• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು

Tulunadu News Posted On August 13, 2025
0


0
Shares
  • Share On Facebook
  • Tweet It

ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಕೆಂಪುಕಲ್ಲಿನ ಕೊರತೆ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಜನಸಾಮಾನ್ಯರು ಮನೆಯ ಗೃಹಪ್ರವೇಶಕ್ಕಾಗಿ ಒಳ್ಳೆಯ ಮಹೂರ್ತವನ್ನು ಜ್ಯೋತಿಷ್ಯರ ಬಳಿ ಕೇಳಿರುತ್ತಾರೆ. ವೈದಿಕರು ಹೇಳಿದ ದಿನವನ್ನು ನಿಗದಿಪಡಿಸಿರುತ್ತಾರೆ. ಆದರೆ ಇತ್ತ ಕೆಂಪುಕಲ್ಲುಗಳೇ ಸಿಗದೇ ಮನೆಯ ನಿರ್ಮಾಣದ ಕೆಲಸ ಅರ್ಧಕ್ಕೆ ನಿಂತಿರುವುದು ಕುಟುಂಬದ ಎಲ್ಲರಿಗೂ ತೀವ್ರ ಬೇಸರವನ್ನು ಉಂಟು ಮಾಡುತ್ತಿದೆ. ಇಂತಹ ಅಸಂಖ್ಯಾತ ಘಟನೆಗಳು ನಮ್ಮ ನಿಮ್ಮ ಸುತ್ತಮುತ್ತಲೂ ನಡೆಯುತ್ತಲೇ ಇದೆ. ಇಂತಹ ಪರಿಸ್ಥಿತಿಯಲ್ಲಿ ಹೇಗಾದರೂ ಮಾಡಿ ಮನೆ ಕಟ್ಟಬೇಕೆಂದು ಬಯಸುವ ಜನರಿಗೆ ಎಲ್ಲಿಂದಲಾದರೂ ಕೆಂಪುಕಲ್ಲು ಸಿಕ್ಕಿದರೆ ಸಾಕು ಎನ್ನುವ ಮನಸ್ಥಿತಿಯಲ್ಲಿ ಇರುತ್ತಾರೆ. ಅಂತವರಿಗಾಗಿ ಈಗ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಂಪುಕಲ್ಲು ಸಾಗಿಸುವವರು ಇದ್ದಾರೆ. ಅವರಿಗೆ ಈಗ ಸಿಕ್ಕಾಪಟ್ಟೆ ಡಿಮ್ಯಾಂಡ್. ಅವರು ಓವರ್ ಲೋಡ್ ತುಂಬಿಸಿಕೊಂಡು ಬರುತ್ತಾರೆ. ಅಂತಹ ಲಾರಿಯೊಂದನ್ನು ಮಂಗಳವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಿಡಿದಿದ್ದಾರೆ. ಆರ್ ಟಿಒ ಇನ್ಸಪೆಕ್ಟರ್ ಪ್ರಮೋದ್ ಭಟ್ ದಾಳಿ ನಡೆಸಿ ಲಾರಿ ಚಾಲಕರಿಗೆ ನೋಟಿಸ್ ನೀಡಿದ್ದಾರೆ. ಸುಮಾರು ನಾಲ್ಕು ಲಾರಿಗಳನ್ನು ತಡೆದು ನಿಲ್ಲಿಸಿದ ಅವರು ಬಳಿಕ ಬಿಸಿರೋಡಿನ ಖಾಸಗಿ ವೇ ಬ್ರಿಡ್ಜ್ ನಲ್ಲಿ ತೂಕ ಮಾಡಲಾಗಿ ನೋಟಿಸು ನೀಡಿದ್ದಾರೆ. ಜಿಲ್ಲೆಯಲ್ಲಿ ಕೆಂಪುಕಲ್ಲಿನ ಸಮಸ್ಯೆ ಆರಂಭವಾದ ಬಳಿಕ ಅಕ್ರಮವಾಗಿ ಕೇರಳದಿಂದ ದಕ ಜಿಲ್ಲೆಯತ್ತ ಕಲ್ಲುಗಳು ದುಪ್ಪಟ್ಟು ಹಣಕ್ಕೆ ಮಾರಾಟ ಮಾಡುವ ದಂಧೆ ಆರಂಭವಾಗಿದೆ.

0
Shares
  • Share On Facebook
  • Tweet It




Trending Now
ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
Tulunadu News August 13, 2025
ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
Tulunadu News August 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್
    • ಎದೆಹಾಲು ದಾನದಲ್ಲಿ ದಾಖಲೆ ಬರೆದ ತಮಿಳುನಾಡಿನ ಮಹಿಳೆ!
    • ಭಾರತದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿದ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ದಾಖಲೆ!
    • ಮಾಲೆಗಾಂ ಸ್ಫೋಟದಲ್ಲಿ ಯೋಗಿ, ಭಾಗವತ್ ಹೆಸರು ಹೇಳಲು ಒತ್ತಡ ಇತ್ತು ಎಂದ ನಿವೃತ್ತ ಮೇಜರ್!
    • "2 ರೂಪಾಯಿ ಡಾಕ್ಟರ್" ನಿಧನ.. ಜನಸಾಮಾನ್ಯರ ಕಂಬನಿ
    • ಬಂಧೀಖಾನೆ ಮುಖ್ಯಸ್ಥರಾಗಿ ದಯಾನಂದ ಮತ್ತೆ ಸೇವೆಯಲ್ಲಿ!
  • Popular Posts

    • 1
      ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • 2
      ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • 3
      ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
    • 4
      ಅಗಸ್ಟ್ 16 ರಂದು ಧರ್ಮಸ್ಥಳ ಚಲೋ ಅಭಿಯಾನ - ಶಾಸಕ ವಿಶ್ವನಾಥ!
    • 5
      ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search