• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ

Tulunadu News Posted On August 23, 2025
0


0
Shares
  • Share On Facebook
  • Tweet It

ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದ ವೇಳೆ ಕಾರು ಪಲ್ಟಿಯಾದ ಪರಿಣಾಮ ಓರ್ವ ಸಾವನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಳೂರು ಸಮೀಪದ ಹಳ್ಳಿ ಮನೆ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ನಸುಕಿನ ವೇಳೆ 3 ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಬೆಳ್ಮಣ್ ನ ಮಾರ್ವಿನ್ ಮೆಂಡೊನ್ಸಾ ಎಂದು ಗುರುತಿಸಲಾಗಿದೆ. ಸಿನಿಮಾಟೋಗ್ರಾಫರ್ ಆಗಿದ್ದ ಮರ್ವಿನ್ ಡಿ ಜೆ ವೃತ್ತಿಯನ್ನು ಮಾಡುತ್ತಿದ್ದರು. ಗಾಯಾಳುಗಳಾದ ಕಾರು ಚಾಲಕ ಅಂಬಲಪಾಡಿಯ ಪ್ರಜ್ವಲ್, ಕಾರ್ಕಳದ ಪ್ರಸಾದ್ ಮತ್ತು ವಿಘ್ನೇಶ್ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಕಾರಿನಲ್ಲಿ ಅಂಬಲಪಾಡಿಯಿಂದ ಬೆಳ್ಮಣ್ ಗೆ ಹೋಗುತ್ತಿದ್ದಾಗ ನಾಯಿಯೊಂದು ಕಾರಿಗೆ ಅಡ್ಡ ಬಂದಿದೆ ಎನ್ನಲಾಗಿದೆ. ಇದರ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ ಎಂದು ತಿಳಿದು ಬಂದಿದೆ.

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಚ್ಚಿಲ ಹಾಗೂ ಮೂಳೂರಿನ ಎಸ್‌ಡಿಪಿಐ ಆಂಬುಲೆನ್ಸ್ ಗಳು ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಖಲಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಾರ್ವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ ಆಂಬುಲೆನ್ಸ್ ಚಾಲಕ ಕೆ.ಎಂ.ಸಿರಾಜ್, ಹಮೀದ್ ಹಾಗೂ ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ ಸಹಕರಿಸಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೆ ಒಂದು ದಿನ ಮೊದಲು, ಮರ್ವಿನ್ ತಮ್ಮ ಹೊಸ ಹಾಡನ್ನು ಯೂಟ್ಯೂಬ್‌ನಲ್ಲಿ ಬಿಡುಗಡೆ ಮಾಡಿದ್ದರು, ಅದನ್ನು ಅವರು ಎಪಿಡಿ ಮ್ಯೂಸಿಕ್‌ಗಾಗಿ ನಿರ್ಮಿಸಿ ಸ್ವತಃ ಚಿತ್ರೀಕರಣ ಮಾಡಿದ್ದರು. ಅವರು ಛಾಯಾಗ್ರಾಹಕರಾಗಿ ಹಲವಾರು ಕೊಂಕಣಿ ಮತ್ತು ತುಳು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದರು, ತಮ್ಮ ಸೃಜನಶೀಲ ಪ್ರತಿಭೆಯನ್ನು ಹೊಂದಿದ್ದರು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search