• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!

Tulunadu News Posted On August 30, 2025
0


0
Shares
  • Share On Facebook
  • Tweet It

ಭಾರತದಲ್ಲಿ ಬೀದಿನಾಯಿಗಳ ಹಾವಳಿ ಸಿಕ್ಕಾಪಟ್ಟೆ ಜಾಸ್ತಿಯಾಗಿ ದಾರಿಹೋಕರಿಗೆ ಕಚ್ಚಿ ಹೊಲಿಗೆಗಳನ್ನು ಹಾಕಿಸಿಕೊಂಡು ನಂತರ ಅವರು ಅನುಭವಿಸುವ ಕಥೆಗಳ ಬಗ್ಗೆ ಎಷ್ಟೇ ಸುದ್ದಿಗಳನ್ನು ಮಾಡಿದರೂ ಇಂತಹ ಘಟನೆಗಳು ನಿಲ್ಲುವುದು ಮಾತ್ರ ಕಾಣಿಸುತ್ತಿಲ್ಲ. ಇದಕ್ಕೆ ದೇಶದ ಯಾವ ಪ್ರದೇಶಗಳು ಕೂಡ ಹೊರತಾಗಿಲ್ಲ. ಬೆಂಗಳೂರಿನಲ್ಲಿಯೂ ಬೀದಿನಾಯಿಗಳ ಸಮಸ್ಯೆ ಕಡಿಮೆ ಏನಲ್ಲ. ಆದರೆ ಇವುಗಳ ನಸೀಬು ಏನೆಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಬೀದಿನಾಯಿಗಳ ಬಗ್ಗೆ ಸಿಕ್ಕಾಪಟ್ಟೆ ಪ್ರೀತಿ ಇಟ್ಟುಕೊಂಡಿದೆ. ಅವುಗಳಿಗೆ ಬಾಡೂಟದ ವ್ಯವಸ್ಥೆಯನ್ನು ಮಾಡಿದ ಬಗ್ಗೆ ಈಗಾಗಲೇ ನಿಮಗೆ ವಿಷಯ ಗೊತ್ತಿರುತ್ತದೆ. ಅದಕ್ಕಾಗಿ ಬಿಬಿಎಂಪಿ ಪ್ರತ್ಯೇಕವಾದ ನಿಧಿಯನ್ನು ಕೂಡ ಮೀಸಲಿಟ್ಟಿದೆ. ಈಗ ಬಿಬಿಎಂಪಿ ಒಂದು ಹೆಜ್ಜೆ ಮುಂದೆ ಹೋಗಿದೆ. ಬೀದಿನಾಯಿಗಳಿಗೆ ವಸತಿ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ.

ಬೆಂಗಳೂರಿನ ಬೀದಿನಾಯಿಗಳ ಹೆಚ್ಚಳದಿಂದ ಅವುಗಳಿಂದ ಕಡಿತಕ್ಕೊಳಗಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದು ವಿಧಾನಸೌಧಕ್ಕೂ ತಟ್ಟಿದೆ. ಇದರ ನಿಯಂತ್ರಣಕ್ಕೆ ಶೆಲ್ಟರ್ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಕುರಿತು ವಿಧಾನಸಭೆ ಕಾರ್ಯಾಲಯದಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್ ” ವಿಧಾನಸೌಧ ಆವರಣದಲ್ಲಿ 53 ನಾಯಿಗಳಿವೆ. ಅವುಗಳು ಎಲ್ಲೆಂದರಲ್ಲಿ ಓಡಾಡುತ್ತಿವೆ. ಕೆಲವೊಮ್ಮೆ ವಿಧಾನಸೌಧದೊಳಗೂ ಬರುತ್ತವೆ. ಶಾಸಕರು ವಾಕಿಂಗ್ ಗೆ ಬಂದರೆ, ಶಾಲಾ ಮಕ್ಕಳು ಸೇರಿ ಸಾರ್ವಜನಿಕರು ವಿಧಾನಸೌಧ ವೀಕ್ಷಣೆಗೆ ಬಂದಾಗ ಭಯಪಡುವಂತಾಗುತ್ತಿದೆ. ಹೀಗಾಗಿ ಎಲ್ಲೆಂದರಲ್ಲಿ ಓಡಾಡುವುದನ್ನು ತಡೆಯಲು ಅವುಗಳ ಓಡಾಟಕ್ಕೆ ವಿಧಾನಸೌಧದ ಆವರಣದಲ್ಲಿನ ಒಂದು ಸ್ಥಳವನ್ನು ನಿಗದಿ ಮಾಡಲು ನಿರ್ಧರಿಸಲಾಗಿದೆ” ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಬೀದಿನಾಯಿಗಳ ಸಮಸ್ಯೆ ಈಗ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಬುಡಕ್ಕೂ ಬಂದಿರುವುದು ಅದರ ಗಂಭೀರತೆಯ ಅರಿವು ಸರಕಾರಕ್ಕೆ ಆಗಿದೆ ಎನ್ನುವುದು ದಿಟ. ಈ ಹಂತದಲ್ಲಿ ಸರಕಾರ ಕೇವಲ ವಿಧಾನಸೌಧದ ಆವರಣದಲ್ಲಿ ಉಂಟಾಗಿರುವ ಬೀದಿನಾಯಿಗಳ ಉಪಟಳದ ಬಗ್ಗೆ ಮಾತ್ರ ಕ್ರಮ ಕೈಗೊಳ್ಳುತ್ತದೆಯೋ ಅಥವಾ ರಾಜ್ಯದ ಬೀದಿನಾಯಿಗಳ ಒಟ್ಟು ಸಮಸ್ಯೆಯ ಬಗ್ಗೆ ಏನಾದರೂ ಮಾಡುತ್ತದೆಯೋ ಎನ್ನುವುದನ್ನು ಕಾಲವೇ ಉತ್ತರಿಸಬೇಕು.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search