• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

Tulunadu News Posted On August 8, 2025
0


0
Shares
  • Share On Facebook
  • Tweet It

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ, ಹಿಂದೂ ರುದ್ರಭೂಮಿಗಳ ನವೀಕರಣ, ಸ್ತ್ರೀ ಸಬಲೀಕರಣ, ಮದ್ಯ ವಿರೋಧಿ ಶಿಬಿರ, ಮೊದಲಾದ ಸಾಮಾಜಿಕ ಕಾರ್ಯಗಳ ಮೂಲಕ ದೇಶಕ್ಕೇ ಮಾದರಿಯಾಗಿದೆ. ಇಂತಹ ಕ್ಷೇತ್ರದ ಬಗ್ಗೆ ಪೂರ್ವಾಗ್ರಹ ಪೀಡಿತ ಅಜೆಂಡಾಗಳನ್ನು ಹೊಂದಿರುವವರು ಅಪಪ್ರಚಾರ ನಡೆಸುತ್ತಿದ್ದು ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿ ಭಕ್ತರು ಸಹನೆ ಕಳೆದುಕೊಳ್ಳಲು ಕಾರಣವಾಗುತ್ತಿದೆ. ನಮ್ಮ ಶ್ರದ್ಧಾ ಕೇಂದ್ರಗಳ ವಿರುದ್ಧ ಯಾರು ಏನು ಮಾಡಿದರೂ ನಡೆಯುತ್ತದೆ ಎನ್ನುವ ವಾತಾವರಣ ನಿರ್ಮಿಸಲಾಗುತ್ತಿದ್ದು ಇದೇ ರೀತಿ ಬೇರೆಯವರ ಶ್ರದ್ಧಾ ಕೇಂದ್ರಗಳ ವಿರುದ್ಧ ಆಗಿದ್ದರೆ ದೇಶದಲ್ಲಿ ಏನಾಗುತ್ತಿತ್ತು? ಆದರೆ ಹಿಂದೂಗಳು ವಿಶಾಲ ಚಿಂತನೆಯುಳ್ಳವರಾಗಿದ್ದು ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದಾರೆ. ಹಾಗಂತ ಇದು ಪದೇ ಪದೇ ಪುನರಾವರ್ತನೆಯಾಗಿ ಹಿಂದೂಗಳು ಎದ್ದು ನಿಂತರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಈ ಹಿಂದೆ ಎಡಪಂಥೀಯರು ಹಾಗೂ ಹಿಂದೂ ವಿರೋಧಿ ಶಕ್ತಿಗಳೆಲ್ಲಾ ರಾಮಸೇತು, ತಿರುಪತಿ, ಕಾಶಿ, ಶಬರಿಮಲೈ, ಈಶಾ, ಅನಂತಪದ್ಮನಾಭ, ಸೇರಿದಂತೆ ಹಿಂದೂ ಶ್ರದ್ದಾ ಕೇಂದ್ರಗಳ ವಿರುದ್ಧ ಷಡ್ಯಂತರ ರೂಪಿಸಿದ್ದು ಇದೀಗ ಧರ್ಮಸ್ಥಳ ಅವರ ಟಾರ್ಗೆಟ್ ಆಗಿದೆ. ಎಸ್ಐಟಿ ತನಿಖೆ ಯಾವ ಹಂತಕ್ಕೆ ಬೇಕಾದರೂ ಹೋಗಲಿ. ಅಂತಿಮವಾಗಿ ಸತ್ಯಾಂಶ ಹೊರ ಬಂದು ಶ್ರೀ ಕ್ಷೇತ್ರದಲ್ಲಿ ಯಾವುದೇ ಲೋಪವಾಗಿಲ್ಲ ಎಂಬುದು ಬಹಿರಂಗವಾದರೆ, ಕ್ಷೇತ್ರದ ತೇಜೋವಧೆ ಮಾಡಿ, ಭಕ್ತರ ನಂಬಿಕೆಗಳನ್ನು ಘಾಸಿಗೊಳಿಸಿದ ದುರುಳರಿಗೆ ಯಾವ ಶಿಕ್ಷೆ ಎಂಬುದನ್ನು ಸರ್ಕಾರ ತಿಳಿಸಬೇಕು ಮತ್ತು ಕೂಡಲೇ ಈ ಎಲ್ಲಾ ವಿಚಾರಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿ ಭಕ್ತರು ಬೀದಿಗಿಳಿಯುವ ಮುನ್ನ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಶಾಸಕರು ಆಗ್ರಹಿಸಿದರು.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search