• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ – ಡಾ. ಹೆಗ್ಗಡೆ 

Tulunadu News Posted On August 26, 2025
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನಿಕಟಪೂರ್ವ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಮಂಡಲಗಳ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ ಸೋಮವಾರ ಸಂಜೆ ನಡೆಯಿತು.

ಐದು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ಪಾಲ್ಗೊಳ್ಳುವಿಕೆಯೊಂದಿಗೆ ಎಲ್ಲರ ಸಂಘಟಿತ ಪ್ರಯತ್ನ ಯಶಸ್ವಿಯಾಗಿದೆ. ಮಂಗಳೂರು, ಮೂಡಬಿದಿರೆ, ಬಂಟ್ವಾಳ, ಸುರತ್ಕಲ್, ಉಳ್ಳಾಲ, ಬೆಳ್ತಂಗಡಿ ತಾಲೂಕುಗಳಿಂದ ಅಸಂಖ್ಯಾತ ಆಸ್ತಿಕ ಬಾಂಧವರು ಪಾಲ್ಗೊಂಡು ತಮ್ಮ ಕ್ಷೇತ್ರದ ಪಕ್ಷದ ಮುಖಂಡರು,ಜನಪ್ರತಿನಿಧಿಗಳೊಂದಿಗೆ ಹೆಜ್ಜೆ ಹಾಕಿ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆಯವರಿಗೆ ಶ್ರದ್ಧಾಭಕ್ತಿಯಿಂದ ಗೌರವಾರ್ಪಣೆ ಮಾಡಿದರು.


ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಎಲ್ಲರೂ ದೇವಸ್ಥಾನದ ಎದುರು ಸಾಮೂಹಿಕವಾಗಿ ” ಶಿವಪಂಚಾಕ್ಷರಿ ಪಠಣ” ಮಾಡಿದರು. ನಂತರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯಾತ್ರೆಯ ಪ್ರಮುಖರೊಂದಿಗೆ ಮಾತನಾಡಿದ ಧರ್ಮಾಧಿಕಾರಿ ಡಿ ವಿರೇಂದ್ರ ಹೆಗ್ಗಡೆಯವರು ” ದೇವರ ಅನುಗ್ರಹದಿಂದ ಸತ್ಯದ ಅನಾವರಣವಾಗುತ್ತಿರುವುದು ಸಂತಸವಾಗಿದೆ. ಧರ್ಮಸ್ಥಳದ ಭಕ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಶ್ರದ್ಧಾಭಕ್ತಿಯ ಪ್ರೋತ್ಸಾಹದಿಂದ ಎಲ್ಲಾ ಸೇವಾಕಾರ್ಯಗಳನ್ನು ಮುಂದುವರೆಸುವ ಉತ್ಸಾಹ ಮೂಡಿಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರ ಜೊತೆ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ ನಾಗರಾಜ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಕೆ ಪ್ರತಾಪ ಸಿಂಹ ನಾಯಕ್, ಕಿಶೋರ್ ಪುತ್ತೂರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಹರಿಕೃಷ್ಣ ಬಂಟ್ವಾಳ, ಕೆ.ಪಿ.ಜಗದೀಶ್ ಅಧಿಕಾರಿ, ವಕೀಲ ಬಾಹುಬಲಿ ಪ್ರಸಾದ್, ಕೃಷ್ಣರಾಜ ಹೆಗ್ಡೆ, ಗಣ್ಯರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search