• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!

Tulunadu News Posted On August 6, 2025
0


0
Shares
  • Share On Facebook
  • Tweet It

ನ್ಯಾಶನಲ್ ಡೆಮೊಕ್ರೆಟಿಕ್ ಅಲಾಯೆನ್ಸ್ (ಎನ್ ಡಿಎ) ಅಧಿಕಾರಕ್ಕೆ ಬಂದು 11 ವರ್ಷಗಳಾಗುತ್ತಿವೆ. ಈ ಹಂತದಲ್ಲಿ ಭಾರತೀಯ ಜನತಾ ಪಾರ್ಟಿಯ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಅವರು ಹೊಸ ದಾಖಲೆಯೊಂದನ್ನು ಸದ್ದಿಲ್ಲದೇ ತಮ್ಮ ಹೆಸರಿನಲ್ಲಿ ಬರೆಸಿಕೊಂಡಿದ್ದಾರೆ. ಅದು ಯಾವುದೆಂದರೆ ಕೇಂದ್ರ ಗೃಹಸಚಿವರಾಗಿ ಅತೀ ದೀರ್ಘ ಅವಧಿಗೆ ಜವಾಬ್ದಾರಿಯನ್ನು ನಿರ್ವಹಿಸಿರುವುದು. ಅಮಿತ್ ಶಾ ಈಗಾಗಲೇ ದೇಶದ ಪ್ರಮುಖ ಹುದ್ದೆಯಲ್ಲಿ ಒಟ್ಟು 2258 ದಿನಗಳನ್ನು ಕಳೆದಿದ್ದು, ಇದು ಐತಿಹಾಸಿಕ ದಾಖಲೆಯಾಗಿ ಉಳಿಯಲಿದೆ. ಈ ಮೂಲಕ ಅವರು ತಮ್ಮದೇ ಪಕ್ಷದ ಹಳೆಹುಲಿ ಲಾಲ್ ಕೃಷ್ಣ ಅಡ್ವಾಣಿಯವರ ಅಧಿಕಾರಾವಧಿಯನ್ನು ಮೀರಿಸಿದ್ದಂತೆ ಆಗಿದೆ. ಅಮಿತ್ ಶಾ ಅವರು ಮೋದಿಯವರ ಎರಡನೇ ಇನ್ಸಿಂಗ್ಸ್ ಆರಂಭವಾದ 2019, ಮೇ 30 ರಂದು ಗೃಹ ಸಚಿವರಾಗಿ ಮೊದಲ ಬಾರಿ ಅಧಿಕಾರ ಸ್ವೀಕರಿಸಿದರು.

ಸಂಸತ್ತಿನ ಲೈಬ್ರರಿ ಕಟ್ಟಡದಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಮುಂಗಾರು ಅಧಿವೇಶನದ ಬಗ್ಗೆ ರೂಪುರೇಶೆಗಳ ಚರ್ಚೆಯ ಸಂದರ್ಭದಲ್ಲಿ ಮೋದಿಯವರು ಅಮಿತ್ ಶಾ ಅವರನ್ನು ಅಭಿನಂದಿಸಿದರು. ಈ ಸಾಧನೆಯಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ವಿಶೇಷ ಮೈಲಿಗಲ್ಲುಗಳು ಕೂಡ ಸೇರಿದೆ. ಕಾಂಗ್ರೆಸ್ಸಿನ ಗೋವಿಂದ ವಲ್ಲಭಬಾಯ್ ಪಂತ್ ಹಾಗೂ ಲಾಲ್ ಕೃಷ್ಣ ಅಡ್ವಾಣಿಯವರು ಅತ್ಯಧಿಕ ದಿನಗಳು ಗೃಹ ಸಚಿವರಾಗಿ ನಂತರದ ಸ್ಥಾನದಲ್ಲಿದ್ದಾರೆ. ಅಡ್ವಾಣಿಯವರು 2,256 ದಿನ ( ಮಾರ್ಚ್ 19, 1998 ರಿಂದ ಮೇ 22, 2004) ಹಾಗೂ ಗೋವಿಂದ ಭಲ್ಲಭ್ ಪಂಥ್ ಜನವರಿ 10 ರಿಂದ ಮಾರ್ಚ್ 7, 1961 ಒಟ್ಟು ಆರು ವರ್ಷ 56 ದಿನಗಳು ಅಧಿಕಾರದಲ್ಲಿದ್ದರು.

ಅಮಿತ್ ಶಾ ಅವರು ಮೇ 30, 2019 ರಿಂದ ಅಗಸ್ಟ್ 4, 2025 ರ ತನಕ ಒಟ್ಟು 2258 ದಿನಗಳನ್ನು ಪೂರೈಸಿ ಅದೇ ಸ್ಥಾನದಲ್ಲಿ ಮುಂದುವರೆಯುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search