• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..

Tulunadu News Posted On August 26, 2025
0


0
Shares
  • Share On Facebook
  • Tweet It

ದೊಡ್ಡ ವಿಸ್ಫೋಟವೊಂದನ್ನು ಉತ್ತರ ಪ್ರದೇಶ ಪೊಲೀಸರು ಬಯಲಿಗೆ ಎಳೆದಿದ್ದಾರೆ. ಮೊಹಮ್ಮಸ್ ಉಜ್ಜೈರ್ ಹಾಗೂ ಶಹನಾವಾಜ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರಪ್ರದೇಶದ ಬಾಗಪತ್ ನಿಂದ ಡೆಲ್ಲಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಈ ಸ್ಫೋಟಕಗಳನ್ನು ಅಡಗಿಸಿ ತೆಗೆದುಕೊಂಡು ಹೋಗುವ ಸಂಚು ನಡೆದಿತ್ತು. ಉತ್ತರ ಪ್ರದೇಶದ ಪೊಲೀಸರು ಹಾಗೂ ದೇಶದ ಭಯೋತ್ಪಾದಕ ನಿಗ್ರಹ ಪಡೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಿಂದ ಇದು ಬೆಳಕಿಗೆ ಬಂದಿದೆ. ಗುಪ್ತಚರ ಇಲಾಖೆಯ ಉನ್ನತ ಮೂಲಗಳಿಗೆ ಸಿಕ್ಕಿದ ಸುಳಿವಿನಿಂದ ದೊಡ್ಡ ದುರ್ಘಟನೆಯೊಂದು ಅದೃಷ್ಟವಶಾತ್ ತಪ್ಪಿದಂತೆ ಆಗಿದೆ.
ಇತ್ತೀಚಿನ ದಿನಗಳಲ್ಲಿ ಬಹಳ ದೊಡ್ಡ ಪತ್ತೆ ಎಂದೇ ಹೇಳಬಹುದಾದ ಈ ಪ್ರಕರಣದಲ್ಲಿ ಎಟಿಎಸ್ ಹಾಗೂ ಉತ್ತರ ಪ್ರದೇಶದ ಪೊಲೀಸರು ಇಬ್ಬರು ಶಂಕಿತ ಭಯೋತ್ಪಾದಕರಾದ ಮೊಹಮ್ಮದ್ ಉಜ್ಜೈರ್ ಹಾಗೂ ಮೊಹಮ್ಮದ್ ಶಹನಾವಾಜ್ ನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರಿಬ್ಬರೂ ಉತ್ತರಪ್ರದೇಶದ ಸಹರಣಾಪುರದವರು ಎಂದು ಹೇಳಲಾಗಿದೆ. ಅಧಿಕಾರಿಗಳ ಪ್ರಕಾರ ಅಗಸ್ಟ್ 25 ರ ರಾತ್ರಿ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಅನುಮಾನಾಸ್ಪದ ವಸ್ತುಗಳ ಸಾಗಾಟ ನಡೆಯುತ್ತಿದೆ ಎನ್ನುವ ವಿಷಯ ಗುಪ್ತಚರ ದಳಕ್ಕೆ ಗೊತ್ತಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಎಟಿಎಸ್ ಹಾಗೂ ಯುಪಿ ಪೊಲೀಸರು ಬಾಗಪತ್ ಎಂಬಲ್ಲಿ ಚೆಕ್ ಪಾಯಿಂಟ್ ನಲ್ಲಿ ಬಸ್ಸನ್ನು ಶೋಧಿಸಿದ್ದಾರೆ. ಆಗ ಲಗೇಜ್ ಇಡುವ ಸ್ಥಳಗಳಲ್ಲಿ ಅನೇಕ ಪ್ಯಾಕೇಟುಗಳು ಪತ್ತೆಯಾಗಿವೆ. ಅದರ ಒಳಗೆ ವಿಸ್ಫೋಟಕಗಳು ಇರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.
ಈ ವಿಸ್ಫೋಟಕಗಳನ್ನು ಸಾಮಾನ್ಯ ಪ್ರಯಾಣಿಕರ ಲಗೇಜುಗಳ ನಡುವೆ ಅಡಗಿಸಿ ಇಡಲಾಗಿತ್ತು. ಈ ಮೂಲಕ ಯಾರಿಗೂ ಅನುಮಾನ ಬರದ ರೀತಿಯಲ್ಲಿ ಷಡ್ಯಂತ್ರ ರೂಪಿಸಲಾಗಿತ್ತು. ಉಜ್ಜೈರ್ ಹಾಗೂ ಶಹನಾವಾಜ್ ನನ್ನು ಎಟಿಎಸ್ ವಿಚಾರಿಸುತ್ತಿದ್ದರೆ, ಬಸ್ಸನ್ನು ಸೀಝ್ ಮಾಡಿ ಅದರ ನಿರ್ವಾಹಕ ಹಾಗೂ ಚಾಲಕನನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಉತ್ತರ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚರ ವಹಿಸಲಾಗಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಈ ಷಡ್ಯಂತ್ರವನ್ನು ಭೇದಿಸಿದ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಶ್ಲಾಘನೆ ಸಲ್ಲಿಸಿದ್ದಾರೆ. ನೂರಾರು ಅಮಾಯಕ ಜೀವಗಳನ್ನು ಉಳಿಸಿದ ಎಲ್ಲರಿಗೂ ಅಭಿನಂದನೆ ಎಂದು ಹೇಳಿದ ಅವರು ಯುಪಿ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಯಾವತ್ತೂ ಜಯಗಳಿಸುತ್ತದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search