• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಓವರ್‍ಟೇಕ್ ಕಿಲ್ಲರ್ ಇನ್ನು ಜೀವನಪರ್ಯಂತ ಜೈಲಲ್ಲಿ!

TNN Correspondent Posted On September 7, 2017
0


0
Shares
  • Share On Facebook
  • Tweet It

ಪಟನಾ : ಪರೀಕ್ಷೆ ಮುಗಿಸಿದ ಸಂಭ್ರಮಕ್ಕೆ ಸ್ನೇಹಿತರೊಂದಿಗೆ ಭಾರೀ ಮೋಜು-ಮಸ್ತಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಸ್ವಿಫ್ಟ್ ಕಾರೊಂದು ತನ್ನ ಕಾರನ್ನು ಓವರ್‍ಟೇಕ್ ಮಾಡಿದ್ದಕ್ಕಾಗಿ ಓವರ್‍ಸ್ಪೀಡ್‍ನಿಂದ ಹಿಂಬಾಲಿಸಿ ಅದನ್ನು ಅಡ್ಡಗಟ್ಟಿ ಚಾಲಕನಿಗೆ ಗುಂಡು ಹಾರಿಸಿ ಕೊಂದಿದ್ದ ರಾಕಿ ಯಾದವ್‍ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇನಲ್ಲಿ ನಡೆದ ಘಟನೆಯ ಕೂಲಂಕುಷ ವಿಚಾರಣೆ ನಡೆಸಿದ್ದ ಗಯಾ ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ನೀಡಿದೆ. ಹತ್ಯೆ ಮಾಡಿ ತನ್ನ ಅಪ್ಪ ಭೂಗತ ಪಾತಕಿ ಬಿಂದಿ ಯಾದವ್‍ಗೆ ರಾಕಿ ಕರೆಮಾಡಿದ್ದ. ಮಗನ ರಕ್ಷಣೆಗೆಂದು ಬಿಂದಿ ತನ್ನ ಗ್ಯಾರೇಜ್‍ನಲ್ಲಿ ಅಡಗಿಸಿಟ್ಟಿದ್ದ. ರಾಕಿ ತಾಯಿ ಮನೋರಮಾ ದೇವಿ ಉಚ್ಚಾಟಿತ ಜೆಡಿಯು ಎಂಎಲ್‍ಸಿಯಾಗಿದ್ದು, ಆಕೆಯು ತನ್ನ ಪ್ರಭಾವ ಬಳಸಿ ಮಗನನ್ನು ರಕ್ಷಿಸಲು ಯತ್ನಿಸಿದ್ದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಬಿಂದಿ ಯಾದವ್‍ಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜತೆಗೆ ಅಪರಾಧಿ ರಾಕಿಗೆ ರೂ. 1 ಲಕ್ಷ ಹಾಗೂ ಬಿಂದಿಗೆ ರೂ.50ಸಾವಿರ ದಂಡ ಹಾಕಿದೆ.

ಹತ್ಯೆಯಾದ 19 ವರ್ಷದ ಹೈಸ್ಕೂಲ್ ವಿದ್ಯಾರ್ಥಿ ಆದಿತ್ಯ ಸಚ್‍ದೇವ್ ಕುಟುಂಬ ನ್ಯಾಯಾಲಯದ ತೀರ್ಪು ಸ್ವಾಗತಿಸಿ, ಮಗನ ಆತ್ಮಕ್ಕೆ ಶಾಂತಿ ದೊರಕಿದೆ ಎಂದು ಸಮಾಧಾನಪಟ್ಟಿದೆ.

ಮೇ 10, 2016ರಂದು ನಡೆದ ಘಟನೆ ಬಳಿಕ ಸಚ್‍ದೇವ್ ಕುಟುಂಬ ನೀಡಿದ್ದ ದೂರು ಆಧರಿಸಿ ರಾಕಿಗೆ ಪಾರಾಗಲು ಕುಮ್ಮಕ್ಕು ನೀಡಿದ್ದ ಕಾರಣಕ್ಕೆ ಬಿಂದಿ ಯಾದವ್ ಹಾಗೂ ಮನೋರಮಾ ದೇವಿಯನ್ನು ಪೊಲೀಸರು ಬಂಧಿಸಿದ್ದರು. ಜಾಮಿನು ಪಡೆದು ಹೊರಬಂದಿದ್ದ ಮೂವರನ್ನು ಆ.31ರಂದು ಜಿಲ್ಲಾ ನ್ಯಾಯಾಲಯ ದೋಷಿಗಳೆಂದು ಹೇಳಿತ್ತು.

0
Shares
  • Share On Facebook
  • Tweet It


bindicar overtakerange roverrockyswift sachdevyadav


Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search