• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..

Tulunadu News Posted On August 26, 2025
0


0
Shares
  • Share On Facebook
  • Tweet It

ದೊಡ್ಡ ವಿಸ್ಫೋಟವೊಂದನ್ನು ಉತ್ತರ ಪ್ರದೇಶ ಪೊಲೀಸರು ಬಯಲಿಗೆ ಎಳೆದಿದ್ದಾರೆ. ಮೊಹಮ್ಮಸ್ ಉಜ್ಜೈರ್ ಹಾಗೂ ಶಹನಾವಾಜ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರಪ್ರದೇಶದ ಬಾಗಪತ್ ನಿಂದ ಡೆಲ್ಲಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಈ ಸ್ಫೋಟಕಗಳನ್ನು ಅಡಗಿಸಿ ತೆಗೆದುಕೊಂಡು ಹೋಗುವ ಸಂಚು ನಡೆದಿತ್ತು. ಉತ್ತರ ಪ್ರದೇಶದ ಪೊಲೀಸರು ಹಾಗೂ ದೇಶದ ಭಯೋತ್ಪಾದಕ ನಿಗ್ರಹ ಪಡೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಿಂದ ಇದು ಬೆಳಕಿಗೆ ಬಂದಿದೆ. ಗುಪ್ತಚರ ಇಲಾಖೆಯ ಉನ್ನತ ಮೂಲಗಳಿಗೆ ಸಿಕ್ಕಿದ ಸುಳಿವಿನಿಂದ ದೊಡ್ಡ ದುರ್ಘಟನೆಯೊಂದು ಅದೃಷ್ಟವಶಾತ್ ತಪ್ಪಿದಂತೆ ಆಗಿದೆ.
ಇತ್ತೀಚಿನ ದಿನಗಳಲ್ಲಿ ಬಹಳ ದೊಡ್ಡ ಪತ್ತೆ ಎಂದೇ ಹೇಳಬಹುದಾದ ಈ ಪ್ರಕರಣದಲ್ಲಿ ಎಟಿಎಸ್ ಹಾಗೂ ಉತ್ತರ ಪ್ರದೇಶದ ಪೊಲೀಸರು ಇಬ್ಬರು ಶಂಕಿತ ಭಯೋತ್ಪಾದಕರಾದ ಮೊಹಮ್ಮದ್ ಉಜ್ಜೈರ್ ಹಾಗೂ ಮೊಹಮ್ಮದ್ ಶಹನಾವಾಜ್ ನನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರಿಬ್ಬರೂ ಉತ್ತರಪ್ರದೇಶದ ಸಹರಣಾಪುರದವರು ಎಂದು ಹೇಳಲಾಗಿದೆ. ಅಧಿಕಾರಿಗಳ ಪ್ರಕಾರ ಅಗಸ್ಟ್ 25 ರ ರಾತ್ರಿ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಅನುಮಾನಾಸ್ಪದ ವಸ್ತುಗಳ ಸಾಗಾಟ ನಡೆಯುತ್ತಿದೆ ಎನ್ನುವ ವಿಷಯ ಗುಪ್ತಚರ ದಳಕ್ಕೆ ಗೊತ್ತಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಎಟಿಎಸ್ ಹಾಗೂ ಯುಪಿ ಪೊಲೀಸರು ಬಾಗಪತ್ ಎಂಬಲ್ಲಿ ಚೆಕ್ ಪಾಯಿಂಟ್ ನಲ್ಲಿ ಬಸ್ಸನ್ನು ಶೋಧಿಸಿದ್ದಾರೆ. ಆಗ ಲಗೇಜ್ ಇಡುವ ಸ್ಥಳಗಳಲ್ಲಿ ಅನೇಕ ಪ್ಯಾಕೇಟುಗಳು ಪತ್ತೆಯಾಗಿವೆ. ಅದರ ಒಳಗೆ ವಿಸ್ಫೋಟಕಗಳು ಇರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.
ಈ ವಿಸ್ಫೋಟಕಗಳನ್ನು ಸಾಮಾನ್ಯ ಪ್ರಯಾಣಿಕರ ಲಗೇಜುಗಳ ನಡುವೆ ಅಡಗಿಸಿ ಇಡಲಾಗಿತ್ತು. ಈ ಮೂಲಕ ಯಾರಿಗೂ ಅನುಮಾನ ಬರದ ರೀತಿಯಲ್ಲಿ ಷಡ್ಯಂತ್ರ ರೂಪಿಸಲಾಗಿತ್ತು. ಉಜ್ಜೈರ್ ಹಾಗೂ ಶಹನಾವಾಜ್ ನನ್ನು ಎಟಿಎಸ್ ವಿಚಾರಿಸುತ್ತಿದ್ದರೆ, ಬಸ್ಸನ್ನು ಸೀಝ್ ಮಾಡಿ ಅದರ ನಿರ್ವಾಹಕ ಹಾಗೂ ಚಾಲಕನನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಉತ್ತರ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚರ ವಹಿಸಲಾಗಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಈ ಷಡ್ಯಂತ್ರವನ್ನು ಭೇದಿಸಿದ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಶ್ಲಾಘನೆ ಸಲ್ಲಿಸಿದ್ದಾರೆ. ನೂರಾರು ಅಮಾಯಕ ಜೀವಗಳನ್ನು ಉಳಿಸಿದ ಎಲ್ಲರಿಗೂ ಅಭಿನಂದನೆ ಎಂದು ಹೇಳಿದ ಅವರು ಯುಪಿ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಯಾವತ್ತೂ ಜಯಗಳಿಸುತ್ತದೆ ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search