• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಓವರ್‍ಟೇಕ್ ಕಿಲ್ಲರ್ ಇನ್ನು ಜೀವನಪರ್ಯಂತ ಜೈಲಲ್ಲಿ!

TNN Correspondent Posted On September 7, 2017
0


0
Shares
  • Share On Facebook
  • Tweet It

ಪಟನಾ : ಪರೀಕ್ಷೆ ಮುಗಿಸಿದ ಸಂಭ್ರಮಕ್ಕೆ ಸ್ನೇಹಿತರೊಂದಿಗೆ ಭಾರೀ ಮೋಜು-ಮಸ್ತಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಸ್ವಿಫ್ಟ್ ಕಾರೊಂದು ತನ್ನ ಕಾರನ್ನು ಓವರ್‍ಟೇಕ್ ಮಾಡಿದ್ದಕ್ಕಾಗಿ ಓವರ್‍ಸ್ಪೀಡ್‍ನಿಂದ ಹಿಂಬಾಲಿಸಿ ಅದನ್ನು ಅಡ್ಡಗಟ್ಟಿ ಚಾಲಕನಿಗೆ ಗುಂಡು ಹಾರಿಸಿ ಕೊಂದಿದ್ದ ರಾಕಿ ಯಾದವ್‍ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ವರ್ಷ ಮೇನಲ್ಲಿ ನಡೆದ ಘಟನೆಯ ಕೂಲಂಕುಷ ವಿಚಾರಣೆ ನಡೆಸಿದ್ದ ಗಯಾ ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ನೀಡಿದೆ. ಹತ್ಯೆ ಮಾಡಿ ತನ್ನ ಅಪ್ಪ ಭೂಗತ ಪಾತಕಿ ಬಿಂದಿ ಯಾದವ್‍ಗೆ ರಾಕಿ ಕರೆಮಾಡಿದ್ದ. ಮಗನ ರಕ್ಷಣೆಗೆಂದು ಬಿಂದಿ ತನ್ನ ಗ್ಯಾರೇಜ್‍ನಲ್ಲಿ ಅಡಗಿಸಿಟ್ಟಿದ್ದ. ರಾಕಿ ತಾಯಿ ಮನೋರಮಾ ದೇವಿ ಉಚ್ಚಾಟಿತ ಜೆಡಿಯು ಎಂಎಲ್‍ಸಿಯಾಗಿದ್ದು, ಆಕೆಯು ತನ್ನ ಪ್ರಭಾವ ಬಳಸಿ ಮಗನನ್ನು ರಕ್ಷಿಸಲು ಯತ್ನಿಸಿದ್ದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಬಿಂದಿ ಯಾದವ್‍ಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಜತೆಗೆ ಅಪರಾಧಿ ರಾಕಿಗೆ ರೂ. 1 ಲಕ್ಷ ಹಾಗೂ ಬಿಂದಿಗೆ ರೂ.50ಸಾವಿರ ದಂಡ ಹಾಕಿದೆ.

ಹತ್ಯೆಯಾದ 19 ವರ್ಷದ ಹೈಸ್ಕೂಲ್ ವಿದ್ಯಾರ್ಥಿ ಆದಿತ್ಯ ಸಚ್‍ದೇವ್ ಕುಟುಂಬ ನ್ಯಾಯಾಲಯದ ತೀರ್ಪು ಸ್ವಾಗತಿಸಿ, ಮಗನ ಆತ್ಮಕ್ಕೆ ಶಾಂತಿ ದೊರಕಿದೆ ಎಂದು ಸಮಾಧಾನಪಟ್ಟಿದೆ.

ಮೇ 10, 2016ರಂದು ನಡೆದ ಘಟನೆ ಬಳಿಕ ಸಚ್‍ದೇವ್ ಕುಟುಂಬ ನೀಡಿದ್ದ ದೂರು ಆಧರಿಸಿ ರಾಕಿಗೆ ಪಾರಾಗಲು ಕುಮ್ಮಕ್ಕು ನೀಡಿದ್ದ ಕಾರಣಕ್ಕೆ ಬಿಂದಿ ಯಾದವ್ ಹಾಗೂ ಮನೋರಮಾ ದೇವಿಯನ್ನು ಪೊಲೀಸರು ಬಂಧಿಸಿದ್ದರು. ಜಾಮಿನು ಪಡೆದು ಹೊರಬಂದಿದ್ದ ಮೂವರನ್ನು ಆ.31ರಂದು ಜಿಲ್ಲಾ ನ್ಯಾಯಾಲಯ ದೋಷಿಗಳೆಂದು ಹೇಳಿತ್ತು.

0
Shares
  • Share On Facebook
  • Tweet It


bindicar overtakerange roverrockyswift sachdevyadav


Trending Now
ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
Tulunadu News December 15, 2025
ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
Tulunadu News December 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
  • Popular Posts

    • 1
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 2
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • 3
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!

  • Privacy Policy
  • Contact
© Tulunadu Infomedia.

Press enter/return to begin your search