• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!

Tulunadu News Posted On August 30, 2025
0


0
Shares
  • Share On Facebook
  • Tweet It

ಭಾರತದಲ್ಲಿ ಬೀದಿನಾಯಿಗಳ ಹಾವಳಿ ಸಿಕ್ಕಾಪಟ್ಟೆ ಜಾಸ್ತಿಯಾಗಿ ದಾರಿಹೋಕರಿಗೆ ಕಚ್ಚಿ ಹೊಲಿಗೆಗಳನ್ನು ಹಾಕಿಸಿಕೊಂಡು ನಂತರ ಅವರು ಅನುಭವಿಸುವ ಕಥೆಗಳ ಬಗ್ಗೆ ಎಷ್ಟೇ ಸುದ್ದಿಗಳನ್ನು ಮಾಡಿದರೂ ಇಂತಹ ಘಟನೆಗಳು ನಿಲ್ಲುವುದು ಮಾತ್ರ ಕಾಣಿಸುತ್ತಿಲ್ಲ. ಇದಕ್ಕೆ ದೇಶದ ಯಾವ ಪ್ರದೇಶಗಳು ಕೂಡ ಹೊರತಾಗಿಲ್ಲ. ಬೆಂಗಳೂರಿನಲ್ಲಿಯೂ ಬೀದಿನಾಯಿಗಳ ಸಮಸ್ಯೆ ಕಡಿಮೆ ಏನಲ್ಲ. ಆದರೆ ಇವುಗಳ ನಸೀಬು ಏನೆಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಬೀದಿನಾಯಿಗಳ ಬಗ್ಗೆ ಸಿಕ್ಕಾಪಟ್ಟೆ ಪ್ರೀತಿ ಇಟ್ಟುಕೊಂಡಿದೆ. ಅವುಗಳಿಗೆ ಬಾಡೂಟದ ವ್ಯವಸ್ಥೆಯನ್ನು ಮಾಡಿದ ಬಗ್ಗೆ ಈಗಾಗಲೇ ನಿಮಗೆ ವಿಷಯ ಗೊತ್ತಿರುತ್ತದೆ. ಅದಕ್ಕಾಗಿ ಬಿಬಿಎಂಪಿ ಪ್ರತ್ಯೇಕವಾದ ನಿಧಿಯನ್ನು ಕೂಡ ಮೀಸಲಿಟ್ಟಿದೆ. ಈಗ ಬಿಬಿಎಂಪಿ ಒಂದು ಹೆಜ್ಜೆ ಮುಂದೆ ಹೋಗಿದೆ. ಬೀದಿನಾಯಿಗಳಿಗೆ ವಸತಿ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ.

ಬೆಂಗಳೂರಿನ ಬೀದಿನಾಯಿಗಳ ಹೆಚ್ಚಳದಿಂದ ಅವುಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದು ವಿಧಾನಸೌಧಕ್ಕೂ ತಟ್ಟಿದೆ. ಇದರ ನಿಯಂತ್ರಣಕ್ಕೆ ಶೆಲ್ಟರ್ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಕುರಿತು ವಿಧಾನಸಭೆ ಕಾರ್ಯಾಲಯದಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್ ” ವಿಧಾನಸೌಧ ಆವರಣದಲ್ಲಿ 53 ನಾಯಿಗಳಿವೆ. ಅವುಗಳು ಎಲ್ಲೆಂದರಲ್ಲಿ ಓಡಾಡುತ್ತಿವೆ. ಕೆಲವೊಮ್ಮೆ ವಿಧಾನಸೌಧದೊಳಗೂ ಬರುತ್ತವೆ. ಶಾಸಕರು ವಾಕಿಂಗ್ ಗೆ ಬಂದರೆ, ಶಾಲಾ ಮಕ್ಕಳು ಸೇರಿ ಸಾರ್ವಜನಿಕರು ವಿಧಾನಸೌಧ ವೀಕ್ಷಣೆಗೆ ಬಂದಾಗ ಭಯಪಡುವಂತಾಗುತ್ತಿದೆ. ಹೀಗಾಗಿ ಎಲ್ಲೆಂದರಲ್ಲಿ ಓಡಾಡುವುದನ್ನು ತಡೆಯಲು ಅವುಗಳ ಓಡಾಟಕ್ಕೆ ವಿಧಾನಸೌಧದ ಆವರಣದಲ್ಲಿನ ಒಂದು ಸ್ಥಳವನ್ನು ನಿಗದಿ ಮಾಡಲು ನಿರ್ಧರಿಸಲಾಗಿದೆ” ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಬೀದಿನಾಯಿಗಳ ಸಮಸ್ಯೆ ಈಗ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಬುಡಕ್ಕೂ ಬಂದಿರುವುದು ಅದರ ಗಂಭೀರತೆಯ ಅರಿವು ಸರಕಾರಕ್ಕೆ ಆಗಿದೆ ಎನ್ನುವುದು ದಿಟ. ಈ ಹಂತದಲ್ಲಿ ಸರಕಾರ ಕೇವಲ ವಿಧಾನಸೌಧದ ಆವರಣದಲ್ಲಿ ಉಂಟಾಗಿರುವ ಬೀದಿನಾಯಿಗಳ ಉಪಟಳದ ಬಗ್ಗೆ ಮಾತ್ರ ಕ್ರಮ ಕೈಗೊಳ್ಳುತ್ತದೆಯೋ ಅಥವಾ ರಾಜ್ಯದ ಬೀದಿನಾಯಿಗಳ ಒಟ್ಟು ಸಮಸ್ಯೆಯ ಬಗ್ಗೆ ಏನಾದರೂ ಮಾಡುತ್ತದೆಯೋ ಎನ್ನುವುದನ್ನು ಕಾಲವೇ ಉತ್ತರಿಸಬೇಕು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
  • Popular Posts

    • 1
      ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • 2
      ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!

  • Privacy Policy
  • Contact
© Tulunadu Infomedia.

Press enter/return to begin your search