• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!

Tulunadu News Posted On August 20, 2025
0


0
Shares
  • Share On Facebook
  • Tweet It

ಒಂದಾದ ಬಳಿಕ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿದ ಉದ್ದವ್ ಠಾಕ್ರೆ ಹಾಗೂ ರಾಜ್ ಠಾಕ್ರೆ ಚುನಾವಣೆಯಲ್ಲಿ ಘನಘೋರ ಸೋಲನ್ನು ಅನುಭವಿಸಿದ್ದಾರೆ. ಈ ಮೂಲಕ ಪ್ರಥಮ ಚುಂಬನಂ ದಂತಭಗ್ನಂ ಎಂದೇ ಹೇಳಬಹುದಾಗಿದೆ. ಉದ್ದವ್ ಬಣದ ಶಿವಸೇನೆ ಹಾಗೂ ರಾಜ್ ಠಾಕ್ರೆಯವರ ಮಹಾರಾಷ್ಟ್ರದ ನವನಿರ್ಮಾಣ್ ಸೇನಾ ಬಿಇಎಸ್ ಟಿ (ಬೆಸ್ಟ್) ಎಂಪ್ಲಾಯಿಸ್ ಕೋ- ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಚುನಾವಣೆಯಲ್ಲಿ ಅಭೂತಪೂರ್ವ ಸೋಲನ್ನು ಕಂಡಿದ್ದಾರೆ.

ಉತ್ಕೃಷ್ ಪ್ಯಾನೆಲ್ ಹೆಸರಿನ ಒಕ್ಕೂಟ ರಚಿಸಿ ಕಣಕ್ಕೆ ಇಳಿದ ಈ ಒಕ್ಕೂಟ 21 ರಲ್ಲಿ 19 ರಲ್ಲಿ ಸ್ಪರ್ಧಿಸಿದ್ದು ಎಲ್ಲದರಲ್ಲಿಯೂ ಸೋಲನ್ನು ಕಾಣುವ ಮೂಲಕ ಶೂನ್ಯ ಸಂಪಾದನೆ ಮಾಡಿದೆ. ಈ ಮೂಲಕ ಈ ಶಿವಸೇನೆಯ ಒಂಭತ್ತು ವರ್ಷದ ಬಿಗಿಹಿಡಿತ ಇಲ್ಲಿಗೆ ಕೊನೆಗೊಂಡಿದೆ. ಬೃಹನ್ಮುಂಬಯಿ ವಿದ್ಯುತ್ ಪೂರೈಕೆ ಹಾಗೂ ಸಾರಿಗೆ (ಬೆಸ್ಟ್) ಇದರ ಒಟ್ಟು 15000 ಸದಸ್ಯರು ಇಲ್ಲಿ ಚುನಾವಣೆಯಲ್ಲಿ ಮತಚಲಾವಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ 10000 ಜನ ಮತದಾನ ಮಾಡಿದ್ದಾರೆ.

ಬೆಸ್ಟ್ ಇದರಲ್ಲಿ ಮರಾಠಿ ಭಾಷಿಕ ನೌಕರರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಠಾಕ್ರೆ ಸಹೋದರರ ಸೋಲು ಮುಂಬರುವ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ (ಬಿಎಂಸಿ) ಚುನಾವಣೆಯಲ್ಲಿ ದೊಡ್ಡ ಆಘಾತ ನೀಡಿದಂತಾಗಿದೆ. ಇತ್ತೀಚೆಗೆ ಮರಾಠಿ ಅಸ್ಮಿತೆಯ ವಿಷಯ ಇಟ್ಟು ಠಾಕ್ರೆ ಸಹೋದರರು ಜಂಟಿಯಾಗಿ ಮುಂಬೈಯಲ್ಲಿ ಬೃಹತ್ ಸಮಾವೇಶ ನಡೆಸಿದ್ದರು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search