• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಓವರ್‍ಟೇಕ್ ಕಿಲ್ಲರ್ ಇನ್ನು ಜೀವನಪರ್ಯಂತ ಜೈಲಲ್ಲಿ!

TNN Correspondent Posted On September 7, 2017
0


0
Shares
  • Share On Facebook
  • Tweet It

ಪಟನಾ : ಪರೀಕ್ಷೆ ಮುಗಿಸಿದ ಸಂಭ್ರಮಕ್ಕೆ ಸ್ನೇಹಿತರೊಂದಿಗೆ ಭಾರೀ ಮೋಜು-ಮಸ್ತಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಸ್ವಿಫ್ಟ್ ಕಾರೊಂದು ತನ್ನ ಕಾರನ್ನು ಓವರ್‍ಟೇಕ್ ಮಾಡಿದ್ದಕ್ಕಾಗಿ ಓವರ್‍ಸ್ಪೀಡ್‍ನಿಂದ ಹಿಂಬಾಲಿಸಿ ಅದನ್ನು ಅಡ್ಡಗಟ್ಟಿ ಚಾಲಕನಿಗೆ ಗುಂಡು ಹಾರಿಸಿ ಕೊಂದಿದ್ದ ರಾಕಿ ಯಾದವ್‍ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇನಲ್ಲಿ ನಡೆದ ಘಟನೆಯ ಕೂಲಂಕುಷ ವಿಚಾರಣೆ ನಡೆಸಿದ್ದ ಗಯಾ ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ನೀಡಿದೆ. ಹತ್ಯೆ ಮಾಡಿ ತನ್ನ ಅಪ್ಪ ಭೂಗತ ಪಾತಕಿ ಬಿಂದಿ ಯಾದವ್‍ಗೆ ರಾಕಿ ಕರೆಮಾಡಿದ್ದ. ಮಗನ ರಕ್ಷಣೆಗೆಂದು ಬಿಂದಿ ತನ್ನ ಗ್ಯಾರೇಜ್‍ನಲ್ಲಿ ಅಡಗಿಸಿಟ್ಟಿದ್ದ. ರಾಕಿ ತಾಯಿ ಮನೋರಮಾ ದೇವಿ ಉಚ್ಚಾಟಿತ ಜೆಡಿಯು ಎಂಎಲ್‍ಸಿಯಾಗಿದ್ದು, ಆಕೆಯು ತನ್ನ ಪ್ರಭಾವ ಬಳಸಿ ಮಗನನ್ನು ರಕ್ಷಿಸಲು ಯತ್ನಿಸಿದ್ದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಬಿಂದಿ ಯಾದವ್‍ಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜತೆಗೆ ಅಪರಾಧಿ ರಾಕಿಗೆ ರೂ. 1 ಲಕ್ಷ ಹಾಗೂ ಬಿಂದಿಗೆ ರೂ.50ಸಾವಿರ ದಂಡ ಹಾಕಿದೆ.

ಹತ್ಯೆಯಾದ 19 ವರ್ಷದ ಹೈಸ್ಕೂಲ್ ವಿದ್ಯಾರ್ಥಿ ಆದಿತ್ಯ ಸಚ್‍ದೇವ್ ಕುಟುಂಬ ನ್ಯಾಯಾಲಯದ ತೀರ್ಪು ಸ್ವಾಗತಿಸಿ, ಮಗನ ಆತ್ಮಕ್ಕೆ ಶಾಂತಿ ದೊರಕಿದೆ ಎಂದು ಸಮಾಧಾನಪಟ್ಟಿದೆ.

ಮೇ 10, 2016ರಂದು ನಡೆದ ಘಟನೆ ಬಳಿಕ ಸಚ್‍ದೇವ್ ಕುಟುಂಬ ನೀಡಿದ್ದ ದೂರು ಆಧರಿಸಿ ರಾಕಿಗೆ ಪಾರಾಗಲು ಕುಮ್ಮಕ್ಕು ನೀಡಿದ್ದ ಕಾರಣಕ್ಕೆ ಬಿಂದಿ ಯಾದವ್ ಹಾಗೂ ಮನೋರಮಾ ದೇವಿಯನ್ನು ಪೊಲೀಸರು ಬಂಧಿಸಿದ್ದರು. ಜಾಮಿನು ಪಡೆದು ಹೊರಬಂದಿದ್ದ ಮೂವರನ್ನು ಆ.31ರಂದು ಜಿಲ್ಲಾ ನ್ಯಾಯಾಲಯ ದೋಷಿಗಳೆಂದು ಹೇಳಿತ್ತು.

0
Shares
  • Share On Facebook
  • Tweet It


bindicar overtakerange roverrockyswift sachdevyadav


Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search