• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!

Tulunadu News Posted On August 26, 2025
0


0
Shares
  • Share On Facebook
  • Tweet It

ಯಾವುದೇ ಕುತೂಹಲಕಾರಿ ಸಿನೆಮಾಕ್ಕೂ ಕಡಿಮೆ ಇಲ್ಲದಂತೆ ಬುರುಡೆ ಕಥೆ ಇಡೀ ರಾಜ್ಯ, ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಧರ್ಮಸ್ಥಳದ ಭಕ್ತರನ್ನು ಕುಕ್ಕರಗಾಲಿನಲ್ಲಿ ತಂದು ನಿಲ್ಲಿಸಿದೆ. ದಿನಕ್ಕೊಂದು ತಿರುವು ಸಿಗುತ್ತಿರುವ ಈ ಪ್ರಕರಣದಲ್ಲಿ ಯಾವ ದಿನ ಯಾವ ಬ್ರೇಕಿಂಗ್ ನ್ಯೂಸ್ ಹೊರಬರುತ್ತದೆ ಎನ್ನುವುದೇ ಸೋಜಿಗದ ವಿಷಯ.

ಇಂದಿನ ಹಾಟ್ ವಿಷಯ ಏನೆಂದರೆ ಎಸ್ ಐಟಿ ಮಹೇಶ್ ತಿಮರೋಡಿ ಮನೆಯಲ್ಲಿ ನಡೆಸಿದ ಶೋಧದ ಸಂದರ್ಭದಲ್ಲಿ ಮಹತ್ವದ ಸಾಕ್ಷ್ಯ ಲಭ್ಯವಾಗಿದೆ. ಅದೇನೆಂದರೆ ಚಿನ್ನಯ್ಯ ಆಲಿಯಾಸ್ ಮಾಸ್ಕ್ ಮ್ಯಾನ್ ನ ಮೊಬೈಲ್. ತನ್ನ ಬಳಿ ಮೊಬೈಲ್ ಇಲ್ಲ, ತಿಮರೋಡಿ ಮನೆಯಲ್ಲಿದೆ ಎನ್ನುತ್ತಿದ್ದ ಚಿನ್ನಯ್ಯನ ಮೊಬೈಲ್ ಈಗ ತಿಮರೋಡಿ ಮನೆಯಲ್ಲಿ ಪತ್ತೆಯಾಗಿರುವುದು ಈ ಒಟ್ಟು ಪ್ರಕರಣದಲ್ಲಿ ಹೊಸ ತಿರುವನ್ನು ನೀಡಿದೆ.

ಸರ್ಚ್ ವಾರಂಟ್ ಇಟ್ಟುಕೊಂಡೇ ತಿಮರೋಡಿ ಮನೆಯನ್ನು ಪರಿಶೀಲಿಸಿದ ಎಸ್ ಐಟಿ ತಂಡಕ್ಕೆ ಅಲ್ಲಿ ಚಿನ್ನಯ್ಯನ ಮೊಬೈಲ್ ಸಿಕ್ಕಿರುವುದರಿಂದ ಅವನನ್ನು ಯಾರು ಈ ಒಟ್ಟು ಕೃತ್ಯಕ್ಕೆ ಬಳಸಿದ್ದಾರೆ, ಅವನ ಜೊತೆ ಯಾರ್ಯಾರು ಸಂಪರ್ಕದಲ್ಲಿದ್ದರು ಎನ್ನುವುದು ಎಲ್ಲವೂ ಗೊತ್ತಾಗಲಿದೆ. ಚಿನ್ನಯ್ಯನ ಮೊಬೈಲ್ ವಶಕ್ಕೆ ಪಡೆದು ಬೇರೆ ಏನು ಮಹತ್ವದ ಸಾಕ್ಷ್ಯ ಸಿಗುತ್ತದೆ ಎನ್ನುವುದನ್ನು ಕೂಡ ಎಸ್ ಐಟಿ ತಂಡ ಕೂಲಂಕುಶವಾಗಿ ಪರಿಶೀಲಿಸುತ್ತಿದೆ.

ಇನ್ನು ಸೇಫ್ಟಿ ಕಾರಣಕ್ಕೆ ತಿಮರೋಡಿ ತಮ್ಮ ಮನೆಯ ಪಕ್ಕದಲ್ಲೇ ಇರುವ ಸಹೋದರ ಮೋಹನ್ ಕುಮಾರ್ ಮನೆಯಲ್ಲಿ ಚಿನ್ನಯ್ಯನಿಗೆ ತಂಗಲು ಕೊಠಡಿ ನೀಡಲಾಗಿತ್ತು ಅನ್ನೋ ಮಾಹಿತಿಯನ್ನು ಚಿನ್ನಯ್ಯ ಬಹಿರಂಗಪಡಿಸಿದ್ದ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಮೋಹನ್ ಕುಮಾರ್ ಶೆಟ್ಟಿ ಮನೆಯಲ್ಲಿಯೂ ಶೋಧ ಕಾರ್ಯ ನಡೆಸಲಾಗುತ್ತಿದೆ. ತಿಮರೋಡಿ ಅವರ ನಿವೇಶನ ಸೇರಿದಂತೆ ಎಲ್ಲಾ ಕಡೆ ದಾಳಿ ನಡೆಸಿರುವ ಎಸ್ ಐಟಿ ಸಿಸಿಟಿವಿ ಹಾಗೂ ಹಾರ್ಡ್ ಡಿಸ್ಕ್ ಗಳನ್ನು ವಶಕ್ಕೆ ಪಡೆದಿದೆ. ಚಿನ್ನಯ್ಯ ಹೇಳಿದಂತೆ ಮಹೇಶ್ ಶೆಟ್ಟಿ ಮನೆಯಲ್ಲಿ ಉಳಿದುಕೊಂಡಿರುವ ಬಗ್ಗೆ, ಇಲ್ಲಿಗೆ ಭೇಟಿ ನೀಡಿದವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಎಸ್ ಐಟಿ ಅಧಿಕಾರಿಗಳು ಹಾರ್ಡ್ ಡಿಸ್ಕ್ ಕೂಡ ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಮಹತ್ವದ ಸಾಕ್ಷ್ಯಗಳು ಸಿಗಬಹುದು ಎಂದು ಅಂದಾಜಿಸಲಾಗಿದೆ. ಒಂದು ವೇಳೆ ಅದರಲ್ಲಿನ ವಿಡಿಯೋ ಡಿಲೀಟ್ ಆಗಿದ್ದಲ್ಲಿ ಅದು ಮಹೇಶ್ ಶೆಟ್ಟಿಗೆ ಕಂಟಕ ತರುವ ಸಾಧ್ಯತೆ ಇದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search