• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!

Tulunadu News Posted On August 6, 2025
0


0
Shares
  • Share On Facebook
  • Tweet It

ನ್ಯಾಶನಲ್ ಡೆಮೊಕ್ರೆಟಿಕ್ ಅಲಾಯೆನ್ಸ್ (ಎನ್ ಡಿಎ) ಅಧಿಕಾರಕ್ಕೆ ಬಂದು 11 ವರ್ಷಗಳಾಗುತ್ತಿವೆ. ಈ ಹಂತದಲ್ಲಿ ಭಾರತೀಯ ಜನತಾ ಪಾರ್ಟಿಯ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಅವರು ಹೊಸ ದಾಖಲೆಯೊಂದನ್ನು ಸದ್ದಿಲ್ಲದೇ ತಮ್ಮ ಹೆಸರಿನಲ್ಲಿ ಬರೆಸಿಕೊಂಡಿದ್ದಾರೆ. ಅದು ಯಾವುದೆಂದರೆ ಕೇಂದ್ರ ಗೃಹಸಚಿವರಾಗಿ ಅತೀ ದೀರ್ಘ ಅವಧಿಗೆ ಜವಾಬ್ದಾರಿಯನ್ನು ನಿರ್ವಹಿಸಿರುವುದು. ಅಮಿತ್ ಶಾ ಈಗಾಗಲೇ ದೇಶದ ಪ್ರಮುಖ ಹುದ್ದೆಯಲ್ಲಿ ಒಟ್ಟು 2258 ದಿನಗಳನ್ನು ಕಳೆದಿದ್ದು, ಇದು ಐತಿಹಾಸಿಕ ದಾಖಲೆಯಾಗಿ ಉಳಿಯಲಿದೆ. ಈ ಮೂಲಕ ಅವರು ತಮ್ಮದೇ ಪಕ್ಷದ ಹಳೆಹುಲಿ ಲಾಲ್ ಕೃಷ್ಣ ಅಡ್ವಾಣಿಯವರ ಅಧಿಕಾರಾವಧಿಯನ್ನು ಮೀರಿಸಿದ್ದಂತೆ ಆಗಿದೆ. ಅಮಿತ್ ಶಾ ಅವರು ಮೋದಿಯವರ ಎರಡನೇ ಇನ್ಸಿಂಗ್ಸ್ ಆರಂಭವಾದ 2019, ಮೇ 30 ರಂದು ಗೃಹ ಸಚಿವರಾಗಿ ಮೊದಲ ಬಾರಿ ಅಧಿಕಾರ ಸ್ವೀಕರಿಸಿದರು.

ಸಂಸತ್ತಿನ ಲೈಬ್ರರಿ ಕಟ್ಟಡದಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಮುಂಗಾರು ಅಧಿವೇಶನದ ಬಗ್ಗೆ ರೂಪುರೇಶೆಗಳ ಚರ್ಚೆಯ ಸಂದರ್ಭದಲ್ಲಿ ಮೋದಿಯವರು ಅಮಿತ್ ಶಾ ಅವರನ್ನು ಅಭಿನಂದಿಸಿದರು. ಈ ಸಾಧನೆಯಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ವಿಶೇಷ ಮೈಲಿಗಲ್ಲುಗಳು ಕೂಡ ಸೇರಿದೆ. ಕಾಂಗ್ರೆಸ್ಸಿನ ಗೋವಿಂದ ವಲ್ಲಭಬಾಯ್ ಪಂತ್ ಹಾಗೂ ಲಾಲ್ ಕೃಷ್ಣ ಅಡ್ವಾಣಿಯವರು ಅತ್ಯಧಿಕ ದಿನಗಳು ಗೃಹ ಸಚಿವರಾಗಿ ನಂತರದ ಸ್ಥಾನದಲ್ಲಿದ್ದಾರೆ. ಅಡ್ವಾಣಿಯವರು 2,256 ದಿನ ( ಮಾರ್ಚ್ 19, 1998 ರಿಂದ ಮೇ 22, 2004) ಹಾಗೂ ಗೋವಿಂದ ಭಲ್ಲಭ್ ಪಂಥ್ ಜನವರಿ 10 ರಿಂದ ಮಾರ್ಚ್ 7, 1961 ಒಟ್ಟು ಆರು ವರ್ಷ 56 ದಿನಗಳು ಅಧಿಕಾರದಲ್ಲಿದ್ದರು.

ಅಮಿತ್ ಶಾ ಅವರು ಮೇ 30, 2019 ರಿಂದ ಅಗಸ್ಟ್ 4, 2025 ರ ತನಕ ಒಟ್ಟು 2258 ದಿನಗಳನ್ನು ಪೂರೈಸಿ ಅದೇ ಸ್ಥಾನದಲ್ಲಿ ಮುಂದುವರೆಯುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search