• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ – ಶಾಸಕ ವಿಶ್ವನಾಥ!

Tulunadu News Posted On August 9, 2025
0


0
Shares
  • Share On Facebook
  • Tweet It

ಅಗಸ್ಟ್ 16 ರಂದು ಯಲಹಂಕದಿಂದ ಧರ್ಮಸ್ಥಳಕ್ಕೆ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಸ್. ಆರ್. ವಿಶ್ವನಾಥ್ ಅವರು ಹೇಳಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ತುಂಬಾ ಪವರ್ ಫುಲ್, ಮಂಜುನಾಥ ಸ್ವಾಮಿಯ ಮೇಲೆ ಆಣೆ ಮಾಡಲು ಹೆದರುತ್ತಾರೆ. ಅಂತಹ ಮಂಜುನಾಥನ ಸನ್ನಿಧಿ ಧರ್ಮಸ್ಥಳದ ಮೇಲೆ ವಿನಾಕಾರಣ ಅಪಪ್ರಚಾರ ಮಾಡಲಾಗುತ್ತಿದೆ. ಹಾಗಾಗಿ 200 ಕ್ಕೂ ಹೆಚ್ಚು ಕಾರುಗಳ ಮೂಲಕ ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷವಾಕ್ಯದೊಂದಿಗೆ ಕಾರುಗಳಿಗೆ ಕೇಸರಿ ಧ್ವಜ ಕಟ್ಟಿಕೊಂಡು ಧರ್ಮಸ್ಥಳಕ್ಕೆ ತೆರಳಲಿದ್ದೇವೆ. ಅಲ್ಲಿ ದೇವರ ದರ್ಶನ ಪಡೆದು ವಾಪಾಸು ಬರಲಿದ್ದೇವೆ. ನಮ್ಮ ನಂತರ ರಾಜ್ಯದ ಇತರೆ ಕ್ಷೇತ್ರಗಳಿಂದಲೂ ಈ ಅಭಿಯಾನ ಆರಂಭವಾಗಲಿದೆ ಎಂದು ಅವರು ಹೇಳಿದರು.

ಧರ್ಮಸ್ಥಳದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಘಟನೆಗಳು ಬೇಸರ ತರಿಸಿವೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಧರ್ಮಸ್ಥಳ ಶ್ರೇಷ್ಟ ಹಾಗೂ ಪವಿತ್ರವಾದ ಕ್ಷೇತ್ರ. ಹೀಗಾಗಿ ಧರ್ಮಸ್ಥಳದ ಜೊತೆ ನಾವಿದ್ದೇವೆ ಎಂದು ಬಿಜೆಪಿ ಮುಖಂಡ, ಶಾಸಕ ಎಸ್ ಆರ್ ವಿಶ್ವನಾಥ ಹೇಳಿದರು. ಇನ್ನೂ ಪ್ರಕರಣದಲ್ಲಿ ಅತ್ಯಾಚಾರ ಹಾಗೂ ಕೊಲೆಯಾದವರನ್ನು ನಾನು ಹೂತು ಹಾಕಿದ್ದೇನೆ ಎಂಬ ಅನಾಮಿಕನ ಹೇಳಿಕೆ ನೋಡಿದ್ರೆ, ಅವನನ್ನೇ ಮೊದಲು ಗಲ್ಲಿಗೇರಿಸಬೇಕು. ಅತ್ಯಾಚಾರ ಕೊಲೆ ಆಗಿರೋದು ಗೊತ್ತಿದ್ದೂ ಹೂತು ಹಾಕಿದ್ರೆ ಆತ ಕೂಡ ಆರೋಪಿಯೇ. ಹಾಗಾಗಿ ಮೊದಲು ಆತನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು. ಈತ ಅನಾಥ ಶವಗಳನ್ನು ಊಳುವವನಾಗಿದ್ದು, ಅನಾಥ ಶವಗಳ ಮೇಲಿನ ಚಿನ್ನಾಭರಣ ಕದ್ದು ಅಂತ ಕೆಲಸದಿಂದ ತೆಗೆದು ಹಾಕಿದ್ರು ಅಂತ ಗೊತ್ತಾಗಿದೆ. ಈಗ ಬಂದು ಮಂಜುನಾಥ ಸ್ವಾಮಿಯ ಮೇಲೆಯೇ ಅಪಪ್ರಚಾರ ಮಾಡುತ್ತಿದ್ದಾನೆ ಅಂತ ವಾಗ್ದಾಳಿ ನಡೆಸಿದರು.

0
Shares
  • Share On Facebook
  • Tweet It




Trending Now
ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
Tulunadu News August 9, 2025
ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
Tulunadu News August 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
    • ಬೈಕಂಪಾಡಿಯಲ್ಲಿ ಅಮೋನಿಯಾ ಅನಿಲ ಸೋರಿಕೆ, ನಾಲ್ವರು ತೀವ್ರ ಅಸ್ವಸ್ಥ!
    • 2008 ಮಾಲೆಗಾಂ ಬಾಂಬ್ ಬ್ಲಾಸ್ಟ್ ಪ್ರಕರಣ: ಪ್ರಗ್ಯಾ ಸಿಂಗ್, ಕರ್ನಲ್ ಪುರೋಹಿತ್ ಸೇರಿ 7 ಜನ ದೋಷಮುಕ್ತ!
    • ಕೇರಳದ ಸನ್ಯಾನಿಸಿಯರಿಗೆ ಜಾಮೀನು ಇಲ್ಲ; ಕಾಂಗ್ರೆಸ್ ಪ್ರತಿಭಟನೆ
  • Popular Posts

    • 1
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • 2
      ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • 3
      ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • 4
      ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • 5
      ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!

  • Privacy Policy
  • Contact
© Tulunadu Infomedia.

Press enter/return to begin your search