• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಓವರ್‍ಟೇಕ್ ಕಿಲ್ಲರ್ ಇನ್ನು ಜೀವನಪರ್ಯಂತ ಜೈಲಲ್ಲಿ!

TNN Correspondent Posted On September 7, 2017
0


0
Shares
  • Share On Facebook
  • Tweet It

ಪಟನಾ : ಪರೀಕ್ಷೆ ಮುಗಿಸಿದ ಸಂಭ್ರಮಕ್ಕೆ ಸ್ನೇಹಿತರೊಂದಿಗೆ ಭಾರೀ ಮೋಜು-ಮಸ್ತಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಸ್ವಿಫ್ಟ್ ಕಾರೊಂದು ತನ್ನ ಕಾರನ್ನು ಓವರ್‍ಟೇಕ್ ಮಾಡಿದ್ದಕ್ಕಾಗಿ ಓವರ್‍ಸ್ಪೀಡ್‍ನಿಂದ ಹಿಂಬಾಲಿಸಿ ಅದನ್ನು ಅಡ್ಡಗಟ್ಟಿ ಚಾಲಕನಿಗೆ ಗುಂಡು ಹಾರಿಸಿ ಕೊಂದಿದ್ದ ರಾಕಿ ಯಾದವ್‍ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇನಲ್ಲಿ ನಡೆದ ಘಟನೆಯ ಕೂಲಂಕುಷ ವಿಚಾರಣೆ ನಡೆಸಿದ್ದ ಗಯಾ ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ನೀಡಿದೆ. ಹತ್ಯೆ ಮಾಡಿ ತನ್ನ ಅಪ್ಪ ಭೂಗತ ಪಾತಕಿ ಬಿಂದಿ ಯಾದವ್‍ಗೆ ರಾಕಿ ಕರೆಮಾಡಿದ್ದ. ಮಗನ ರಕ್ಷಣೆಗೆಂದು ಬಿಂದಿ ತನ್ನ ಗ್ಯಾರೇಜ್‍ನಲ್ಲಿ ಅಡಗಿಸಿಟ್ಟಿದ್ದ. ರಾಕಿ ತಾಯಿ ಮನೋರಮಾ ದೇವಿ ಉಚ್ಚಾಟಿತ ಜೆಡಿಯು ಎಂಎಲ್‍ಸಿಯಾಗಿದ್ದು, ಆಕೆಯು ತನ್ನ ಪ್ರಭಾವ ಬಳಸಿ ಮಗನನ್ನು ರಕ್ಷಿಸಲು ಯತ್ನಿಸಿದ್ದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಬಿಂದಿ ಯಾದವ್‍ಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜತೆಗೆ ಅಪರಾಧಿ ರಾಕಿಗೆ ರೂ. 1 ಲಕ್ಷ ಹಾಗೂ ಬಿಂದಿಗೆ ರೂ.50ಸಾವಿರ ದಂಡ ಹಾಕಿದೆ.

ಹತ್ಯೆಯಾದ 19 ವರ್ಷದ ಹೈಸ್ಕೂಲ್ ವಿದ್ಯಾರ್ಥಿ ಆದಿತ್ಯ ಸಚ್‍ದೇವ್ ಕುಟುಂಬ ನ್ಯಾಯಾಲಯದ ತೀರ್ಪು ಸ್ವಾಗತಿಸಿ, ಮಗನ ಆತ್ಮಕ್ಕೆ ಶಾಂತಿ ದೊರಕಿದೆ ಎಂದು ಸಮಾಧಾನಪಟ್ಟಿದೆ.

ಮೇ 10, 2016ರಂದು ನಡೆದ ಘಟನೆ ಬಳಿಕ ಸಚ್‍ದೇವ್ ಕುಟುಂಬ ನೀಡಿದ್ದ ದೂರು ಆಧರಿಸಿ ರಾಕಿಗೆ ಪಾರಾಗಲು ಕುಮ್ಮಕ್ಕು ನೀಡಿದ್ದ ಕಾರಣಕ್ಕೆ ಬಿಂದಿ ಯಾದವ್ ಹಾಗೂ ಮನೋರಮಾ ದೇವಿಯನ್ನು ಪೊಲೀಸರು ಬಂಧಿಸಿದ್ದರು. ಜಾಮಿನು ಪಡೆದು ಹೊರಬಂದಿದ್ದ ಮೂವರನ್ನು ಆ.31ರಂದು ಜಿಲ್ಲಾ ನ್ಯಾಯಾಲಯ ದೋಷಿಗಳೆಂದು ಹೇಳಿತ್ತು.

0
Shares
  • Share On Facebook
  • Tweet It


bindicar overtakerange roverrockyswift sachdevyadav


Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search