• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ – ಸಿಎಂ ರೇವಂತ್ ರೆಡ್ಡಿ

Tulunadu News Posted On August 26, 2025
0


0
Shares
  • Share On Facebook
  • Tweet It

ಈಗ ದೇಶದಲ್ಲಿ ಪ್ರಸ್ತುತ ಇರುವ ಟ್ರೆಂಡ್ ಅಂದರೆ ಗ್ಯಾರಂಟಿ ಘೋಷಿಸಿ, ಅಧಿಕಾರಕ್ಕೆ ಬನ್ನಿ – ಇದರಲ್ಲಿ ಯಾವ ರಾಜಕೀಯ ಪಕ್ಷವೂ ಹೊರತಾಗಿಲ್ಲ. ಆದರೆ ಕರ್ನಾಟಕದ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿ ಈ ಗ್ಯಾರಂಟಿ ವಿಷಯದಲ್ಲಿ ಜನರನ್ನು ಓಲೈಸಿ ಅಧಿಕಾರಕ್ಕೂ ಬಂದಿರುವುದರಿಂದ ಉಳಿದ ರಾಜ್ಯಗಳಿಗೆ ಈ ವಿಷಯದಲ್ಲಿ ಕರ್ನಾಟಕವೇ ರೋಲ್ ಮಾಡೆಲ್ ಆಗಿದೆ. ತೆಲಂಗಾಣ ಕಾಂಗ್ರೆಸ್ ಕೂಡ ಕರ್ನಾಟಕದ ರೀತಿ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ವಿಷಯವೂ ಎಲ್ಲರಿಗೂ ತಿಳಿದಿದೆ. ತೆಲಂಗಾಣದ ಕಾಂಗ್ರೆಸ್ ಸರಕಾರ ಇದೀಗ ಬೊಕ್ಕಸ ಬರಿದು ಮಾಡಿಕೊಂಡು ಒದ್ದಾಡುತ್ತಿರುವುದನ್ನು ವಿರೋಧ ಪಕ್ಷಗಳಲ್ಲ, ಸ್ವತ: ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿಯವರೇ ಬಹಿರಂಗಪಡಿಸಿದ್ದಾರೆ.

ಸರಕಾರದ ಬೊಕ್ಕಸ ಪೂರ್ತಿ ಬತ್ತಿಹೋಗಿದ್ದು, ಮಾರಾಟ ಮಾಡಿ ದೇಣಿಗೆ ಎತ್ತಲು ಸಹ ಸರಕಾರದ ಬಳಿ ಭೂಮಿಯಿಲ್ಲ ಎಂದು ಸಿಎಂ ಅವಲತ್ತುಕೊಂಡಿದ್ದಾರೆ. ಉಸ್ಮಾನಿಯಾ ವಿಶ್ವವಿದ್ಯಾನಿಲಯದ ವಿವಿಧ ಕಟ್ಟಡಗಳ ಲೋಕಾರ್ಪಣೆ ಹಾಗೂ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಅವರು ” ತೆಲಂಗಾಣ ಸರಕಾರದ ಬೊಕ್ಕಸ ಪೂರ್ತಿ ಒಣಗಿಹೋಗಿದೆ. ಸರಕಾರದಲ್ಲಿ ಮಾರಾಟ ಮಾಡಲು ಮತ್ತು ಹಣವನ್ನು ಸಂಗ್ರಹಿಸಲು ಯಾವುದೇ ಭೂಮಿಯೂ ಲಭ್ಯವಿಲ್ಲ” ಎಂದು ಹೇಳಿದರು.

ಈ ಹಿಂದೆಯೂ ಸರಕಾರ ಆರ್ಥಿಕವಾಗಿ ಕುಸಿದಿರುವ ಬಗ್ಗೆ ಮಾಹಿತಿ ನೀಡಿದ್ದ ರೇವಂತ್ ರೆಡ್ಡಿ ” ಚುನಾವಣೆಯಲ್ಲಿ ಗೆದ್ದು ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದ ಹಣಕಾಸಿನ ಬಗ್ಗೆ ನಿಜವಾದ ತಿಳುವಳಿಕೆ ಬಂತು. ನಾವೇ ಘೋಷಿಸಿದ ಗ್ಯಾರಂಟಿಗೆ ಮೀಸಲಾಗಿರಿಸಲು ಸರಕಾರದ ಬಳಿ ದುಡ್ಡಿಲ್ಲ. ಗ್ಯಾರಂಟಿ ಬಗ್ಗೆ ದೇಶಾದ್ಯಂತ ಚರ್ಚೆಯಾಗಬೇಕು” ಎಂದಿದ್ದರು. ಅಲ್ಲದೇ ಕೇಂದ್ರ ಸರಕಾರದ ಬಳಿ ಹಣ ಕೇಳಲು ಹೋದರೆ ಅಲ್ಲಿ ಯಾರೂ ನಾವು ಬಂದಾಗ ಬಾಗಿಲು ತೆರೆಯುತ್ತಿಲ್ಲ.” ಎಂದು ಹೇಳಿ ಆರೋಪ ಕೂಡ ಮಾಡಿದ್ದರು.

ತೆಲಂಗಾಣ ಸರಕಾರ ಆರು ಗ್ಯಾರಂಟಿ ನೀಡುತ್ತಿದ್ದು, ಮಹಿಳೆಯರಿಗೆ ತಿಂಗಳಿಗೆ 2500 ರೂ, 500 ರೂಗೆ ಸಿಲೆಂಡರ್, ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್, ವೃದ್ಧರು, ವಿಧವೆಯರು, ಅಂಗವಿಕರು, ಬೀಡಿ ಕಾರ್ಮಿಕರು, ಒಂಟಿ ಮಹಿಳೆಯರು, ಕಲ್ಲು ಕ್ವಾರಿಗಳು ಮತ್ತು ಕೈಮಗ್ಗ ಕಾರ್ಮಿಕರು, ಎಚ್ ಐವಿ ಪೀಡಿತರು, ಡಯಾಲಿಸಿಸ್ ರೋಗಿಗಳಿಗೆ 4 ಸಾವಿರ ರೂ ಮಾಸಿಕ ಪಿಂಚಣಿ ನೀಡುವ ಭರವಸೆ ನೀಡಲಾಗಿತ್ತು. ಗ್ಯಾರಂಟಿ ಎನ್ನುವ ಸಕ್ಕರೆ ತಿನ್ನುವಾಗ ಖುಷಿ ನೀಡಬಹುದು, ಆದರೆ ಮುಂದೆ ಯಾವ ರೀತಿಯಲ್ಲಿ ನಮ್ಮ ದೇಹ (ದೇಶ)ದಲ್ಲಿ ಕಾಯಿಲೆ ತರಲಿದೆ ಎನ್ನುವುದರ ಬಗ್ಗೆ ಶೀಘ್ರ ಒಂದು ನಿರ್ಧಾರಕ್ಕೆ ನಾವು ಬರದಿದ್ದರೆ ಆಪತ್ತು ಗ್ಯಾರಂಟಿ!

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search