• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!

Tulunadu News Posted On August 20, 2025
0


0
Shares
  • Share On Facebook
  • Tweet It

ಧರ್ಮಸ್ಥಳದ ಪರ ವಿರುದ್ಧದ ಚರ್ಚೆಗಳು ಕಾವು ಪಡೆಯುತ್ತಿರುವ ಈ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು ಏನು ಹೇಳುತ್ತಾರೆ ಎನ್ನುವ ಕುತೂಹಲ ಎಲ್ಲರಲ್ಲಿಯೂ ಇತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅವರು ಮಾತನಾಡಿದ್ದು, ” ಈ ಆರೋಪಗಳು ಆಧಾರರಹಿತ ಮತ್ತು ಸುಳ್ಳು. ಇಂತಹ ಆರೋಪಗಳಿಂದ ನಾನು ಬಹಳ ನೊಂದಿದ್ದೇನೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಷಯಗಳನ್ನು ಬಿಂಬಿಸುವ ರೀತಿ ನೈತಿಕವಾಗಿ ತಪ್ಪು. ಈ ಕಾರಣಗಳಿಗಾಗಿ ಎಸ್ ಐಟಿ ರಚನೆ ಕುರಿತ ಸರಕಾರದ ನಿರ್ಧಾರವನ್ನು ನಾವು ಅಂದೇ ಸ್ವಾಗತಿಸಿದ್ದೆವು. ಅದನ್ನು ರಚಿಸಿದ್ದು ಒಳ್ಳೆಯದು. ಸತ್ಯ ಒಮ್ಮೆಗೆ ಹೊರಬರಬೇಕು. ಆರೋಪ ಮಾಡಿ, ಅವು ಹಾಗೆಯೇ ಉಳಿಯುವುದು ಒಳ್ಳೆಯದಲ್ಲ. ಹೀಗಾಗಿ ಆರೋಪಗಳ ಕುರಿತು ತ್ವರಿತವಾಗಿ ತನಿಖೆ ನಡೆಸಬೇಕಿದೆ” ಎಂದು ಮನವಿ ಮಾಡಿದರು.

“ತನಿಖೆ ಆದಷ್ಟು ಬೇಗ ಮುಕ್ತಾಯಗೊಂಡು ಸಮಸ್ಯೆ ಬಗೆಹರಿಯಬೇಕೆಂದು ನಾವು ಬಯಸುತ್ತೇವೆ. ನಮ್ಮ ಎಲ್ಲಾ ದಾಖಲೆ ಹಾಗೂ ವಿಶೇಷವಾಗಿ ನಾವು ಎಲ್ಲದಕ್ಕೂ ತೆರೆದುಕೊಂಡಿದ್ದೇವೆ. ಎಸ್ ಐಟಿ ಕೂಲಂಕುಶವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು” ಎಂದು ಹೇಳಿದರು. ಇದೇ ವೇಳೆ ” ಧರ್ಮಸ್ಥಳ ಮತ್ತು ಅದರ ಮೇಲಿರುವ ನಂಬಿಕೆಯನ್ನು ಗುರಿಯಾಗಿಸಿ ಕಳೆದ 14 ವರ್ಷಗಳಿಂದ ಸಂಘಟಿತ ಅಭಿಯಾನ ನಡೆಯುತ್ತಿದೆ” ಎಂದು ಆರೋಪಿಸಿದ ಅವರು ” ನಾವು ಮಾಡುತ್ತಿರುವ ಒಳ್ಳೆಯ ಕೆಲಸಗಳಿಂದ ಬೇಸತ್ತ ಕೆಲವು ಶಕ್ತಿಗಳು ಸುಳ್ಳು ಪ್ರಚಾರವನ್ನು ನಡೆಸುತ್ತವೆ. ಆದರೆ ನಾವು ವಿಚಲಿತರಾಗಿರುವುದಿಲ್ಲ” ಎಂದರು.

ಕೆಲವು ಸಾಮಾಜಿಕ ಮಾಧ್ಯಮಗಳು ಯುವ ಮನಸ್ಸುಗಳನ್ನು ಕಲುಷಿತಗೊಳಿಸಿವೆ ಎಂದು ಧರ್ಮಾಧಿಕಾರಿಗಳು ಕಳವಳ ವ್ಯಕ್ತಪಡಿಸಿದರು. ಸೌಜನ್ಯಳಿಗೆ ನ್ಯಾಯಕ್ಕಾಗಿ ಆಗ್ರಹಗಳು ಮತ್ತೆ ಮುನ್ನಲೆಗೆ ಬಂದಿರುವ ಬಗ್ಗೆ ಮಾತನಾಡಿದ ಹೆಗ್ಗಡೆ ” ಅಂತಹ ಘಟನೆ ನಡೆದಿದೆ ಎಂದು ನಮಗೆ ತಿಳಿಯುತ್ತಿದ್ದಂತೆ ಸರಕಾರಕ್ಕೆ ಅದನ್ನು ಅದೇ ದಿನ ತಿಳಿಸಿದ್ದೇವು. ನಮ್ಮ ಕುಟುಂಬದ ಮೇಲಿನ ಆರೋಪಗಳು ಆಧಾರರಹಿತ. ಯಾರ ಮೇಲೆ ಕೃತ್ಯದ ಆರೋಪ ಹೊರಿಸಲಾಗುತ್ತಿದೆಯೋ, ಅವರು ಆ ಸಮಯದಲ್ಲಿ ಶಿಕ್ಷಣಕ್ಕಾಗಿ ವಿದೇಶದಲ್ಲಿದ್ದರು. ಇದಕ್ಕೆ ಪೂರಕವಾದ ದಾಖಲೆಗಳನ್ನು ಒದಗಿಸಿದ್ದೇವೆ. ಇವು ದುಷ್ಟ ಪ್ರಚಾರಗಳು” ಎಂದು ಕಿಡಿಕಾರಿದರು.

ಇದೇ ವೇಳೆ ಆಸ್ತಿ ದುರ್ಬಳಕೆ ಆರೋಪವನ್ನು ತಿರಸ್ಕರಿಸಿದ ಹೆಗ್ಗಡೆ ” ನಮ್ಮ ಪರಿವಾರ ಅತ್ಯಲ್ಪ ಆಸ್ತಿಯನ್ನು ಹೊಂದಿದೆ. ಅವುಗಳನ್ನು ದಾಖಲೆ ಸಮೇತ ಟ್ರಸ್ಟ್ ನೋಡಿಕೊಳ್ಳುತ್ತದೆ. ಆಸ್ತಿ ಸ್ವಾಧೀನದ ಬಗ್ಗೆಯೂ ದಾಖಲೆ ಪುರಾವೆಗಳಿವೆ. ಟ್ರಸ್ಟ್ ಅನ್ನು ನಮ್ಮ ಪರಿವಾರದ ಸದಸ್ಯರು ಪಾರದರ್ಶಕವಾಗಿ ನಿರ್ವಹಿಸುತ್ತಿದ್ದಾರೆ. ನಾವು ನಾಲ್ವರು ಸಹೋದರರು, ಒಬ್ಬ ಸಹೋದರ ಬೆಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ನೋಡಿಕೊಳ್ಳುತ್ತಾರೆ. ಇನ್ನೊಬ್ಬ ಸಹೋದರ ಇಲ್ಲಿ ದೇವಾಲಯ ಮತ್ತು ಸಾಮಾಜಿಕ ಕಾರ್ಯಗಳನ್ನು ನೋಡಿಕೊಳ್ಳುತ್ತಾರೆ. ನನಗೆ ಒಬ್ಬ ಸಹೋದರಿ ಇದ್ದಾರೆ. ಅವರ ಪತಿ ಧಾರವಾಡದ ಎಸ್ ಡಿಎಂ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದಾರೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ಟ್ರಸ್ಟ್ ಹೆಸರಿನಲ್ಲಿವೆ” ಎಂದರು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search