ಹೇಳಿದ್ದಾರೆ.
ಭಾನುವಾರ ಸುದ್ದಿಸಂಸ್ಥೆಯೊಂದಕ್ಕೆ ಮಾತನಾಡಿದ ಅವರು ” ನನ್ನನ್ನು ಭಯೋತ್ಪಾದಕ ನಿಗ್ರಹ ದಳ 2008 ರ ಅಗಸ್ಟ್ ನಲ್ಲಿ ಕಸ್ಟಡಿಗೆ ತೆಗೆದುಕೊಂಡಿತ್ತು. ಈ ವೇಳೆ ನನಗೆ ತೀವ್ರ ದೈಹಿಕ ಮತ್ತು ಮಾನಸಿಕ ಚಿತ್ರಹಿಂಸೆ ನೀಡಲಾಗಿತ್ತು. ಹಲವು ವರ್ಷಗಳ ಕಾಲ ನನ್ನನ್ನು ಏಕಾಂತ ಸೆರೆವಾಸದಲ್ಲಿಡಲಾಗಿತ್ತು. ರಾಜಕೀಯ ಮತ್ತು ಧಾರ್ಮಿಕ ನಾಯಕರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಅವರ ಹೆಸರು ಹೇಳು. ಹೀಗಾದರಷ್ಟೇ ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು ಒತ್ತಡ ಹೇರಲಾಗಿತ್ತು ಎಂದರು.

ಆಗಿನ ಯುಪಿಎ ಸರಕಾರ ರಾಜಕೀಯ ಪ್ರೇರಿತವಾಗಿ ಪ್ರಕರಣದ ತನಿಖೆ ನಡೆಸಲಾಗಿದೆ. ಸೋನಿಯಾ ಗಾಂಧಿ, ದಿಗ್ವಿಜಯ್ ಸಿಂಗ್ ಮತ್ತು ಸುಶೀಲ್ ಕುಮಾರ್ ಶಿಂಧೆಯಂತಹ ನಾಯಕರ ಒತ್ತಡಕ್ಕೆ ಮಣಿದು ಅಧಿಕಾರಿಗಳು ಕೆಲಸ ಮಾಡುತ್ತಿದ್ದರು. ವಿನಾಕಾರಣ 17 ವರ್ಷ ಜೈಲಲ್ಲಿ ಕಳೆಯಬೇಕಾಯಿತು ಎಂದು ಆರೋಪಿಸಿದ್ದಾರೆ.

ನಾನು ನಾರ್ಕೋ ಮತ್ತು ಪಾಲಿಗ್ರಾಫ್ ಪರೀಕ್ಷೆ ಮಾಡಿಸಿಕೊಳ್ಳಲು 3 ಬಾರಿ ಸ್ವಯಂಪ್ರೇರಿತವಾಗಿ ಮುಂದೆ ಬಂದಿದ್ದೆ. ಆದರೂ ಎಟಿಎಸ್ ಅದರ ವರದಿಯನ್ನು ಕೋರ್ಟ್ ಗೆ ಸಲ್ಲಿಸಲೇ ಇಲ್ಲ ಎಂದು ಉಪಾಧ್ಯಾಯ ಬೇಸರ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search