• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ – ಸಿಎಂ ರೇವಂತ್ ರೆಡ್ಡಿ

Tulunadu News Posted On August 26, 2025
0


0
Shares
  • Share On Facebook
  • Tweet It

ಈಗ ದೇಶದಲ್ಲಿ ಪ್ರಸ್ತುತ ಇರುವ ಟ್ರೆಂಡ್ ಅಂದರೆ ಗ್ಯಾರಂಟಿ ಘೋಷಿಸಿ, ಅಧಿಕಾರಕ್ಕೆ ಬನ್ನಿ – ಇದರಲ್ಲಿ ಯಾವ ರಾಜಕೀಯ ಪಕ್ಷವೂ ಹೊರತಾಗಿಲ್ಲ. ಆದರೆ ಕರ್ನಾಟಕದ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿ ಈ ಗ್ಯಾರಂಟಿ ವಿಷಯದಲ್ಲಿ ಜನರನ್ನು ಓಲೈಸಿ ಅಧಿಕಾರಕ್ಕೂ ಬಂದಿರುವುದರಿಂದ ಉಳಿದ ರಾಜ್ಯಗಳಿಗೆ ಈ ವಿಷಯದಲ್ಲಿ ಕರ್ನಾಟಕವೇ ರೋಲ್ ಮಾಡೆಲ್ ಆಗಿದೆ. ತೆಲಂಗಾಣ ಕಾಂಗ್ರೆಸ್ ಕೂಡ ಕರ್ನಾಟಕದ ರೀತಿ ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದ ವಿಷಯವೂ ಎಲ್ಲರಿಗೂ ತಿಳಿದಿದೆ. ತೆಲಂಗಾಣದ ಕಾಂಗ್ರೆಸ್ ಸರಕಾರ ಇದೀಗ ಬೊಕ್ಕಸ ಬರಿದು ಮಾಡಿಕೊಂಡು ಒದ್ದಾಡುತ್ತಿರುವುದನ್ನು ವಿರೋಧ ಪಕ್ಷಗಳಲ್ಲ, ಸ್ವತ: ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿಯವರೇ ಬಹಿರಂಗಪಡಿಸಿದ್ದಾರೆ.

ಸರಕಾರದ ಬೊಕ್ಕಸ ಪೂರ್ತಿ ಬತ್ತಿಹೋಗಿದ್ದು, ಮಾರಾಟ ಮಾಡಿ ದೇಣಿಗೆ ಎತ್ತಲು ಸಹ ಸರಕಾರದ ಬಳಿ ಭೂಮಿಯಿಲ್ಲ ಎಂದು ಸಿಎಂ ಅವಲತ್ತುಕೊಂಡಿದ್ದಾರೆ. ಉಸ್ಮಾನಿಯಾ ವಿಶ್ವವಿದ್ಯಾನಿಲಯದ ವಿವಿಧ ಕಟ್ಟಡಗಳ ಲೋಕಾರ್ಪಣೆ ಹಾಗೂ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಅವರು ” ತೆಲಂಗಾಣ ಸರಕಾರದ ಬೊಕ್ಕಸ ಪೂರ್ತಿ ಒಣಗಿಹೋಗಿದೆ. ಸರಕಾರದಲ್ಲಿ ಮಾರಾಟ ಮಾಡಲು ಮತ್ತು ಹಣವನ್ನು ಸಂಗ್ರಹಿಸಲು ಯಾವುದೇ ಭೂಮಿಯೂ ಲಭ್ಯವಿಲ್ಲ” ಎಂದು ಹೇಳಿದರು.

ಈ ಹಿಂದೆಯೂ ಸರಕಾರ ಆರ್ಥಿಕವಾಗಿ ಕುಸಿದಿರುವ ಬಗ್ಗೆ ಮಾಹಿತಿ ನೀಡಿದ್ದ ರೇವಂತ್ ರೆಡ್ಡಿ ” ಚುನಾವಣೆಯಲ್ಲಿ ಗೆದ್ದು ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದ ಹಣಕಾಸಿನ ಬಗ್ಗೆ ನಿಜವಾದ ತಿಳುವಳಿಕೆ ಬಂತು. ನಾವೇ ಘೋಷಿಸಿದ ಗ್ಯಾರಂಟಿಗೆ ಮೀಸಲಾಗಿರಿಸಲು ಸರಕಾರದ ಬಳಿ ದುಡ್ಡಿಲ್ಲ. ಗ್ಯಾರಂಟಿ ಬಗ್ಗೆ ದೇಶಾದ್ಯಂತ ಚರ್ಚೆಯಾಗಬೇಕು” ಎಂದಿದ್ದರು. ಅಲ್ಲದೇ ಕೇಂದ್ರ ಸರಕಾರದ ಬಳಿ ಹಣ ಕೇಳಲು ಹೋದರೆ ಅಲ್ಲಿ ಯಾರೂ ನಾವು ಬಂದಾಗ ಬಾಗಿಲು ತೆರೆಯುತ್ತಿಲ್ಲ.” ಎಂದು ಹೇಳಿ ಆರೋಪ ಕೂಡ ಮಾಡಿದ್ದರು.

ತೆಲಂಗಾಣ ಸರಕಾರ ಆರು ಗ್ಯಾರಂಟಿ ನೀಡುತ್ತಿದ್ದು, ಮಹಿಳೆಯರಿಗೆ ತಿಂಗಳಿಗೆ 2500 ರೂ, 500 ರೂಗೆ ಸಿಲೆಂಡರ್, ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್, ವೃದ್ಧರು, ವಿಧವೆಯರು, ಅಂಗವಿಕರು, ಬೀಡಿ ಕಾರ್ಮಿಕರು, ಒಂಟಿ ಮಹಿಳೆಯರು, ಕಲ್ಲು ಕ್ವಾರಿಗಳು ಮತ್ತು ಕೈಮಗ್ಗ ಕಾರ್ಮಿಕರು, ಎಚ್ ಐವಿ ಪೀಡಿತರು, ಡಯಾಲಿಸಿಸ್ ರೋಗಿಗಳಿಗೆ 4 ಸಾವಿರ ರೂ ಮಾಸಿಕ ಪಿಂಚಣಿ ನೀಡುವ ಭರವಸೆ ನೀಡಲಾಗಿತ್ತು. ಗ್ಯಾರಂಟಿ ಎನ್ನುವ ಸಕ್ಕರೆ ತಿನ್ನುವಾಗ ಖುಷಿ ನೀಡಬಹುದು, ಆದರೆ ಮುಂದೆ ಯಾವ ರೀತಿಯಲ್ಲಿ ನಮ್ಮ ದೇಹ (ದೇಶ)ದಲ್ಲಿ ಕಾಯಿಲೆ ತರಲಿದೆ ಎನ್ನುವುದರ ಬಗ್ಗೆ ಶೀಘ್ರ ಒಂದು ನಿರ್ಧಾರಕ್ಕೆ ನಾವು ಬರದಿದ್ದರೆ ಆಪತ್ತು ಗ್ಯಾರಂಟಿ!

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search