• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!

Tulunadu News Posted On August 7, 2025
0


0
Shares
  • Share On Facebook
  • Tweet It

ಎದೆ ಹಾಲು ಎನ್ನುವುದು ಪುಟ್ಟ ಹಸುಳೆಗಳಿಗೆ ಬಹಳ ಪ್ರಮುಖವಾದ ಆಹಾರ. ಹುಟ್ಟಿದ ಮಕ್ಕಳು ಮೊದಲು ಕುಡಿಯುವುದೇ ಎದೆ ಹಾಲು. ಸೂಕ್ತ ಸಮಯದಲ್ಲಿ ಎದೆಹಾಲು ಸಿಗದೇ ಇದ್ದರೆ ನಂತರ ಆ ಮಗುವಿನ ಬೆಳವಣಿಗೆಯಲ್ಲಿ ಅದು ಪರಿಣಾಮ ಬೀರುತ್ತದೆ. ಆದ್ದರಿಂದ ಎದೆಹಾಲು ಹಸುಳೆಗಳ ಜೀವ ಉಳಿಸಲು ಬಹಳ ಪ್ರಮುಖವಾದ ಅಂಶ. ಆದರೆ ಎಲ್ಲಾ ತಾಯಂದಿರಲ್ಲಿ ಹುಟ್ಟಿದ ಮಗುವಿಗೆ ಎದೆ ಹಾಲು ಕೊಡಿಸುವ ಸಾಮರ್ತ್ಯ ಇರುವುದಿಲ್ಲ. ಆದ್ದರಿಂದ ಅನಿವಾರ್ಯವಾಗಿ ಎದೆಹಾಲನ್ನು ಬೇರೆ ಮಹಿಳೆಯರಿಂದ ಪಡೆಯಬೇಕಾಗುತ್ತದೆ. ಹಾಗೆ ಎದೆಹಾಲು ನೀಡುವ ಮಹಿಳೆಯರೇ ಅನೇಕರು ಇದ್ದಾರೆ. ಮಾನವೀಯತೆಯ ದೃಷ್ಟಿಯಿಂದ ಈ ಸತ್ಕಾರ್ಯದಲ್ಲಿ ತೊಡಗಿದ್ದಾರೆ. ತಮಿಳುನಾಡಿನ ಮಹಿಳೆಯೊಬ್ಬರು ಕೇವಲ ತಮ್ಮ ಮಕ್ಕಳಿಗೆ ಹಾಲುಣಿಸುವುದು ಮಾತ್ರವಲ್ಲದೇ 22 ತಿಂಗಳಲ್ಲಿ ಬರೋಬ್ಬರಿ 300 ಲೀಟರ್ ಎದೆ ಹಾಲು ದಾನ ಮಾಡಿ ಹಲವು ಮಕ್ಕಳ ಜೀವ ಉಳಿಸಿದ್ದಾರೆ.

ಅವಧಿಪೂರ್ವ ಜನಿಸಿದ ಮಕ್ಕಳಿಗೆ ಮತ್ತು ಗಂಭೀರ ಅನಾರೋಗ್ಯದಿಂದ ಬಳಲುತ್ತಿರುವ ಮಕ್ಕಳಿಗೆ ಎದೆಹಾಲಿನ ತೀರಾ ಅಗತ್ಯವಿರುತ್ತದೆ. ಆದರೆ ಅಗತ್ಯ ಪ್ರಮಾಣದಲ್ಲಿ ಅದು ಲಭ್ಯವಿರುವುದಿಲ್ಲ. ಇಂತಹ ಹೊತ್ತಿನಲ್ಲಿ ಬೃಂದಾ ತಮ್ಮ ಎದೆಹಾಲು ದಾನ ಮಾಡಿ ನೂರಾರು ಮಕ್ಕಳ ಪ್ರಾಣ ಕಾಪಾಡಿದ್ದಾರೆ. ತಿರುಚಿರಾಪಲ್ಲಿಯ ಕಟ್ಟೂರಿನ ಸೆಲ್ವ ಬೃಂದಾ (33) ಈ ಸಾಧನೆ ಏಷ್ಯಾ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲಾಗಿದೆ.
2023 ರ ಏಪ್ರಿಲ್ ನಿಂದ 2025 ರ ಫೆಬ್ರವರಿವರೆಗೆ ಬೃಂದಾ ಅವರು 300.17 ಲೀಟರ್ ಹಾಲನ್ನು ಮಹಾತ್ಮಾ ಗಾಂಧಿ ಸ್ಮರಣಾರ್ಥ ಸರಕಾರಿ ಆಸ್ಪತ್ರೆಯ ಕ್ಷೀರ ಬ್ಯಾಂಕ್ ಗೆ ದಾನ ಮಾಡಿದ್ದಾರೆ. ಕಳೆದ ವರ್ಷ ಆಸ್ಪತ್ರೆಯ ಒಟ್ಟು ಹಾಲಿನಲ್ಲಿ ಇವರ ಪಾಲು ಅರ್ಧದಷ್ಟಿತ್ತು. ಈ ಸಾಧನೆಗಾಗಿ ವಿಶ್ವ ಸ್ತನ್ಯಪಾನ ಸಪ್ತಾಹದಂದು ಸನ್ಮಾನಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ

0
Shares
  • Share On Facebook
  • Tweet It




Trending Now
ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
Tulunadu News August 7, 2025
ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
Tulunadu News August 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
  • Popular Posts

    • 1
      ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • 2
      ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • 3
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • 4
      "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • 5
      ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!

  • Privacy Policy
  • Contact
© Tulunadu Infomedia.

Press enter/return to begin your search